ಆ್ಯಪ್ನಗರ

ನೀವು ಮಾಡುತ್ತಿರುವುದು ಜಾತಿ ರಾಜಕಾರಣವಲ್ಲವೇ..? ಬಿಜೆಪಿಗೆ ಡಿಕೆ ಶಿವಕುಮಾರ್‌ ಪ್ರಶ್ನೆ

ಉಪಚುನಾವಣೆಯಲ್ಲಿ ಜಾತಿ ರಾಜಕಾರಣ ಜೋರಾಗಿದೆ. ಎಲ್ಲ ಪಕ್ಷಗಳು ಜಾತಿ ಕಾರ್ಡ್‌ ಬಳಸುತ್ತಿರುವುದು ಸ್ಪಷ್ಟವಾಗಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ನನ್ನ ವಿರುದ್ಧ ಟೀಕೆ ಮಾಡಲು ಅಶ್ವತ್ಥ್ ನಾರಾಯಣ್, ಅಶೋಕ್, ಸೋಮಶೇಖರ್, ಸಿ.ಟಿ.ರವಿ ಅವರನ್ನು ಬಿಟ್ಟು ಯಾವ ಕಾರ್ಡ್ ಬಳಸುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

Vijaya Karnataka Web 25 Oct 2020, 5:27 pm
ಬೆಂಗಳೂರು: ಉಪಚುನಾವಣೆಯಲ್ಲಿ ನಾನು ಜಾತಿ ಕಾರ್ಡ್ ಬಳಸುತ್ತಿದ್ದೇನೆ ಎಂದು ಆರೋಪ ಮಾಡುತ್ತಿರುವ ಬಿಜೆಪಿ, ನನ್ನ ವಿರುದ್ಧ ಟೀಕೆ ಮಾಡಲು ಅಶ್ವತ್ಥ್ ನಾರಾಯಣ್, ಅಶೋಕ್, ಸೋಮಶೇಖರ್, ಸಿ.ಟಿ.ರವಿ ಅವರನ್ನು ಬಿಟ್ಟು ಯಾವ ಕಾರ್ಡ್ ಬಳಸುತ್ತಿದೆ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Vijaya Karnataka Web bjp is also doing caste politics against me says kpcc president dk shivakumar
ನೀವು ಮಾಡುತ್ತಿರುವುದು ಜಾತಿ ರಾಜಕಾರಣವಲ್ಲವೇ..? ಬಿಜೆಪಿಗೆ ಡಿಕೆ ಶಿವಕುಮಾರ್‌ ಪ್ರಶ್ನೆ


ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನ ಮೇಲೆ ವಾಗ್ದಾಳಿ ನಡೆಸಲು ಮಂತ್ರಿ ಮಂಡಲದಲ್ಲಿರುವ ಒಕ್ಕಲಿಗ ಮುಖಂಡರನ್ನೇ ಬಿಜೆಪಿ ಛೂಬಿಟ್ಟಿದೆ. ಈ ಮೂಲಕ ಒಕ್ಕಲಿಗ ಜಾತಿ ಕಾರ್ಡನ್ನೇ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಪರೋಕ್ಷವಾಗಿ ಬಿ.ಎಸ್.ಯಡಿಯೂರಪ್ಪ ಸರಕಾರಕ್ಕೆ ತಿರುಗೇಟು ನೀಡಿದ್ದಾರೆ.

ಪಕ್ಷ ಬಿಟ್ಟು ಬಿಜೆಪಿಗೆ ಹೋಗಲು. ನಾನು ಕಾರಣ ಎಂದು ಹೇಳಿರುವವರಿಗೆ ಒಳ್ಳೆಯದಾಗಲಿ. ಹಬ್ಬದ ದಿನ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರಿಗೆ ಆದಷ್ಟು ಬೇಗನೆ ಬಡ್ತಿ ಸಿಗಲಿ. ಅವರಿಗೆ ಮಾರ್ಕೆಟ್ ಬೇಕು, ಪ್ರಮೋಷನ್ ಬೇಕು ಎಂದು ನನ್ನ ಬಗ್ಗೆ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ನಮ್ಮ ಬಗ್ಗೆ ಮಾತನಾಡಿದರೆ ಮಾಧ್ಯಮಗಳು ಚೆನ್ನಾಗಿ ಪ್ರಚಾರ ಮಾಡುತ್ತವೆ. ಇಲ್ಲವಾದರೆ ಅವರನ್ನು ತೋರಿಸುವುದಿಲ್ಲ. ಹೀಗಾಗಿ ಅವರು ನನ್ನ ಹಾಗೂ ಸಿದ್ದರಾಮಯ್ಯನವರ ಹೆಸರನ್ನು ಎಲ್ಲೆಲ್ಲಿ ಬಳಸಿಕೊಳ್ಳಬೇಕೋ ಅಲ್ಲಲ್ಲಿ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಯಾರು? ಚುನಾವಣೆ ಬಂದಾಗ ಚರ್ಚೆ ಮಾಡೋಣ ಅಂದ್ರು ಡಿಕೆಶಿ

ಕೆಲವರು ಕಾಂಗ್ರೆಸ್ಸಿಗೆ ಬೀಳುವ ಅಲ್ಪಸಂಖ್ಯಾತರ ಮತಗಳನ್ನು ತಪ್ಪಿಸಲು ಮತದಾರರ ಗುರುತಿನ ಚೀಟಿ ಕಸಿದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಯಾರು ಹೆದರಿಸುತ್ತಿದ್ದಾರೆ ಎಂಬುದರ ಬಗ್ಗೆ ಮತದಾರರೇ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ಎಲ್ಲರೂ ತಮ್ಮ ಜವಾಬ್ದಾರಿ ನಿಭಾಯಿಸುತ್ತಾರೆ
ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಕೆಲವರು ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ಶಿಸ್ತು ಸಮಿತಿ ಸದಸ್ಯ ಕೆ.ಬಿ.ಕೋಳಿವಾಡ ಅವರು ಖಂಡಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಪಕ್ಷದಲ್ಲಿ ಯಾರಿಗೆ ಯಾವ ಜವಾಬ್ದಾರಿ ವಹಿಸಿದ್ದೇವೋ ಅವರು ಆ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಅದರಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಚುನಾವಣೆಯೂ ಬಂದಿಲ್ಲ! ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಸಿದ್ದು ಉತ್ತರ

ಚುನಾವಣೆ ಸಮಯ ಬರಲಿ, ಆಗ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡೋಣ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಬೇಕು. ನಮಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ಈ ಸರ್ಕಾರವನ್ನು ರಾಜ್ಯದ ಜನ ಕಿತ್ತೆಸೆದ ಮೇಲೆ ಆ ಬಗ್ಗೆ ಮಾತನಾಡೋಣ. ಈಗ ಉಪಚುನಾವಣೆ ಬಗ್ಗೆ ಮಾತ್ರ ಮಾತನಾಡೋಣ ಎಂದು ಡಿಕೆಶಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ