ಆ್ಯಪ್ನಗರ

ರಾಜ್ಯಪಾಲರ ಕಚೇರಿಯನ್ನು ಸ್ವಾರ್ಥಕ್ಕೆ ಬಳಸಿಲ್ಲ: ಕೈಗೆ ಬಿಜೆಪಿ ತಿರುಗೇಟು

ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಬಳಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಆರೋಪಿಸಿದ್ದರು.

Vijaya Karnataka Web 8 Jul 2019, 3:24 pm
ಬೆಂಗಳೂರು: ರಾಜ್ಯಪಾಲರ ಕಚೇರಿಯನ್ನು ಪಕ್ಷದ ಲಾಭಕ್ಕೆ ಬಳಸಿಕೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಆರ್. ಅಶೋಕ್ ಕಾಂಗ್ರೆಸ್‌ಗೆ ತಿರುಗೇಟು ಕೊಟ್ಟಿದ್ದಾರೆ.
Vijaya Karnataka Web Ashok


ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಪಾಲರ ಕಚೇರಿಯನ್ನು ಪಕ್ಷದ ಹಿತಕ್ಕಾಗಿ ಬಳಸುತ್ತಿತ್ತು. ಆದರೆ ಬಿಜೆಪಿ ಹಾಗೆ ಮಾಡುವುದಿಲ್ಲ. ಅಂತ ಸಂಸ್ಕೃತಿ ನಮದಲ್ಲ ಎಂದಿದ್ದಾರೆ.

ಸಮ್ಮಿಶ್ರ ಸರಕಾರದ ಶಾಸಕರ ಕುದುರೆ ವ್ಯಾಪಾರಕ್ಕೆ ಖುದ್ದು ರಾಜ್ಯಪಾಲರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದರು.

ರಾಜೀನಾಮೆ ನೀಡಲು ಹೋದ ಶಾಸಕರ ಜತೆ ರಾಜ್ಯಪಾಲರು ಎರಡು ಗಂಟೆಗಳ ಕಾಲ ಚರ್ಚಿಸುವ ಅಗತ್ಯ ಏನಿತ್ತು. ಪೊಲೀಸ್ ಆಯುಕ್ತರು ಜತೆ ಶಾಸಕರನ್ನು ಕೂರಿಸಿ ಮಾತನಾಡಿದ್ದಾರೆ. ಇವೆಲ್ಲ ಗಮನಿಸಿದರೆ ರಾಜ್ಯಪಾಲರೇ ಸರಕಾರ ಅಸ್ಥಿರ ಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎಂದವರು ದೂರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ