ಆ್ಯಪ್ನಗರ

Savarkar | ಕಾಂಗ್ರೆಸ್ಸಿಗರಿಗೆ ಸಾವರ್ಕರ್ ಪುಸ್ತಕ ಕೊಡುವ ಅಭಿಯಾನ ಪ್ರಾರಂಭಿಸಿದ್ದೇವೆ: ಎಂ.ಪಿ.ರೇಣುಕಾಚಾರ್ಯ

ವಿಧಾನಸೌಧದಲ್ಲಿ ಶುಕ್ರವಾರ ‌ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಯಾರೂ ಸಮರ್ಥಿಸಿಕೊಳ್ಳಲಿಲ್ಲ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದದ್ದು ಬಿಜೆಪಿ ಕಾರ್ಯಕರ್ತರಲ್ಲ. ಕಾಂಗ್ರೆಸ್ ಕಾರ್ಯಕರ್ತರೇ ಬಿಜೆಪಿಗೆ ಕೆಟ್ಟ ಹೆಸರು ತರಲು ಈ ರೀತಿ ಮಾಡಿದ್ದಾರೆ ಎಂದರು. ರಾಹುಲ್ ಗಾಂಧಿ ಬಂದಾಗ ಡಿಕೆಶಿ, ಸಿದ್ದರಾಮಯ್ಯ ಬಲವಂತವಾಗಿ ಅಪ್ಪಿಕೊಂಡರು. ರಾಹುಲ್ ಹೋದ ನಂತರ ಅವರಿಬ್ಬರ ನಡುವಿನ ಅಂತರ ಜಾಸ್ತಿ ಆಗಿದೆ ಎಂದರು‌. ಸಾವರ್ಕರ್ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ ಅವನತಿ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 19 Aug 2022, 4:54 pm

ಹೈಲೈಟ್ಸ್‌:

  • 'ಸಿದ್ದರಾಮಯ್ಯ ಕಾರಿಗೆ ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ'
  • ರಾಹುಲ್ ಗಾಂಧಿ ಬಂದಾಗ ಡಿಕೆಶಿ, ಸಿದ್ದರಾಮಯ್ಯ ಬಲವಂತವಾಗಿ ಅಪ್ಪಿಕೊಂಡರು
  • ಕಾಂಗ್ರೆಸ್ ಮುಖಂಡರಿಗೆ ಸಾವರ್ಕರ್ ಬಗ್ಗೆ ಗೊತ್ತಿದ್ದರೂ ಜಾಣ ಕುರುಡು
  • ಸಾವರ್ಕರ್ ಇತಿಹಾಸವನ್ನು ಎಲ್ಲರೂ ತಿಳಿಯಬೇಕು, ಅದಕ್ಕಾಗಿ ಅಭಿಯಾನ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web mp renukacharya
ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ಸಿದ್ದರಾಮಯ್ಯ ಕಾರಿಗೆ ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ‌ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಯಾರೂ ಸಮರ್ಥಿಸಿಕೊಳ್ಳಲಿಲ್ಲ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದದ್ದು ಬಿಜೆಪಿ ಕಾರ್ಯಕರ್ತರಲ್ಲ. ಕಾಂಗ್ರೆಸ್ ಕಾರ್ಯಕರ್ತರೇ ಬಿಜೆಪಿಗೆ ಕೆಟ್ಟ ಹೆಸರು ತರಲು ಈ ರೀತಿ ಮಾಡಿದ್ದಾರೆ ಎಂದರು.
Siddaramaiah vs CT Ravi:'ಮುಸ್ಲಿಂ ಏರಿಯಾ ಅಂದ್ರೆ ಅದೇನು ಪಾಕಿಸ್ತಾನನ?'-ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ
ರಾಹುಲ್ ಗಾಂಧಿ ಬಂದಾಗ ಡಿಕೆಶಿ, ಸಿದ್ದರಾಮಯ್ಯ ಬಲವಂತವಾಗಿ ಅಪ್ಪಿಕೊಂಡರು. ರಾಹುಲ್ ಹೋದ ನಂತರ ಅವರಿಬ್ಬರ ನಡುವಿನ ಅಂತರ ಜಾಸ್ತಿ ಆಗಿದೆ ಎಂದರು‌. ಸಾವರ್ಕರ್ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ ಅವನತಿ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ. ಅಂಥವರ ಜೀವನ ಚರಿತ್ರೆ ಬಗ್ಗೆ ಕಾಂಗ್ರೆಸ್ ಅವರು ಮಾತಾಡ್ತಾರೆ‌. ಟಿಪ್ಪು ಯಾರು? ಆತ ಸ್ವಾತಂತ್ರ್ಯ ಹೋರಾಟ ಮಾಡೇ ಇಲ್ಲ. ಕಾಂಗ್ರೆಸ್ ವಿರುದ್ದ ಸಾವರ್ಕರ್ ಪುಸ್ತಕ ಕೊಡುವ ಅಭಿಯಾನ ಪ್ರಾರಂಭ ಮಾಡಿದ್ದೇವೆ ಎಂದರು.
Egg thrown at Siddaramaiah's Car: ಬಿಜೆಪಿಯಿಂದಲೇ ಖಂಡನೆ; ಕಾಂಗ್ರೆಸ್ ನಿಂದ ಪ್ರತಿಭಟನೆ!
ಕಾಂಗ್ರೆಸ್ ಮುಖಂಡರಿಗೆ ಸಾವರ್ಕರ್ ಬಗ್ಗೆ ಗೊತ್ತಿದ್ದರೂ ಜಾಣ ಕುರುಡು ತೋರಿಸ್ತಿದ್ದಾರೆ. ಮುಸ್ಲಿಂ ಏರಿಯಾ ಪಾಕಿಸ್ತಾನದಲ್ಲಿ ಇದೆಯಾ? ಭಾರತದಲ್ಲೇ ಇದೆ. ಸಿದ್ದರಾಮಯ್ಯ ಟಿಪ್ಪು ಜಯಂತಿ ಮಾಡಿ ವೈಭವೀಕರಿಸಿದ್ರು. ಸಾವರ್ಕರ್ ಬಗ್ಗೆ ಗೊತ್ತಿಲ್ಲದೆ ಹೋದ್ರೆ ಕಾಂಗ್ರೆಸ್ ಅವ್ರಿಗೆ ಬೇಕಾದರೆ ಪುಸ್ತಕ ಕಳಿಸಿಕೊಡ್ತೀನಿ ಎಂದರು.

ಸಾವರ್ಕರ್ ಇತಿಹಾಸವನ್ನು ಎಲ್ಲರೂ ತಿಳಿಯಬೇಕು. ಈ ಕಾರಣಕ್ಕಾಗಿ ಪುಸ್ತಕ ಕೊಡುವ ಅಭಿಯಾನ ಮಾಡ್ತಿದ್ದೇವೆ. ಪುಸ್ತಕ ಕಳಿಸ್ತೀವಿ ಓದಿ ಅವರ ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದರು.

ಗಣೇಶೋತ್ಸವದ ದಿನ ಗಣೇಶ ವಿಗ್ರಹ ಸ್ಥಾಪನೆ ಮಾಡ್ತೀವಿ. ಜೊತೆಗೆ ವೀರ ಸಾವರ್ಕರ್ ಫೋಟೋ ಇಡ್ತೀವಿ. ಯಾರು ವಿರೋಧ ಮಾಡ್ತಿರೋ ನೋಡ್ತೀವಿ. ಮಸೀದಿ ಮುಂದೆ ಯಾಕೆ ಸಾವರ್ಕರ್ ಫೋಟೋ ಹಾಕಬಾರದು? ದೇಶಕ್ಕಾಗಿ ಹೋರಾಡಿದ ಹೋರಾಟಗಾರ ಫೋಟೋ ಹಾಕ್ತೀವಿ. ಮುಸ್ಲಿಮರು ಕಾಂಗ್ರೆಸ್ ಮಾತು ಕೇಳಬಾರದು‌ ಎಂದರು.

ಸಿದ್ದರಾಮಯ್ಯ ಹೀಗೆ ಅಪಪ್ರಚಾರ ಮಾಡಬಾರದು. ಹೀಗಾದರೆ ಎಲ್ಲಾ ಕಾಂಗ್ರೆಸ್ ನಾಯಕರ ಮನೆಗೆ ಪುಸ್ತಕ ಕಳಿಸ್ತೀವಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮನೆಗೂ ಕಳಿಸ್ತೀನಿ ಎಂದ ಅವರು, ಓಟ್ ಬ್ಯಾಂಕ್ ರಾಜಕೀಯ, ಮುಸ್ಲಿಂ ಒಲೈಕೆಗೆ ಕಾಂಗ್ರೆಸ್‌ನವರು ಹೀಗೆ ಮಾಡ್ತಿದ್ದಾರೆ. ಸಿದ್ದರಾಮಯ್ಯ ಯಾಕೆ ಸಮಾಜವಾದಿಯಾಗಿ ಕಾಂಗ್ರೆಸ್ ನಾಯಕರನ್ನು ಓಲೈಕೆ ಮಾಡ್ತೀರಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ:

ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗು ಜಿಲ್ಲೆಯ ಪ್ರದೇಶಗಳಿಗೆ ಗುರುವಾರ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ಸಾವರ್ಕರ್‌ ಫ್ಲೆಕ್ಸ್ ವಿವಾದದ ಕುರಿತಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಸಿದ್ದರಾಮಯ್ಯ ಗೋಬ್ಯಾಕ್ ಎಂದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಈ ವೇಳೆ ಕಿಡಿಗೇಡಿಗಳು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದರು.
Savarkar: ಬ್ರಿಟಿಷರ ಸೇವಕ ಎಂದಿದ್ದ ಸಾವರ್ಕರ್‌ ದೇಶ ಪ್ರೇಮಿ ಸ್ವಾತಂತ್ರ್ಯ ಹೋರಾಟಗಾರ ಆಗಿದ್ದು ಹೇಗೆ? ಸಿದ್ದು ಪ್ರಶ್ನೆ
ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಆಗಸ್ಟ್ 26 ರಂದು ಕೊಡಗಿನಲ್ಲೇ ದೊಡ್ಡ ಮಟ್ಟದ ಹೋರಾಟ ರೂಪಿಸಲು ಸಿದ್ಧತೆ ಕೈಗೊಂಡಿದೆ.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ