ಆ್ಯಪ್ನಗರ

ಬಸನಗೌಡ ಯತ್ನಾಳ್‌ ಕೇಳಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಬೇಕಿತ್ತಾ?: ಈಶ್ವರಪ್ಪ ಫುಲ್‌ ಗರಂ

ದಕ್ಷಿಣ ಕನ್ನಡ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಅಪಸ್ವರಗಳು ಕೇಳಿಬಂದಿದ್ದು, ಕಟೀಲ್‌ಗೆ ಮಂಗಳೂರು ಬಿಟ್ಟು ಬೇರೆ ಗೊತ್ತಿಲ್ಲ ಎಂದು ಬಸನಗೌಡ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ.

Vijaya Karnataka Web 22 Aug 2019, 11:23 am
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್‌ ಕುಮಾರ್‌ ಕಟೀಲ್‌ ಅವರನ್ನು ಆಯ್ಕೆ ಮಾಡಿದ್ದಕ್ಕೆ ಸ್ವಪಕ್ಷದಲ್ಲೇ ಅಪಸ್ವರ ಕೇಳಿಬಂದಿದೆ. ಕಟೀಲ್‌ ಮಂಗಳೂರಿಗಷ್ಟೇ ಸೀಮಿತಗೊಂಡಿದ್ದು, ರಾಜ್ಯಾದ್ಯಂತ ಓಡಾಡಬೇಕು ಎಂದಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Vijaya Karnataka Web KS Eshwarappa


ಮಾಜಿ ಸಿಎಂ ಸದಾನಂದಗೌಡ ಅವರಿಗೂ ಇಂತಹ ಸಲಹೆಯನ್ನು ನೀಡಿದ್ದೆ. ಮಂಗಳೂರಿಂದ ಬೆಂಗಳೂರು ಎಂದರೆ ಸಾಧ್ಯವಿಲ್ಲ. ರಾಜ್ಯಾದ್ಯಂತ ಏನೇನಿದೆಯೆಂದು ತಿಳಿದುಕೊಂಡಿರಬೇಕು ಎನ್ನುವ ಮೂಲಕ ಕಟೀಲ್‌ ಅವರಿಗೆ ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಭಾಗಗಳ ಬಗ್ಗೆ ಏನೂ ಗೊತ್ತಿಲ್ಲ ಎಂದು ನಯವಾಗಿ ಚುಚ್ಚಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರು ಸಚಿವ ಕೆಎಸ್‌ ಈಶ್ವರಪ್ಪ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ರಾಷ್ಟ್ರಾದ್ಯಂತ ಓಡಾಡಿದ್ದಾರೆಯೇ? ಅವರನ್ನು ರಾಷ್ಟ್ರದ ಜನ ಗುರುತಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿರು ಪರಿಚಯ

ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕೇಳಿ ಮಾಡಬೇಕಿತ್ತಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಈ ಮೂಲಕ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ರಾಜ್ಯದ ಕೆಲವು ನಾಯಕರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬುದನ್ನು ಸ್ವತಃ ಈಶ್ವರಪ್ಪನವರೇ ಬಾಯ್ಬಿಟ್ಟಿದ್ದಾರೆ.

ನಳಿನ್ ಕುಮಾರ ಕಟೀಲ್‌ ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅವರಿಗೆ ರಾಜ್ಯದ ಎಲ್ಲಾ ಭಾಗಗಳ ಪರಿಚಯ ಇಲ್ಲದಿದ್ದರೂ ಕಾರ್ಯಕರ್ತರು ಸಾಥ್ ನೀಡಲಿದ್ದಾರೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಹಾರ, ಸ್ಮರಣಿಕೆ ಬೇಡ, ಸಂತ್ರಸ್ತರಿಗೆ ನೆರವಾಗಿ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ