ಆ್ಯಪ್ನಗರ

ಅನರ್ಹರಿಗೆ ಹಣ ಹಂಚಿದ ಆರೋಪ; ಕುಮಾರಸ್ವಾಮಿ ವಿರುದ್ಧ ಬಿಜೆಪಿ ದೂರು

ಅನರ್ಹ ಶಾಸಕರಿಗೆ ಹಣ ಹಂಚಲಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಾಡಿದ ಆರೋಪದ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಎಚ್‌ಡಿಕೆ ನಿರಾಧಾರ ಆರೋಪ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Vijaya Karnataka 27 Nov 2019, 8:47 pm
ಬೆಂಗಳೂರು: ನೈಟ್‌ ಕ್ಲಬ್‌, ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಕೋರರಿಂದ ಹಣ ಪಡೆದು ಅನರ್ಹರಿಗೆ ಹಂಚಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
Vijaya Karnataka Web bjp filed complaint against hd kumaraswamy at election commission
ಅನರ್ಹರಿಗೆ ಹಣ ಹಂಚಿದ ಆರೋಪ; ಕುಮಾರಸ್ವಾಮಿ ವಿರುದ್ಧ ಬಿಜೆಪಿ ದೂರು


ಉಪ ಚುನಾವಣೆ ಪ್ರಚಾರದ ವೇಳೆ ಯಾವುದೇ ದಾಖಲೆಗಳಿಲ್ಲದೆ ಕುಮಾರಸ್ವಾಮಿ ಅವರು ಕೀಳುಮಟ್ಟದ ಆಪಾದನೆ ಮಾಡಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ನಿರ್ದೇಶಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿಯಾದ ಬಿಜೆಪಿ ನಿಯೋಗದ ಸದಸ್ಯರು ಒತ್ತಾಯಿಸಿದ್ದಾರೆ.

ಹಾಗೆಯೇ ಪ್ರಧಾನಿ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಗ್ಗೆ ಫೇಸ್‌ಬುಕ್‌ನಲ್ಲಿಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡ ಕೆಪಿಸಿಸಿಯ ಸೈಯದ್‌ ಅಕ್ಬರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

'ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ'; ಜೆಡಿಎಸ್ ಸಮಾವೇಶದಲ್ಲಿ ರೇವಣ್ಣ ಕರೆ !

ಅಲ್ಲದೆ, ಸಿಎಂ ಯಡಿಯೂರಪ್ಪ ಹಾಗೂ ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್‌ ಬಗ್ಗೆ ಆಕ್ಷೇಪಾರ್ಹ ಫೋಟೊ ಹಂಚಿಕೊಂಡ ಕೆಪಿಸಿಸಿಯ ಆರ್ಯವರ್ಧನ ವಿರುದ್ಧ ಕ್ರಮ ಜರುಗಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

'ಅನರ್ಹರು ತಾವು ಅರ್ಹರೆಂದು ಭಾವಿಸಿದ್ದರೆ ಮೆಂಟಲ್‌ ಆಸ್ಪತ್ರೆಗೆ ಹೋಗಲಿ': ರಮೇಶ್ ಕುಮಾರ್

ಡಿಸೆಂಬರ್ 5 ಕ್ಕೆ 15 ವಿಧಾನಸಭಾ ಕ್ಷೇತ್ರಗ ಳ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿದೆ. ಈ ನಡುವೆ ಪ್ರಚಾರ ಭಾಷಣಗಳಲ್ಲೂ , ಸಾಮಾಜಿಕ ಜಾಲತಾಣಗಲ್ಲೂ ಮುಖಂಡರು ಪರಸ್ಪರ ಆರೋಪ, ಪ್ರತ್ಯಾರೋಪ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ