ಆ್ಯಪ್ನಗರ

ಸಂಪುಟ ವಿಸ್ತರಣೆಗೆ ಪರ್ಯಾಯ ಸಭೆ

ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ವಲಯದಲ್ಲಿ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಸಂಭಾವ್ಯರ ಆಯ್ಕೆ ಬಗ್ಗೆ ...

Vijaya Karnataka 28 Jul 2019, 5:00 am
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ವಲಯದಲ್ಲಿ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಸಂಭಾವ್ಯರ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ.
Vijaya Karnataka Web bjp cabinet
ಸಂಪುಟ ವಿಸ್ತರಣೆಗೆ ಪರ್ಯಾಯ ಸಭೆ


ಸಂಘ ಪರಿವಾರದ ಹಿರಿಯರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಸಿಎಂ ಯಡಿಯೂರಪ್ಪ ಸಂಪುಟದಲ್ಲಿ ಪಕ್ಷ ನಿಷ್ಠರು, ಕಳಂಕರಹಿತರು ಹಾಗೂ ಆಡಳಿತಾತ್ಮಕ ಅನುಭವ ಹೊಂದಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಜಾತಿ ಹಾಗೂ ಪ್ರದೇಶಾಧರಿತ ಹಳೆಯ ಆಯ್ಕೆ ಪದ್ಧತಿ ಬಗ್ಗೆ ಈ ಸಭೆಯಲ್ಲಿ ಅಪಸ್ವರ ವ್ಯಕ್ತವಾಗಿದೆ. ಎರಡು ಹಾಗೂ ಅದಕ್ಕಿಂತ ಹೆಚ್ಚು ಬಾರಿ ಆಯ್ಕೆಗೊಂಡ ಪ್ರತಿಯೊಬ್ಬ ಶಾಸಕರ ಹಿನ್ನೆಲೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಅದೇ ರೀತಿ ಶನಿವಾರ ಸಂಜೆ ಸಿಎಂ ಯಡಿಯೂರಪ್ಪ ನಿವಾಸದಲ್ಲೂ ಈ ಬಗ್ಗೆ ಸಭೆ ನಡೆಸಲಾಗಿದೆ. ವಿಶ್ವಾಸಮತ ಪ್ರಕ್ರಿಯೆ ಮುಗಿದ ಬಳಿಕ ಜುಲೈ 30ರಂದು ಯಡಿಯೂರಪ್ಪ ದಿಲ್ಲಿಗೆ ತೆರಳಿ ಸಂಪುಟ ರಚನೆ ಸಂಬಂಧ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ವಲಸಿಗರು ಹಾಗೂ ಮೂಲ ನಿವಾಸಿಗರ ಪೈಕಿ ಎಷ್ಟು ಜನರಿಗೆ ಆದ್ಯತೆ ನೀಡಬೇಕು ಎಂಬ ಚರ್ಚೆಯೂ ನಡೆದಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ