ಆ್ಯಪ್ನಗರ

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪ್ರತಾಪ್ ಸಿಂಹ ! ಕಾರಣ ಇಲ್ಲಿದೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಡಿ ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸದಾ ವಾಗ್ದಾಳಿ ನಡೆಸುತ್ತಿರುವ ರಾಜಕೀಯ ವಿರೋಧಿ ನಾಯಕರೊಬ್ಬರ ಪರವಾಗಿ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿರುವುದು ಕುತೂಹಕ ಕೆರಳಿಸಿದೆ.

Vijaya Karnataka Web 18 Feb 2020, 11:15 am
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್‌ ಸಿಂಹ ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಜಕೀಯ ವಿರೋಧಿಯೂ ಆಗಿರುವ ಸಿದ್ದರಾಮಯ್ಯರನ್ನು “ಸಾಹೇಬರು” ಎಂದು ಕರೆದು ಅವರ ಸಾಧನೆಗಳನ್ನು ಕೊಂಡಾಡಿದ್ದಾರೆ.
Vijaya Karnataka Web bjp mp pratap simha appreciated congress leader siddaramaiah
ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪ್ರತಾಪ್ ಸಿಂಹ ! ಕಾರಣ ಇಲ್ಲಿದೆ


ಮೈಸೂರಿನ ಜಯದೇವ ಆಸ್ಪತ್ರೆಯ ಕಟ್ಟಡ ಹಾಗೂ ವ್ಯವಸ್ಥೆಯ ಕುರಿತಾಗಿ ಟ್ವೀಟ್‌ ಮಾಡಿದ ಪ್ರತಾಪ್ ಸಿಂಹ ಅದಕ್ಕೆ ಕಾರಣಕರ್ತರಾದ ಸಿದ್ದರಾಮಯ್ಯ ಅವರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.

“ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆ ಸೇರಿದ್ದು,ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ. 168 ಕೋಟಿ ಕೊಟ್ಟು ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬ್ರಿಗೆ, ಉತ್ತಮ ಸೇವೆ ನೀಡುತ್ತಿರುವ ಡಾ. ಮಂಜುನಾಥ್ ಧನ್ಯವಾದಗಳು” ಎಂದು ಟ್ವೀಟ್‌ ಮಾಡಿರುವುದು ಗಮನಸೆಳೆದಿದೆ.

ಹಾಲು ತುಪ್ಪದ ದಿನವೇ ಗೂಟದ ಕಾರು ನೆನಪಾಯ್ತು: ಸಂಸದ ಪ್ರತಾಪ್‌ ಸಿಂಹ ಕುಹುಕ


'ಮೋದಿ ಬೈದ್ರೆ ದೇವರನ್ನ ಬೈದಂಗೆ' ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಪ್ರತಾಪ್‌ ಸಿಂಹ ಟ್ವೀಟ್ ಸಾಕಷ್ಟು ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಸದಾ ಕಿಡಿಕಾರುತ್ತಿರುವ ಪ್ರತಾಪ್ ಸಿಂಹ ಸೈದ್ದಾಂತಿಕ ವಿರೋಧಿ ನಾಯಕರ ಕೆಲಸ ಕಾರ್ಯಗಳನ್ನು ರಾಜಕೀಯ ಮರೆತು ಹೊಗಳಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮತ್ತೆ ಕೆಲವರು ದಿಢೀರ್ ಆಗಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೊಗಳಿರುವುದಕ್ಕೆ ಕಾರಣವೇನು ಎಂದು ಕಾಲೆಳೆದಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಹಿಂಸಾಚಾರ ಹಾಗೂ ಪೊಲೀಸ್‌ ಗೋಲಿಬಾರ್‌ ಸಂದರ್ಭದಲ್ಲಿ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಆ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿಬಿದ್ದಿದ್ದ ಸಂಸದ ಪ್ರತಾಪ್‌ಸಿಂಹ, ಸಿದ್ದರಾಮಯ್ಯ ಸೃಷ್ಟಿಸಿದ ಮರಿಟಿಪ್ಪುಗಳೇ ಮಂಗಳೂರು ಗಲಭೆಗೆ ಕಾರಣ ಎಂದು ಗುಡುಗಿರುವುದನ್ನು ಇಲ್ಲಿ ಸ್ಮರಿಸಬಹುದು.

ಪ್ರತಾಪ್ ಸಿಂಹ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಎಚ್‌.ಸಿ ಮಹದೇವಪ್ಪ "2018 ರ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಹೇಳಿಕೊಂಡು ಶವ ರಾಜಕೀಯ ಮಾಡಿಕೊಂಡು ಅಪಪ್ರಚಾರ ಮಾಡಿದ್ದ ಬಿಜೆಪಿ ಮುಖಂಡರು ನಮ್ಮ ಸರ್ಕಾರದ ಅಭಿವೃದ್ಧಿಯ ಕುರಿತು ಈಗ ಸತ್ಯವನ್ನು ಹೇಳ ತೊಡಗಿದ್ದು ಆತ್ಮವಂಚನೆಯಿಂದ ನಡೆದುಕೊಳ್ಳುತ್ತಿದ್ದಾರೆ. ಪ್ರತಾಪ್ ಸಿಂಹ ಟ್ವೀಟ್‌ ಬಗ್ಗೆ ಸಚಿವ ಸಿ.ಟಿ ರವಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಏನು ಹೇಳುತ್ತಾರೆ ಎಂಬ ಕುತೂಹಲ ನನಗಿದೆ" ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ