ಪ್ರಚಾರಕ್ಕೆ ಬಿಜೆಪಿ ಪ್ರತಿಭಟನೆ
ಕೇವಲ ಪ್ರಚಾರ ಪಡೆಯುವ ಸಲುವಾಗಿ ಬೆಳಗಾವಿಯಲ್ಲಿ ಅಧಿವೇಶನ ವೇಳೆ ಬಿಜೆಪಿ ಹಲವು ಬಾರಿ ಪ್ರತಿಭಟನೆ ನಡೆಸಿದೆ ಎಂದು ಸಚಿವ ಎಂಸಿ ಮನಗೂಳಿ ಆರೋಪಿಸಿದ್ದಾರೆ
Vijaya Karnataka 22 Dec 2018, 5:00 am
ಕಾರವಾರ:
ಕೇವಲ ಪ್ರಚಾರ ಪಡೆಯುವ ಸಲುವಾಗಿ ಬೆಳಗಾವಿಯಲ್ಲಿ ಅಧಿವೇಶನ ವೇಳೆ ಬಿಜೆಪಿ ಹಲವು ಬಾರಿ ಪ್ರತಿಭಟನೆ ನಡೆಸಿದೆ ಎಂದು ಸಚಿವ ಎಂ.ಸಿ ಮನಗೂಳಿ ಆರೋಪಿಸಿದ್ದಾರೆ.
ಸಂಪುಟ ವಿಸ್ತರಣೆ ಬಳಿಕ ಸರಕಾರ ಬೀಳುತ್ತದೆ ಎಂಬ ಬಿಜೆಪಿ ಮುಖಂಡ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ''ಬಿಜೆಪಿ ಮುಖಂಡರು ಸರಕಾರ ರಚನೆಯಾದಾಗಿನಿಂದ ಈ ರೀತಿ ಹೇಳುತ್ತಲೇ ಬಂದಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಕುಮಾರಸ್ವಾಮಿ ನೇತೃತ್ವದ ಸರಕಾರ ಒಳ್ಳೆಯ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದೆ'' ಎಂದು ಮನಗೂಳಿ ಸಮರ್ಥಿಸಿಕೊಂಡರು.
ಕೇವಲ ಪ್ರಚಾರ ಪಡೆಯುವ ಸಲುವಾಗಿ ಬೆಳಗಾವಿಯಲ್ಲಿ ಅಧಿವೇಶನ ವೇಳೆ ಬಿಜೆಪಿ ಹಲವು ಬಾರಿ ಪ್ರತಿಭಟನೆ ನಡೆಸಿದೆ ಎಂದು ಸಚಿವ ಎಂ.ಸಿ ಮನಗೂಳಿ ಆರೋಪಿಸಿದ್ದಾರೆ.
ಸಂಪುಟ ವಿಸ್ತರಣೆ ಬಳಿಕ ಸರಕಾರ ಬೀಳುತ್ತದೆ ಎಂಬ ಬಿಜೆಪಿ ಮುಖಂಡ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ''ಬಿಜೆಪಿ ಮುಖಂಡರು ಸರಕಾರ ರಚನೆಯಾದಾಗಿನಿಂದ ಈ ರೀತಿ ಹೇಳುತ್ತಲೇ ಬಂದಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಕುಮಾರಸ್ವಾಮಿ ನೇತೃತ್ವದ ಸರಕಾರ ಒಳ್ಳೆಯ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದೆ'' ಎಂದು ಮನಗೂಳಿ ಸಮರ್ಥಿಸಿಕೊಂಡರು.