ಆ್ಯಪ್ನಗರ

ಬಿಎಸ್‌ವೈಯನ್ನು ಭೇಟಿಯಾದ ಕತ್ತಿ, ಕಮಲದಲ್ಲಿ ಬಂಡಾಯ ಶಮನದ ಪ್ರಯತ್ನ!

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಬಂಡಾಯ ಶಾಸಕ ಉಮೇಶ್ ಕತ್ತಿ ಭೇಟಿಯಾಗುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ ಕಾರಣಕ್ಕಾಗಿ ಬಂಡಾಯದ ಬಾವುಟ ಹಾರಿಸಿದ್ದ ಕತ್ತಿ ಜೊತೆಗೆ ಬಿಎಸ್‌ವೈ ಮಾತುಕತೆ ನಡೆಸಿದ್ದಾರೆ.

Vijaya Karnataka Web 3 Jun 2020, 3:01 pm
ಬೆಂಗಳೂರು: ಕಮಲದಲ್ಲಿ ತಲೆಧೋರಿದ್ದ ಬಂಡಾಯವನ್ನು ಶಮನ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಸಚಿವ ಸ್ಥಾನ ಸಿಗಲಿಲ್ಲ ಎಂದು ಬಂಡಾಯದ ಬಾವುಟ ಹಾರಿಸಿದ್ದ ಉಮೇಶ್ ಕತ್ತಿ ಬುಧವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
Vijaya Karnataka Web umesh katti


ಗೃಹ ಕಚೇರಿ ಕೃಷ್ಣಾದಲ್ಲಿ ಬಿಎಸ್‌ವೈ ಅವರನ್ನು ಭೇಟಿಯಾದ ಉಮೇಶ್ ಕತ್ತಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಚಿವ ಸ್ಥಾನದ ವಿಚಾರವಾಗಿ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ರಾಜ್ಯಸಭಾ ಚುನಾವಣೆ: ದೇವೇಗೌಡರ ಸ್ಪರ್ಧೆಗೆ ಕೆ.ಎಚ್‌ ಮುನಿಯಪ್ಪ ಬೆಂಬಲ

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಕೆಲ ದಿನಗಳ ಹಿಂದೆ ಪ್ರತ್ಯೇಕ ಸಭೆಯನ್ನು ನಡೆಸಿದ್ದರು. ಸುಮಾರು 20 ಶಾಸಕರು ಕತ್ತಿ ಮನೆಯಲ್ಲಿ ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದರು.

ಕತ್ತಿ ಬಂಡಾಯ ಬಿಜೆಪಿ ಪಾಳಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಚಿವ ಸ್ಥಾನ, ಸಹೋದರನಿಗೆ ರಾಜ್ಯಸಭಾ ಸ್ಥಾನ ಸಿಗದಿದ್ದರೆ ಬಂಡಾಯ ಮುಂದುವರಿಸುವ ಸೂಚನೆಯನ್ನು ನೀಡಿದ್ದರು. ಇವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಾ ಸಾಥ್ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬುಧವಾರ ಬಿಎಸ್‌ವೈ ಅವರನ್ನು ಕತ್ತಿ ಜೊತೆಗೆ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಸ್ಥಾನವನ್ನು ನೀಡುವ ಭರವಸೆಯನ್ನು ಸಿಎಂ ಬಿಎಸ್‌ವೈ ನೀಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ