ಆ್ಯಪ್ನಗರ

ಸಂಪುಟ ವಿಸ್ತರಣೆ ವಿಳಂಬ: ಬಿಎಸ್‌ವೈ ಭೇಟಿ ಮಾಡಿ ಲಾಬಿ ನಡೆಸುತ್ತಿರುವ ಸಚಿವಾಕಾಂಕ್ಷಿಗಳು

ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದರೂ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದೆ. ಶಾಸಕ ಎಂಪಿ ಕುಮಾರಸ್ವಾಮಿ ಸಚಿವ ಸ್ಥಾನಕ್ಕಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 22 Nov 2020, 10:21 am
ಬೆಂಗಳೂರು: ಸಂಪುಟ ವಿಸ್ತರಣೆ ವಿಳಂಬಗೊಳ್ಳತ್ತಿದ್ದರೂ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶಾಸಕರು ಲಾಬಿ ನಡೆಸುತ್ತಿದ್ದಾರೆ. ಸಿಎಂ ಕಾವೇರಿ ನಿವಾಸಕ್ಕೆ ಮೂಡುಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಭೇಟಿ ನೀಡಿ ಮಾತುಕತೆ ನಡೆಸಿದರು.
Vijaya Karnataka Web MP Kumaraswamy


ಇನ್ನು ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಬಿಎಸ್‌ವೈ ಭರವಸೆ ನೀಡಿದ್ದಾರೆ. ಆದರೆ ಸಂಪುಟ ವಿಸ್ತರಣೆಗೆ ವರಿಷ್ಠರಿಂದ ಯಾವುದೇ ಗ್ರೀನ್ ಸಿಗ್ನಲ್‌ ಸಿಕ್ಕಿಲ್ಲ. ಈ ನಡುವೆಯೂ ಸಂಪುಟಕ್ಕೆ ಸೇರಲು ಹಲವು ಶಾಸಕರು ತುದಿಕಾಲಲ್ಲಿ ನಿಂತಿದ್ದಾರೆ.

ಗ್ರಾಮಪಂಚಾಯತ್ ಚುನಾವಣೆ, ಹಳ್ಳಿ ಜನರ ಮನ ಗೆಲ್ಲಲು ಬಿಜೆಪಿ ರಣತಂತ್ರ

ಸದ್ಯ ಒಟ್ಟು 7 ಸ್ಥಾನಗಳು ಬಾಕಿ ಉಳಿದಿವೆ. ಈ ಪೈಕಿ ಐದು ಸ್ಥಾನಗಳನ್ನು ವಲಸಿಗರಿಗೆ ನೀಡಲೇ ಬೇಕಾದ ಒತ್ತಡದಲ್ಲಿ ಬಿಎಸ್‌ವೈ ಇದ್ದಾರೆ. ಉಳಿದ ಎರಡು ಸ್ಥಾನಗಳಿಗೆ ಮೂಲ ಬಿಜೆಪಿಗರಲ್ಲಿ ಸಾಕಷ್ಟು ಆಕಾಂಕ್ಷಿಗಳು ಇದ್ದಾರೆ.

ಅದರಲ್ಲೂ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಈ ಹಿಂದೆಯೂ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು.ಈ ಹಿಂದೆ ಸಂಪುಟ ವಿಸ್ತರಣೆ ಆದ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದರು. ಆದರೆ ಮಂತ್ರಿಗಿರಿ ದೊರಕಿಲ್ಲ.

ಇದೀಗ ಮತ್ತೆ ಲಾಬಿ ಶುರು ಮಾಡಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಪರಿಶೀಲನೆ ನಡೆಸುತ್ತೇನೆ ಎಂದು ಬಿಎಸ್‌ವೈ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ