ಆ್ಯಪ್ನಗರ

ತಬ್ಲೀಘಿ ಜಮಾತ್‌ ಕುರಿತಾಗಿ ಪೋಸ್ಟ್‌ ಹಾಕಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್, ಸಿ ಟಿ ರವಿ ಗರಂ

ತಬ್ಲೀಘಿ ಜಮಾತ್‌ ಸಂಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಕ್ಕಾಗಿ ಸಚಿವ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 12 Apr 2020, 1:56 pm
ಬೆಂಗಳೂರು: ತಬ್ಲೀಘಿ ಜಮಾತ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ ಶೇರ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಕ್ಕೆ ಸಚಿವ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web ct ravi 1


ಟ್ವಿಟ್ಟರ್‌ನಲ್ಲಿ ಪೊಲೀಸರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಸಿ ಟಿ ರವಿ “ಕೊರೊನ ಸಂಬಂಧ ತಬ್ಲೀಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

ಕೊರೊನಾ ಸಂಕಷ್ಟ: ಮೂರು ತಿಂಗಳ ಬಾಡಿಗೆ ವಿನಾಯಿತಿ ಘೋಷಿಸಿ, ಮೋದಿಗೆ ಎಚ್‌ಡಿಕೆ ಮನವಿ


ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ತಬ್ಲೀಘಿ ಜಮಾತ್‌ ಧಾರ್ಮಿಕ ಸಭೆಯಲ್ಲಿ ಭಾಗಿಯಾದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಇದೇ ಸಂದರ್ಭದಲ್ಲಿ ಕೆಲವರು ಒಂದು ಸಮುದಾಯದ ವಿರುದ್ಧ ವಿವಾದಾತ್ಮಕವಾದ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಹರಿಯಬಿಡುತ್ತಿದ್ದರು.

ಕೊರೊನಾ ವೈರಸ್: ಅಮೆರಿಕದಲ್ಲಿ 40 ಅನಿವಾಸಿ ಭಾರತೀಯರ ಸಾವು!

ಈ ಚರ್ಚೆಯ ಕುರಿತಾಗಿ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಕೊರೊನಾ ವಿಚಾರವಾಗಿ ಒಂದು ಸಮುದಾಯದ ಮೇಲೆ ಆರೋಪ ಮಾಡುವ ಕೆಲಸ ಯಾರಾದರೂ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದರು.

ಇದೀಗ ತಬ್ಲೀಘಿ ಜಮಾತ್‌ ವಿರುದ್ಧ ವಿವಾದಾತ್ಮಕ ಪೋಸ್ಟ್‌ ಹಾಕಿದ ಕಾರಣಕ್ಕಾಗಿ ಬೇಲೂರಿನ ಬಿಜೆಪಿ ಕಾರ್ಯಕರ್ತರೊಬ್ಬರ ವಿರದ್ಧ ಪೊಲೀಸರು ಪ್ರಕರಣ ದಾಖಲಿಸಿರುವುದಕ್ಕೆ ಸಚಿವ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ