ಆ್ಯಪ್ನಗರ

ಬಿಜೆಪಿ ಕಚೇರಿಗೆ ದಿಢೀರ್ ಎಂಟ್ರಿ ಕೊಟ್ಟ ಅರವಿಂದ ಬೆಲ್ಲದ..! ಅರುಣ್ ಸಿಂಗ್ ಭೇಟಿಗೆ ಸಿಗಲಿಲ್ಲ ಅವಕಾಶ..?

ಎರಡು ಮೂರು ಜನ ಬಹಿರಂಗ ಹೇಳಿಕೆ ನೀಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅರುಣ್ ಸಿಂಗ್ ಹೇಳಿಕೆ ನೀಡಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಅರವಿಂದ ಬೆಲ್ಲದ ಶುಕ್ರವಾರ ದಿಢೀರ್ ಆಗಿ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 18 Jun 2021, 1:47 pm

ಹೈಲೈಟ್ಸ್‌:

  • ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದ ಶಾಸಕ ಅರವಿಂದ ಬೆಲ್ಲದ
  • ತಮ್ಮ ಫೋನ್ ಟ್ಯಾಪ್ ಆಗಿದೆ, ಕೆಲವರು ಫಾಲೋ ಮಾಡ್ತಿದ್ದಾರೆ ಎಂದು ಆರೋಪಿಸಿದ್ದರು
  • ಅರುಣ್ ಸಿಂಗ್ ಅವರ ಹೇಳಿಕೆ ಬಳಿಕ ಬಿಜೆಪಿ ಕಚೇರಿಗೆ ಬಂದ ಬೆಲ್ಲದ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bellad
ಬಿಜೆಪಿ ಕಚೇರಿಗೆ ದಿಢೀರ್ ಎಂಟ್ರಿ ಕೊಟ್ಟ ಅರವಿಂದ ಬೆಲ್ಲದ..! ಅರುಣ್ ಸಿಂಗ್ ಭೇಟಿಗೆ ಸಿಗಲಿಲ್ಲ ಅವಕಾಶ..?
ಬೆಂಗಳೂರು: ರಾಜ್ಯ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಬಿಜೆಪಿ ಕಚೇರಿಗೆ ದಿಢೀರ್ ಎಂಟ್ರಿ ಕೊಟ್ಟು ಗಮನ ಸೆಳೆದರು. ಆದ್ರೆ ಬೆಲ್ಲದ್‌ ಅವರಿಗೆ ಅರುಣ್‌ ಸಿಂಗ್ ಭೇಟಿಗೆ ಅವಕಾಶ ಸಿಗಲಿಲ್ಲ ಎನ್ನಲಾಗಿದೆ.
ಗುರುವಾರವೇ ಶಾಸಕರ ಭೇಟಿಗೆ ಅವಕಾಶ ನೀಡಲಾಗಿತ್ತಾದರೂ, ಆಗ ಅರವಿಂದ ಬೆಲ್ಲದ ಬಂದಿರಲಿಲ್ಲ. ಅಷ್ಟೇ ಅಲ್ಲ, ಫೋನ್ ಟ್ಯಾಪಿಂಗ್ ಆರೋಪ ಕೂಡಾ ಮಾಡಿದ್ದರು. ಇದೀಗ ಶುಕ್ರವಾರ ಮಧ್ಯಾಹ್ನದ ವೇಳೆಗೆ ಶಾಸಕ ಅರವಿಂದ ಬೆಲ್ಲದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಆಗಮಿಸಿದರು. ಆದ್ರೆ, ಬೆಲ್ಲದ ಅವರು ಆಗಮಿಸಿದ ಕೆಲವೇ ನಿಮಿಷಗಳಲ್ಲಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಿಂದ ನಿರ್ಗಮಿಸಿದರು. ಮೂಲಗಳ ಪ್ರಕಾರ ಅರವಿಂದ ಬೆಲ್ಲದ ‌ಅವರಿಗೆ ಅರುಣ್ ಸಿಂಗ್ ಭೇಟಿಗೆ ಅವಕಾಶ ಸಿಗಲಿಲ್ಲ ಎಂದು ತಿಳಿದುಬಂದಿದೆ.

ಫೋನ್ ಟ್ಯಾಪಿಂಗ್ ಆರೋಪ ಅಷ್ಟೇ ಅಲ್ಲ, ಕೆಲವರು ನನ್ನನ್ನು ಫಾಲೋ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದ ಬೆಲ್ಲದ ಅವರು, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿಗೆ ಅಧಿಕೃತ ದೂರು ನೀಡಿದ್ದರು.

ಅರವಿಂದ ಬೆಲ್ಲದ ಮಾಡಿರುವ ಈ ಆರೋಪ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇದೀಗ ದಿಢೀರ್ ಆಗಿ ಅರವಿಂದ ಬೆಲ್ಲದ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಆಗಮಿಸಿದ್ದಾರೆ.‌ ಬೆಲ್ಲದ ಅವರ ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಅರವಿಂದ ಬೆಲ್ಲದ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದರು.‌ ಹಲವು ಬಾರಿ ದೆಹಲಿಗೂ ತೆರಳಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದು ಬಿಎಸ್ ಯಡಿಯೂರಪ್ಪ ಆಪ್ತರ ಅಸಮಾಧಾನಕ್ಕೂ ಕಾರಣವಾಗಿತ್ತು.

ಅರವಿಂದ ಬೆಲ್ಲದ ದಿಲ್ಲಿ'ದಂಡ'ಯಾತ್ರೆ; ನಾಯಕತ್ವ ಬದಲಾವಣೆ ದುಸ್ಸಾಹಸ, ಉಸ್ತುವಾರಿ ಕುರಿತೂ ಅಪಸ್ವರ!
ಇದರ ನಡುವೆ ಫೋನ್ ಟ್ಯಾಪಿಂಗ್ ಆರೋಪವನ್ನು ಕೂಡಾ ಬೆಲ್ಲದ ಅವರು ಮಾಡಿದ್ದರು. ಯುವರಾಜ್ ಎಂಬ ವ್ಯಕ್ತಿಯಿಂದ ಫೋನ್ ಕರೆ ಬರುತ್ತಿದೆ ಎಂಬ ಆರೋಪ ಮಾಡಿದ್ದರು. ಸ್ವತಃ ಆಡಳಿತ ಪಕ್ಷದ ಶಾಸಕನೇ ಮಾಡಿದ್ದ ಈ ಆರೋಪ, ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು.

ಅರುಣ್ ಸಿಂಗ್ ಭೇಟಿ ಮಾಡದ ಯತ್ನಾಳ್, ಬೆಲ್ಲದ; ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ 51 ಶಾಸಕರು
ಅರುಣ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ಎರಡು ಮೂರು ಜನ ಬಹಿರಂಗ ಹೇಳಿಕೆ ನೀಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅವರ ಹೇಳಿಕೆಗಳ ಕುರಿತಾಗಿ ಎಲ್ಲ ಮಾಹಿತಿಗಳನ್ನು ಸಂಗ್ರಹ ಮಾಡುತ್ತಿದ್ದೇವೆ ಎಂದಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅರವಿಂದ ಬೆಲ್ಲದ ಶುಕ್ರವಾರ ದಿಢೀರ್ ಆಗಿ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ