ಆ್ಯಪ್ನಗರ

ಯು.ಟಿ ಖಾದರ್ ದೇಶದ್ರೋಹಿ! ರೇಣುಕಾಚಾರ್ಯ ಹೇಳಿಕೆಗೆ ಕೈ ಶಾಸಕರು ಗರಂ

ಶಾಸಕ ಯು.ಟಿ ಖಾದರ್‌ ಅವರನ್ನು ದೇಶದ್ರೋಹಿ ಎಂದು ಕರೆದ ಎಂಪಿ ರೇಣುಕಾಚಾರ್ಯ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ರೇಣುಕಾಚಾರ್ಯ ಹೇಳಿಕೆಗೆ ಕ್ಷಮೆಯಾಚನೆ ಮಾಡುವಂತೆ ಅವರು ಒತ್ತಾಯಿಸಿದರು.

Vijaya Karnataka Web 19 Feb 2020, 5:51 pm
ಬೆಂಗಳೂರು: ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ದೇಶದ್ರೋಹಿ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವಿನ ಜಟಾಪಟಿಗೆ ಕಾರಣವಾಯಿತು.
Vijaya Karnataka Web bjp mla mp renukacharya called ut khader is anti national
ಯು.ಟಿ ಖಾದರ್ ದೇಶದ್ರೋಹಿ! ರೇಣುಕಾಚಾರ್ಯ ಹೇಳಿಕೆಗೆ ಕೈ ಶಾಸಕರು ಗರಂ


ಮಂಗಳೂರು ಗೋಲಿಬಾರ್ ಘಟನೆಯ ಕುರಿತಾಗಿ ಯುಟಿ ಖಾದರ್ ಸದನದಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ಹೋದಾಗ ಬಿರಿಯಾನಿ ತಿಂದಿದ್ದರು ಎಂದು ಹೇಳಿಕೆ ನೀಡಿದರು. ಈ ಹೇಳಿಕೆ ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತು.

‘ಪಾಕಿಸ್ತಾನದಲ್ಲಿ ಪ್ರಧಾನಿ ಮೋದಿ ಬಿರಿಯಾನಿ ತಿಂದಿದ್ದಾರೆ’ ಖಾದರ್ ಮಾತಿಗೆ ಸದನದಲ್ಲಿ ಕೋಲಾಹಲ

ಇದಕ್ಕೆ ಪ್ರತಿಕ್ರಿಯಿಸಿದ ಎಂ.ಪಿ ರೇಣುಕಾಚಾರ್ಯ ಯು.ಟಿ ಖಾದರ್‌ ಅವರು ದೇಶದ್ರೋಹಿಗಳು ಎಂದರು. ರೇಣುಕಾಚಾರ್ಯ ಹೇಳಿಕೆಗೆ ಕಾಂಗ್ರೆಸ್‌ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಕೂಡಲೇ ಕ್ಷಮೆಯಾಚನೆ ಮಾಡುವಂತೆ ಒತ್ತಾಯಿಸಿದರು.

ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮುಕಿ ನಡೆಯಿತು. ಕ್ಷಮೆಯಾಚನೆಗೆ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರೂ ರೇಣುಕಾಚಾರ್ಯ ಅದಕ್ಕೆ ಒಪ್ಪಲಿಲ್ಲ. ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರೇಣುಕಾಚಾರ್ಯ ನೀಡಿದ ಹೇಳಿಕೆಯನ್ನು ಕಡತದಿಂದ ತೆಗೆದುಹಾಕುವಂತೆ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ