ಆ್ಯಪ್ನಗರ

ಬಿಎಸ್‌ವೈ ಹೊಗಳಿ, ಕಟೀಲ್‌ ತೆಗಳಿದ ಬಿಜೆಪಿ ನಾಯಕ ವಜಾ

ತಾಲೂಕಿನ ಮಂಡಲ ಪ್ರಧಾನ ಕಾರ್ಯದರ್ಶಿ ಶಿವರುದ್ರಯ್ಯ ಕೆ. ಎಂಬುವರು ಸಾಮಾಜಿಕ ಜಾಲತಾಣದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ತೆಗಳಿ ವಿಡಿಯೋ ಹಾಕಿದ್ದರು. ಇವರನ್ನು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಬಿ. ಜ್ಯೋತಿ ಗಣೇಶ್‌ ಉಚ್ಛಾಟಿಸಿದ್ದಾರೆ.

Vijaya Karnataka Web 2 Oct 2019, 8:06 pm
ಕೊರಟಗೆರೆ (ತುಮಕೂರು): ರಾಜ್ಯದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಹೊಗಳಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ತೆಗಳಿದ್ದ ತಾಲೂಕಿನ ಮಂಡಲ ಪ್ರಧಾನ ಕಾರ್ಯದರ್ಶಿ ಶಿವರುದ್ರಯ್ಯ ಕೆ. ಎಂಬುವರನ್ನು ಉಚ್ಛಾಟಿಸಲಾಗಿದೆ.
Vijaya Karnataka Web B S Yediyurappa Nalin Kumar Kateel


ಶಿವರುದ್ರಯ್ಯ ಸಾಮಾಜಿಕ ಜಾಲತಾಣದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ತೆಗಳಿ ವಿಡಿಯೋ ಹಾಕಿದ್ದರು. ಇವರನ್ನು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಬಿ. ಜ್ಯೋತಿ ಗಣೇಶ್‌ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.

ವಿಡಿಯೋ ತುಣುಕಿನಲ್ಲಿ''ಯಡಿಯೂರಪ್ಪ ಮಾಸ್‌ ಲೀಡರ್‌, ಅವರಂತೆ ಜನ ಸಂಘಟನೆ ಮಾಡೋರು ರಾಜ್ಯದಲ್ಲಿ ಯಾರೂ ಇಲ್ಲ. ಯಡಿಯೂರಪ್ಪ ಒಂದು ಗ್ರಾಮಕ್ಕೆ ಹೋದರೂ 5 ಸಾವಿರ ಜನ ಕಾರ್ಯಕರ್ತರು ಸೇರುತ್ತಾರೆ. ಆದರೆ ನಳಿನ್‌ಕುಮಾರ್‌ ಕಟೀಲ್‌ ಬಂದರೆ 5 ಜನರೂ ಸೇರುವುದಿಲ್ಲ. ಯಡಿಯೂರಪ್ಪರಿಗೆ ನೆಮ್ಮದಿಯಿಂದ ಆಡಳಿತ ನಡೆಸಲು ಬಿಡುತ್ತಿಲ್ಲ,'' ಎಂಬುದಾಗಿ ಶಿವರುದ್ರಯ್ಯ ಹೇಳಿದ್ದರು.

'ನಾನು ತಂತಿ ಮೇಲೆ ನಡಿಯುತ್ತಿದ್ದೇನೆ ಎಂಬುದಾಗಿ' ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ನಾನಾ ವ್ಯಾಖ್ಯಾನ ಕೇಳಿ ಬಂದಿತ್ತು. ಹೆಚ್ಚಿನವರು ಯಡಿಯೂರಪ್ಪ ಅವರಿಗೆ ಅಧಿಕಾರ ನಡೆಸಲು ಪಕ್ಷದವರು ಬಿಡುತ್ತಿಲ್ಲ ಎಂಬುದಾಗಿ ಈ ಹೇಳಿಕೆಯನ್ನು ಅರ್ಥೈಸಿದ್ದರು. ಇದೇ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದ ಶಿವರುದ್ರಯ್ಯ ಇದೀಗ ಪಕ್ಷದಿಂದಲೇ ಉಚ್ಛಾಟನೆಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ