ಆ್ಯಪ್ನಗರ

ಅಪರಾಹ್ನ 3:30ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನಾಳೆ ಬಹುಮತ ಸಾಬೀತುಪಡಿಸಲಿರುವ ಸಿಎಂ ಬಿಎಸ್‌ವೈ

ದೋಸ್ತಿ ಸರಕಾರದ ಪತನದ ಬಳಿಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಸೋಮವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ. ಇದಕ್ಕೆ ಮುನ್ನ ಇಂದು ಅಪರಾಹ್ನ ಪಕ್ಷದ ಶಾಸಕರ ಸಭೆ ನಡೆಯಲಿದೆ.

Vijaya Karnataka Web 28 Jul 2019, 9:32 am
ಬೆಂಗಳೂರು: ಇಂದು ಅಪರಾಹ್ನ 3:30ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲ ಶಾಸಕರಿಗೂ ಒಗ್ಗಟ್ಟಾಗಿರುವಂತೆ ಸೂಚಿಸಿರುವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಯಾವುದೇ ಆಮಿಷಗಳಿಗೆ ಒಳಗಾಗದಂತೆ ಸೂಚಿಸಿದ್ದಾರೆ.
Vijaya Karnataka Web B S Yediyurappa


ಸೋಮವಾರ ಬಹುಮತ ಸಾಬೀತುಪಡಿಸುವ ವರೆಗೂ ಎಲ್ಲ ಶಾಸಕರನ್ನೂ ಹೋಟೆಲ್‌ನಲ್ಲಿ ಇರಿಸಲು ನಿರ್ಧರಿಸಲಾಗಿದೆ. ದೋಸ್ತಿ ಸರಕಾರ ಪತನದ ವೇಳೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಿಜೆಪಿ ಸರಕಾರ ಹೇಗೆ ಬಹುಮತ ಸಾಬೀತುಪಡಿಸುತ್ತದೋ ನೋಡೋಣ ಎಂದು ಸವಾಲು ಹಾಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶೇಷ ಎಚ್ಚರ ವಹಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ 105 ಶಾಸಕರನ್ನು ಹೊಂದಿದ್ದು, ಒಬ್ಬ ಪಕ್ಷೇತರ ಶಾಸಕ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಒಟ್ಟು 106 ಸಂಖ್ಯಾಬಲ ಹೊಂದಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ತಿರಸ್ಕಾರದ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ನಾಳೆ ವಿಧಾನಸಭೆ ಕಲಾಪಕ್ಕೆ ಮುನ್ನವೇ ತೀರ್ಮಾನಿಸುವ ಸಾಧ್ಯತೆಯಿದ್ದು, ಮೇಲ್ನೋಟಕ್ಕೆ ಬಿಎಸ್‌ವೈ ಸರಕಾರ ಬಹುಮತ ಸಾಬೀತು ಪಡಿಸುವುದು ನಿಚ್ಚಳವಾಗಿದೆ.

ಬಿಎಸ್‌ವೈಗೆ 18 ಸವಾಲು: ಸ್ವಪಕ್ಷೀಯರ ಹಿತರಕ್ಷಣೆ, ಹೈಕಮಾಂಡ್‌ನ ತೃಪ್ತಿಯ ತಲೆಬಿಸಿ

ಬಹುಮತ ಸಾಬೀತಿನ ಬಳಿಕ ಬಜೆಟ್‌ಗೆ ಅಂಗೀಕಾರ ಪಡೆದುಕೊಳ್ಳಬೇಕಿದ್ದು, ಆ ಬಳಿಕ ಸ್ಪೀಕರ್‌ ರಮೇಶ್ ಕುಮಾರ್ ಕೂಡ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ