ಆ್ಯಪ್ನಗರ

ಸಂಪುಟ ವಿಸ್ತರಣೆ ವಿಳಂಬದಿಂದ ನೋವಾಗಿದೆ; ಬಿ.ಸಿ ಪಾಟೀಲ್ ಬೇಸರ

ಸಂಪುಟ ವಿಸ್ತರಣೆ ವಿಳಂಬ ಆಗಿರುವುದು ನೋವಾಗಿದೆ ಎಂದು ನೂತನ ಬಿಜೆಪಿ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಸಿಎಂ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Vijaya Karnataka Web 24 Jan 2020, 4:43 pm
ಬೆಂಗಳೂರು: ಸಂಪುಟ ವಿಸ್ತರಣೆ ವಿಳಂಬದಿಂದ ನೋವಾಗಿದೆ ಎಂದು ನೂತನ ಬಿಜೆಪಿ ಶಾಸಕ ಬಿ.ಸಿ ಪಾಟೀಸ್‌ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪಾಟೀಲ್‌ ಎಲ್ಲಾ 17 ಜನರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಸಿಎಂ ನೀಡಿದ್ದರು, ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
Vijaya Karnataka Web bjp cabinet expansion b c patil reaction
ಸಂಪುಟ ವಿಸ್ತರಣೆ ವಿಳಂಬದಿಂದ ನೋವಾಗಿದೆ; ಬಿ.ಸಿ ಪಾಟೀಲ್ ಬೇಸರ


ಸಂಪುಟ ವಿಸ್ತರಣೆ ವಿಳಂಬ ಆಗಿರುವುದು ನಿಜ. ನನಗೆ ಸಚಿವ ಸ್ಥಾನ ನೀಡಲು ವಿಳಂಬ ಆಗುತ್ತಿರುವುದರಿಂದ ರಾಜ್ಯದ ಜನರಿಗೆ ನನಗಿಂತಲೂ ಹೆಚ್ಚು ನೋವಾಗಿದೆ. ಈ ವಿಚಾರವಾಗಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇವೆ ಎಂದರು.

ಇದೇ ವೇಳೆ ಮಾತನಾಡಿದ ಅನರ್ಹ ಶಾಸಕ ಆರ್. ಶಂಕರ್, 17 ಜನರ ತ್ಯಾಗದಿಂದ ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕು. ನನ್ನನ್ನು ಮಂತ್ರಿ ಮಾಡುವ ವಿಶ್ವಾಸವಿದೆ. ಒಂದು ವೇಳೆ ಆಗದಿದ್ದರೆ ಮುಂದಿನ ಹೆಜ್ಜೆಯ ಕುರಿತಾಗಿ ಯೋಚನೆಯನ್ನು ಮಾಡುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ; ಸೋತವರಿಗಿಲ್ಲ ಮಂತ್ರಿಗಿರಿ! - ಬಿಎಸ್‌ವೈ ಸ್ಪಷ್ಟನೆ

ಈಗಾಗಲೇ ಬೆಂಗಳೂರಿಗೆ ಆಗಮಿಸಿರುವ ಸಿಎಂ ಇನ್ನು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂಬ ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಬಿಎಸ್‌ವೈ ಹೇಳಿರುವುದು ಕುತೂಹಲ ಸೃಷ್ಟಿಸಿದೆ.

ಗೆದ್ದ 11 ನೂತನ ಶಾಸಕರ ಜೊತೆಗೆ ಸೋತ ಎಚ್‌. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡದಿರುವ ಸಿಎಂ ನಿರ್ಧಾರ ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ತಿರುವಿಗೆ ಕಾರಣವಾಗುತ್ತದೆ ಎಂಬುವುದು ಕುತೂಹಲ ಸೃಷ್ಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ