ಆ್ಯಪ್ನಗರ

ಕರ್ನಾಟಕದಲ್ಲಿ ಬಿಜೆಪಿ ಸರಕಾರ: ಕಾದು ನೋಡುವ ತಂತ್ರಕ್ಕೆ ಬಿಜೆಪಿ ಹೈಕಮಾಂಡ್‌ ನಿರ್ಧಾರ?

ಕರ್ನಾಟಕದಲ್ಲಿ ದೋಸ್ತಿ ಸರಕಾರ ಪತನವಾಗಿ ಈಗಾಗಲೇ ಎರಡು ದಿನ ಆಗಿದೆ. ಹೊಸ ಸರಕಾರ ರಚನೆ ಈಗ ಆಗಬೇಕಾಗಿದೆ. ಆದರೆ ಬಿಜೆಪಿ ಹೈಕಮಾಂಡ್‌ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

Vijaya Karnataka Web 25 Jul 2019, 6:15 pm
ಬೆಂಗಳೂರು: ಕರ್ನಾಟಕದಲ್ಲಿ ದೋಸ್ತಿ ಸರಕಾರ ಪತನಗೊಂಡ ನಂತರ ಮುಂದಿನ ಸರಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಆದರೆ ಅದು ಸದ್ಯದ ಮಟ್ಟಿಗೆ ಆಗುವ ಲಕ್ಷಣಗಳು ಗೋಚರಿಸುತ್ತಿಲ್ಲ.
Vijaya Karnataka Web ಬಿಎಸ್‌ವೈ
ಬಿಎಸ್‌ವೈ


ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಸಜ್ಜಾಗಿರುವ ಬಿ.ಎಸ್‌. ಯಡಿಯೂರಪ್ಪಗೆ ಇನ್ನೂ ಗ್ರೀನ್‌ ಸಿಗ್ನಲ್‌ ಬಂದಿಲ್ಲ. ಬಿಜೆಪಿ ಹೈಕಮಾಂಡ್‌ ಇದುವರೆಗೆ ಸಂಸದೀಯ ಮಂಡಳಿ ಸಭೆ ನಡೆಸಿಲ್ಲ. ಇನ್ನೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

ಬಿಜೆಪಿ ವರಿಷ್ಠ ನಾಯಕರಿಂದ ಯಾವುದೇ ನಿರ್ಧಾರ ಹೊರಬಾರದ ಕಾರಣ ರಾಜ್ಯ ಬಿಜೆಪಿ ನಾಯಕರ ನಿಯೋಗ ಈಗ ಹೊಸದಿಲ್ಲಿಯಲ್ಲಿ ಬೀಡುಬಿಟ್ಟಿದ್ದು, ಅಮಿತ್ ಶಾ ಭೇಟಿಗಾಗಿ ಕಾಯುತ್ತಿದೆ. ಆದರೆ ಅಮಿತ್‌ ಶಾ ಈಗ ಲೋಕಸಭೆ ಕಲಾಪದಲ್ಲಿ ಬ್ಯುಸಿಯಾಗಿದ್ದಾರೆ.

ಸಾಮಾನ್ಯವಾಗಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಅಲ್ಲಿನ ನಿರ್ಣಯದ ಮೇಲೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ನಾಯಕನ ನಡೆಯಲಿದೆ. ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸುವ ಪ್ರಕ್ರಿಯೆ ಇದೆ. ಇದು ಬಿಜೆಪಿಯಲ್ಲಿ ನಡೆದುಕೊಂಡು ಬಂದಿರುವ ವಾಡಿಕೆ. ಈಗ ಯಡಿಯೂರಪ್ಪ ಮತ್ತು ರಾಜ್ಯ ನಾಯಕರು ಹೊಸದಿಲ್ಲಿಯಲ್ಲಿ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಗಾಗಿ ಕಾಯುತ್ತಿದ್ದಾರೆ.

ಸಮ್ಮಿಶ್ರ ಸರಕಾರ ಪತನಗೊಂಡು ಎರಡು ದಿನವಾದರೂ ಸರಕಾರ ರಚನೆ ಪ್ರಕ್ರಿಯೆ ಮುಕ್ತಾಯಗೊಂಡಿಲ್ಲ.

ಸಂಖ್ಯಾಬಲದ ಮೇಲೆ ಬಿಜೆಪಿ ಹೈಕಮಾಂಡ್‌ಗೆ ಅನುಮಾನವಿದೆ. ಈಗ ಬಿಜೆಪಿ ಬಳಿ ಇರುವುದು 105. ಪಕ್ಷೇತರ ಶಾಸಕರು ಸೇರಿದರೆ 107. ಬಹುಮತಕ್ಕೆ ಇನ್ನೂ ಆರು ಶಾಸಕರ ಕೊರತೆ ಇರುತ್ತದೆ.

ಅತೃಪ್ತ ಶಾಸಕರ ಬಗ್ಗೆ ಬಿಜೆಪಿ ಹೈಕಮಾಂಡ್‌ಗೆ ಅನುಮಾನವಿದೆ. ಹೀಗಾಗಿ ವಿಳಂಬ ನೀತಿಯನ್ನು ಹೈಕಮಾಂಡ್‌ ಅನುಸರಿಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ