ಆ್ಯಪ್ನಗರ

ಗೌಡರ ವಿಷ ಸೇವನೆ ಹೇಳಿಕೆ ವೀಡಿಯೊ: ಜೆಡಿಎಸ್ ಕಾರ್ಯಕರ್ತರಿಗೆ ಬಿಜೆಪಿ ತಿರುಗೇಟು

ಈ ಹಿಂದಿನ ಚುನಾವಣೆಯೊಂದರಲ್ಲಿ ಪರಮೇಶ್ವರ್ ಕೊಟ್ಟಿರುವ ಹೇಳಿಕೆಯೊಂದು ರಾಜ್ಯ ರಾಜಕಾರಣದಲ್ಲಿ ಸುದ್ದು ಮಾಡುತ್ತಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Vijaya Karnataka Web 14 Feb 2019, 2:36 pm
ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ, ಸಿಎಂ ಕುಮಾರಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಪ್ರೀತಂ ಗೌಡ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ಪ್ರಕರಣ ಸಂಬಂಧ ಬಿಜೆಪಿಯವರು ಡಿಸಿಎಂ ಜಿ.ಪರಮೇಶ್ವರ್ ಅವರ ಹಳೇ ವೀಡಿಯೋವೊಂದನ್ನು ಟ್ವಿಟರ್‌ನಲ್ಲಿ ಪ್ರಕಟಿಸುವ ಮೂಲಕ ದೋಸ್ತಿ ಸರಕಾರಕ್ಕೆ ಕೌಂಟರ್ ಕೊಟ್ಟಿದೆ.
Vijaya Karnataka Web jds


ಈ ಹಿಂದಿನ ಚುನಾವಣೆಯೊಂದರಲ್ಲಿ ಪರಮೇಶ್ವರ್ ಕೊಟ್ಟಿರುವ ಹೇಳಿಕೆಯೊಂದು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಡಿಸಿಎಂ ಪರಮೇಶ್ವರ್ ಅವರು, '2013ರ ಚುನಾವಣೆಯಲ್ಲಿ ದೊಡ್ಡಗೌಡರು ಒಂದು ಮಾತು ಹೇಳಿದ್ದರು. ಅದರ ಪೇಪರ್ ಕಟ್ಟಿಂಗ್ ಕೂಡ ಇಟ್ಟುಕೊಂಡಿದ್ದೇನೆ. ಕರ್ನಾಟಕದಲ್ಲಿ ಜನತಾ ದಳ ಅಧಿಕಾರಕ್ಕೆ ಬರುತ್ತೆ. ನಾವೇ ಅಧಿಕಾರಕ್ಕೆ ಬರುತ್ತೇವೆ. ಒಂದು ವೇಳೆ ಬರದಿದ್ದರೆ, ವಿಷ ತೆಗೆದುಕೊಂಡು ಸಾಯುತ್ತೇನೆ ಎನ್ನುವ ಹೇಳಿಕೆ ನೀಡಿದ್ದರು. ನಾನು ಕಾದು ನೋಡುತ್ತಾನೇ ಇದ್ದೀನಿ, ಇವತ್ತು ತೆಗೆದುಕೊಳ್ತಾರೆ, ನಾಳೆ ತೆಗೆದುಕೊಳ್ತಾರೆ. ಆದರೆ, ತೆಗೆದುಕೊಳ್ತಾನೆ ಇಲ್ಲ' ಎಂದು ವ್ಯಂಗ್ಯವಾಡಿದ್ದರು.


ಇದೇ ವೀಡಿಯೋವನ್ನು ಟ್ವಿಟರ್‌ನಲ್ಲಿ ಪ್ರಕಟಿಸಿರುವ ಬಿಜೆಪಿ, ದೇವೇಗೌಡರು ವಿಷ ಸೇವಿಸುವುದನ್ನು ಕಾಯುತ್ತಿದ್ದರಂತೆ ಡಿ.ಸಿ.ಎಂ ಪರಮೇಶ್ವರ್. ಅವರ ಮನೆಯ ಮೇಲೂ ಕಲ್ಲು ತೂರುತ್ತಾರಾ ಜೆ.ಡಿ.ಎಸ್ ನ ಸ್ವಾಭಿಮಾನಿ ಕಾರ್ಯಕರ್ತರು? ಎಂದು ಪ್ರಶ್ನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ