ಆ್ಯಪ್ನಗರ

ಸಿಟಿ ರವಿಗೆ ಹೇಳೋದಿಷ್ಟೆ, ನೀತಿ,‌ ನಿಯಮ, ನೈತಿಕತೆ ನಿಮ್ಮ ಪಕ್ಷಕ್ಕೆ ಇಲ್ಲ: ಗುಂಡೂರಾವ್‌

ಹದಿನೈದು ಶಾಸಕರನ್ನು‌ ಮೂರು ದಿನದಲ್ಲಿ‌ ಮಂತ್ರಿ‌ ಮಾಡ್ತಿವಿ ಅಂತ ನಂಬಿಸಿದ್ರು. ಈಗ ಅವರ ಸ್ಥಿತಿ ಏನಾಗಿದೆ, ಹೀಗೆ ಮಾಡೋದೆ ಬಿಜೆಪಿ ಕೆಲಸ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರವ್‌ ವ್ಯಂಗ್ಯವಾಡಿದರು.

Vijaya Karnataka Web 12 Nov 2019, 10:50 am
ವಿಜಯಪುರ: ಮಾಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಹೊಂದಾಣಿಕೆ ವಿಚಾರದ ಬಗ್ಗೆ ಕಮೆಂಟ್ ಮಾಡಲ್ಲ, ಅದು ಎಐಸಿಸಿ ಮಟ್ಟದಲ್ಲಿ ಚರ್ಚೆ ಮಾಡಿದ್ದಾರೆ. ಬಿಜೆಪಿ ಸರ್ವಾಧಿಕಾರಿ ಧೋರಣೆ ಇರುವ ಪಕ್ಷ. ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಿ ಬಿಜೆಪಿ ಈಗ ಮೈತ್ರಿ ಮುರಿದುಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿನ ವಿಚಾರಗಳನ್ನು ಕುರಿತು ಎಐಸಿಸಿ ತೀರ್ಮಾನ ಮಾಡಲಿದೆ ಎಂದು ಕೆಪಿಸಿಸಿ‌ ಅಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದ್ದಾರೆ.
Vijaya Karnataka Web Dinesh Gundu Rao


ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಳಂಬಕ್ಕೆ ಸಂಬಂಧಿಸಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ದಿನೇಶ್‌ ಗುಂಡೂರಾವ್‌, ಕೆಲವು ಕ್ಷೇತ್ರಗಳಲ್ಲಿ ಸುಪ್ರೀಂ ಕೋರ್ಟ್ ನಿರ್ಣಯ ನೋಡಿ ತೀರ್ಮಾನ ಮಾಡಲಾಗುವುದು. ಸುಪ್ರೀಂ ತೀರ್ಪು ಬಂದ ಬಳಿಕ ಅಂದು ರಾತ್ರಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಡಲಾಗುವುದು. ನಿನ್ನೆ ನಡೆದ ಸಭೆಯಲ್ಲಿ ಯಾವ ಮಾತಿನ ಚಕಮಕಿ ಆಗಿಯೇ ಇಲ್ಲ. ಅದು ಊಹಾಪೂಹ,‌ ಕಪೋಕಲ್ಪಿತ ವಿಚಾರಗಳನ್ನು ಹಾಕಲಾಗುತ್ತಿದೆ ಎಂದರು.

ಸಿದ್ದರಾಮಯ್ಯ ಹೇಳುವಂತೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುವವರು ಯಾರು?

ಮಿಡಿಯಾಗಳು ಹೆಡಲೈನ್ಗೋಸ್ಕರ ಇಂತಹ ವಿಚಾರಗಳನ್ನು ಹಾಕಿದರೆ ನಾವು ಉತ್ತರ ಕೊಡೋವುದಕ್ಕೆ ಕಷ್ಟ ಆಗುತ್ತದೆ. ಬಿಜೆಪಿಗೆ ಇನ್ನಷ್ಟು ಶಾಸಕರು ಬರುವುದಾಗಿ ಸಿಟಿ ರವಿ ಹೇಳಿದ್ದಾರೆ. ನಾನು ಸಿಟಿ ರವಿಗೆ ಹೇಳೋದಿಷ್ಟೆ. ನೀತಿ,‌ ನಿಯಮ, ನೈತಿಕತೆ ನಿಮ್ಮ ಪಕ್ಷಕ್ಕೆ ಇಲ್ಲ. ಬರೀ ಪಕ್ಷಾಂತರ ಮಾಡಿಸೋದೆ ನಿಮ್ಮ ಕೆಲಸ‌ ಆಗಿದೆ. ನಿಮ್ಮ ಉಡಾಫೆ ಮಾತಿಗೆ ಜನ ನಿಮ್ಮ‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹದಿನೈದು ಶಾಸಕರನ್ನು‌ ಮೂರು ದಿನದಲ್ಲಿ‌ ಮಂತ್ರಿ‌ ಮಾಡ್ತಿವಿ ಅಂತ ನಂಬಿಸಿದ್ರು. ಈಗ ಅವರ ಸ್ಥಿತಿ ಏನಾಗಿದೆ, ಹೀಗೆ ಮಾಡೋದೆ ಬಿಜೆಪಿ ಕೆಲಸ. ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ, ಬರಿ ಮಾತಾಡ್ತಾರೆ. ಇವತ್ತಿನ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣವಾಗಿದೆ ಎಂದು ಗುಂಡೂರಾವ್‌ ಬಿಜೆಪಿ ವಿರುದ್ಧ ಹರಿಹಾಯ್ದರು.

ಶರದ್‌ ಪವಾರ್‌ ತೋಡಿದ ಖೆಡ್ಡಾಗೆ ಬಿದ್ದ ಬಿಜೆಪಿ, ಶಿವಸೇನೆಯೆಂಬ ಮದಗಜಗಳು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ