ಆ್ಯಪ್ನಗರ

ಸಿದ್ದು ಪಟ್ಟುಗಳ ನೆನಪಿಸಿದ ಬಿಜೆಪಿ: ನಿಮ್ಮ ಅಖಾಡ ರೆಸಾರ್ಟ್‌, ಕುಸ್ತಿಪಟುಗಳು ಆನಂದ್‌ಸಿಂಗ್‌, ಗಣೇಶ್‌

ಕಾಂಗ್ರೆಸ್‌ನೊಳಗೆ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನ ಬೇಕೇ? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ. ''ಪಕ್ಷದೊಳಗಿನ ಭಿನ್ನಮತಕ್ಕೆ ಬಿಜೆಪಿಯನ್ನು ದೂರುವ ಕಾಂಗ್ರೆಸ್‌ನವರ ನಿಜ ಬಣ್ಣ ಬಯಲಾಯ್ತಲ್ಲಾ..

Vijaya Karnataka 20 Jan 2019, 8:45 pm
ಬೆಂಗಳೂರು : ಕಾಂಗ್ರೆಸ್‌ ಶಾಸಕರ ಬಡಿದಾಟ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸದ್ದು ಮಾಡಿದೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಕಾಂಗ್ರೆಸ್‌ನೊಳಗೆ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನ ಬೇಕೇ? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ. ''ಪಕ್ಷದೊಳಗಿನ ಭಿನ್ನಮತಕ್ಕೆ ಬಿಜೆಪಿಯನ್ನು ದೂರುವ ಕಾಂಗ್ರೆಸ್‌ನವರ ನಿಜ ಬಣ್ಣ ಬಯಲಾಯ್ತಲ್ಲಾ..!'' ಎಂದು ಬಿಜೆಪಿ ಟ್ವಿಟರ್‌ನಲ್ಲಿ ಕಾಲೆಳೆದಿದೆ.


ಕೆಲದಿನಗಳ ಹಿಂದೆ ಬಿಜೆಪಿಯ ಆಪರೇಷನ್‌ ಕಮಲ ಪ್ರಸ್ತಾಪಿಸಿದ್ದ ಸಿದ್ದರಾಮಯ್ಯ ಅವರು ''ಬಿಜೆಪಿ ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ನಾವೇನೂ ಕೈಕಟ್ಟಿ ಕೂತಿಲ್ಲ. ರಾಜಕೀಯ ಅಖಾಡದಲ್ಲಿ ನಾವೂ ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು'' ಎಂದು ಟ್ವೀಟ್‌ ಮಾಡಿದ್ದರು.

ಈ ಟ್ವೀಟ್‌ ಪ್ರಸ್ತಾಪಿಸಿ ಸಿದ್ದರಾಮಯ್ಯ ಅವರ ಕಾಲೆಳೆಯುವ ಕೆಲಸವನ್ನು ಈಗ ಬಿಜೆಪಿ ಮಾಡಿದೆ. ''ಓ ಸಿದ್ದರಾಮಯ್ಯನವರೇ, ನೀವು ಹೇಳಿದ ಅಖಾಡ -ಈಗಲ್ಟನ್‌ ರೆಸಾರ್ಟ್‌. ಕುಸ್ತಿಪಟುಗಳು -ಆನಂದ್‌ಸಿಂಗ್‌ ಮತ್ತು ಗಣೇಶ್‌ ಎಂಬುದು ಗೊತ್ತಾಯ್ತು'' ಎಂದು ಟ್ವಿಟರ್‌ನಲ್ಲಿ ಬಿಜೆಪಿ ವ್ಯಂಗ್ಯವಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ