ಆ್ಯಪ್ನಗರ

ಗಣಿ ಜಿಲ್ಲೆ ರಾಜೀನಾಮೆ ಪರ್ವಕ್ಕೆ ಬೆದರಿದ ಬಿಜೆಪಿ, ‘ಬುಡಾ’ ಅಧ್ಯಕ್ಷರ ನೇಮಕ ರದ್ದು

​ದಮ್ಮೂರ್‌ ಶೇಖರ್‌ ನೇಮಕಾತಿಯನ್ನು ವಿರೋಧಿಸಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.

Vijaya Karnataka Web 29 Oct 2019, 8:53 pm

ಬೆಂಗಳೂರು: ಗಣಿ ಜಿಲ್ಲೆಯ ಸರಣಿ ರಾಜೀನಾಮೆಗೆ ರಾಜ್ಯ ಬಿಜೆಪಿ ನಾಯಕರು ಬೆದರಿದಂತೆ ಕಂಡು ಬಂದಿದ್ದು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕ ಏಕಾಏಕಿ ರದ್ದಾಗಿದೆ.
Vijaya Karnataka Web DammurShekar


ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಅಧ್ಯಕ್ಷರಾಗಿ ನೇಮಿಸಲಾಗಿದ್ದ ದಮ್ಮೂರ್‌ ಶೇಖರ್ ನೇಮಕಾತಿ ಆದೇಶವನ್ನು ಅನಿವಾರ್ಯ ಕಾರಣಗಳಿಂದ ಹಿಂಪಡೆಯಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಜಿಲ್ಲಾಧ್ಯಕ್ಷ ಸೇರಿ 48 ಪದಾಧಿಕಾರಿಗಳ ರಾಜೀನಾಮೆ

ದಮ್ಮೂರ್‌ ಶೇಖರ್‌ ನೇಮಕಾತಿಯನ್ನು ವಿರೋಧಿಸಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮಾತ್ರವಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆಯನ್ನೂ ಸಲ್ಲಿಸಿದ್ದರು. ಅವರೊಂದಿಗೆ ಇನ್ನೂ 48 ಜನ ಪದಾಧಿಕಾರಿಗಳೂ ರಾಜೀನಾಮೆ ಸಲ್ಲಿಸುವ ಬೆದರಿಕೆ ಹಾಕಿದ್ದರು. ಇದೀಗ ಅವರೆಲ್ಲ ರಾಜೀನಾಮೆ ನೀಡುವ ಮೊದಲೇ ದಮ್ಮೂರ್‌ ಶೇಖರ್‌ ನೇಮಕ ರದ್ದಾಗಿದೆ.

ಈ ಮೂಲಕ ರಾಜೀನಾಮೆ ಪರ್ವ ಆರಂಭಿಸುವುದಾಗಿ ಬಿಜೆಪಿ ಪದಾಧಿಕಾರಿಗಳು ಘೋಷಿಸಿದ ಬೆನ್ನಲ್ಲೇ ಸ್ವತಃ ಮುಖ್ಯಮಂತ್ರಿಗಳು ತಮ್ಮ ನಡೆಯಿಂದ ಒಂದು ಹೆಜ್ಜೆ ಹಿಂದೆ ಸರಿದಿದ್ದಾರೆ. ಜಿಲ್ಲೆಯ ಬಿಜೆಪಿ ಮುಖಂಡರ ಒತ್ತಡಕ್ಕೆ ಸಿಎಂ ಮಣಿದಿದ್ದು, ಇದರೊಂದಿಗೆ ಶಾಸಕ ಸೋಮಶೇಖರರೆಡ್ಡಿ ಮತ್ತವರ ಬಳಗಕ್ಕೆ ಹಿನ್ನಡೆಯದಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ