ಆ್ಯಪ್ನಗರ

ಡಿಕೆಶಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ: ಸದಾನಂದಗೌಡ

ಡಿಕೆಶಿ ಪ್ರಕರಣ ಇವತ್ತು ನಿನ್ನೆಯದಲ್ಲ. ಅಕ್ರಮವಾಗಿ ಹಣ ಮಾಡಿರುವ ಹಿನ್ನೆಲೆ ತನಿಖೆ ನಡೆಸಲಾಗುತ್ತಿದೆ. ಈ ವಿಚಾರವನ್ನು ರಾಜಕಾರಣಗೊಳಿಸುವ ಅಗತ್ಯವಿಲ್ಲ ಎಂದು ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ.

Vijaya Karnataka Web 31 Aug 2019, 3:27 pm
ಮಂಡ್ಯ: ದೇಶದಲ್ಲಿ ಯಾರು ಅಕ್ರಮವಾಗಿ ಹಣ ಮಾಡಿದ್ದಾರೆ ಅವರೆಲ್ಲರ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳುತ್ತದೆ. ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ ವಿಚಾರದಲ್ಲಿ ಬಿಜೆಪಿ ಯಾವ ರಾಜಕೀಯವನ್ನು ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸ್ಪಷ್ಟ ಪಡಿಸಿದರು.
Vijaya Karnataka Web D V Sadananda Gowda


ಮಾಜಿ ಸಚಿವ ಡಿ.ಕೆ. ಶಿವಕುಮಾರ್ ರನ್ನು ಇಡಿ ವಿಚಾರಣೆ ಹಿನ್ನಲೆ ಮಾತನಾಡಿದ ಸದಾನಂದಗೌಡ, ಕಾನೂನು ಅದರ ದಾರಿಯನ್ನು ಅದೇ ತೆಗೆದುಕೊಳ್ಳುತ್ತದೆ. ಈ ಪ್ರಕರಣ ಇವತ್ತು ನಿನ್ನೆಯದಲ್ಲ. ಅಕ್ರಮವಾಗಿ ಹಣ ಮಾಡಿರುವ ಹಿನ್ನಲೆಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಡಿಕೆಶಿ ವಿಚಾರದಲ್ಲಿ ಬಿಜೆಪಿ ಯಾವ ರಾಜಕೀಯ ಮಾಡುತ್ತಿಲ್ಲ. ಹೈಕೋರ್ಟ್ ಅವರ ಅರ್ಜಿ ವಜಾ ಮಾಡಿದ ಹಿನ್ನಲೆಯಲ್ಲಿ ಇಡಿ ಮುಂದೆ ಹಾಜರಾಗಿದ್ದಾರೆ. ಡಿಕೆಶಿ ವಿಚಾರವನ್ನ ರಾಜಕಾರಣಗೊಳಿಸುವ ಅಗತ್ಯ ಇಲ್ಲ ಎಂದರು.

ಸಂಪುಟ ವಿಸ್ತರಣೆ ವಿಚಾರದಲ್ಲಿ ಶಾಸಕರ ಅಸಮಾಧಾನ ವಿಚಾರವಾಗಿ, ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಸಚಿವ ಸ್ಥಾನ ಸಿಗದೇ ಹೋದವರಿಗೆ ಸ್ವಲ್ಪ ದಿನ ಹಾರ್ಟ್ ಬರ್ನಿಂಗ್ ಆಗುತ್ತದೆ ಎಂದರು. ಸೋತವರನ್ನು ಡಿಸಿಎಂ ಮಾಡಿದಕ್ಕೆ ಸಂಬಂಧಿಸಿ ಕಾಂಗ್ರೆಸ್ ಈ ಹಿಂದೆ ಸೋತಿದ್ದ ಶಿವರಾಜ್ ಪಾಟೀಲ್ ಅವರನ್ನು ಕೇಂದ್ರದ ಗೃಹ ಮಂತ್ರಿ ಮಾಡಲಿಲ್ವಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅವಸಾನದ ಅಂಚಿನಲ್ಲಿದೆ. ಮಧ್ಯಪ್ರದೇಶದಲ್ಲಿ ಜೋತಿರಾಧಿತ್ಯ ಸಿಂಧ್ಯಾ ಪಾರ್ಟಿ ಬಿಡೋದಾಗಿ ಹೇಳಿದ್ದಾರೆ. ದೇಶದ ಮೂಲೆ ಮೂಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದರು.

ಸಮನ್ವಯ ಸಮಿತಿ ರಚನೆಯಿಲ್ಲ: ರಾಜ್ಯ ಬಿಜೆಪಿಯಲ್ಲಿ ಸಮನ್ವಯ ಸಮಿತಿ ರಚನೆ ಆಗಲ್ಲ. ನಮ್ಮ 106 ಶಾಸಕರೂ ಡಿಸಿಎಂ ಆಗಲು ಅರ್ಹರಿದ್ದಾರೆ. ಯಡಿಯೂರಪ್ಪ ಸಿಎಂ ಆದ ತಕ್ಷಣ ಸಿಂಗಲ್ ಮ್ಯಾನ್ ಆರ್ಮಿ ಆಗಿ ಓಡಾಡಿದ್ದಾರೆ ಎಂದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಬಿಜೆಪಿ ಸೇರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸದಾನಂದಗೌಡ, ಜೆಡಿಎಸ್ನ ಹಲವು ಶಾಸಕರು ಬಿಜೆಪಿಗೆ ಬರಬಹುದು. ಜೆಡಿಎಸ್ ಶಾಸಕ ಪುಟ್ಟರಾಜು ಸೇರಿ ಅನೇಕರು ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ