ಆ್ಯಪ್ನಗರ

ನಿಖಿಲ್‌ ಕುಮಾರಸ್ವಾಮಿಗೆ ಗುಪ್ತಚರ ವರದಿ ಸಿಕ್ಕಿದ್ದು ಹೇಗೆ?

ಇದಕ್ಕೆ ಸ್ಪಷ್ಟನೆ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಆಗ್ರಹ

Vijaya Karnataka Web 21 Nov 2018, 5:47 pm
ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಬಂಧಿಸಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
Vijaya Karnataka Web NIkhil kumaraswamy


ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರಿಗೆ ಕಳೆದ ನಾಲ್ಕು ವರ್ಷಗಳಿಂದ ಸುಮ್ಮನಿದ್ದು, ಈಗ ಎದ್ದು ಬಂದಿದ್ದೀಯಲ್ಲಾ? ಎಲ್ಲಿ ಮಲಗಿದ್ದೆಯಮ್ಮಾ? ಎಂದು ಪ್ರಶ್ನಿದ್ದು ಭಾರಿ ಆಕ್ರೋಷ ಮತ್ತು ಚರ್ಚೆಗೆ ಗುರಿಯಾಗಿತ್ತು.


ಇದಕ್ಕೆ ಸಂಬಂಧಿಸಿ ಕನ್ನಡದ ಖಾಸಗಿ ವಾಹಿನಿಯೊಂದು ನಿಖಿಲ್‌ ಅವರನ್ನು ಮಾತನಾಡಿಸಿತ್ತು. ಈ ಸಂದರ್ಭ ನಿಖಿಲ್‌ 'ತಮಗೆ ಬಂದ ಗುಪ್ತಚರ ವರದಿ ಪ್ರಕಾರ' ಎಂಬ ಪೀಠಿಕೆಯೊಂದಿಗೆ ಮಾತನಾಡಿದ್ದರು. ಜನಪ್ರತಿನಿಧಿಯಲ್ಲದ ಓರ್ವ ವ್ಯಕ್ತಿಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿವೆ. ಮುಖ್ಯಮಂತ್ರಿ ಮಗನಿಗೆ ಗುಪ್ತಚರ ವರದಿ ನೀಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಇದಕ್ಕೆ ಸ್ಪಷ್ಟನೆ ನೀಡುವಂತೆ ಬಿಜೆಪಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆಗ್ರಹಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಮುಖಂಡ ಸುರೇಶ್‌ ಕುಮಾರ್‌, ಗುಪ್ತಚರ ವರದಿ ಅಷ್ಟು ಸಸ್ತಾ ಆಗೋಗಿದೆಯೇ? ಗುಪ್ಚಚರ ವರದಿ ಸಿಗೋದಕ್ಕೆ ನಿಖಿಲ್‌ ಕುಮಾರಸ್ವಾಮಿಯವರ ಅಧಿಕಾರ ಏನು? ಮುಖ್ಯಮಂತ್ರಿಗಳ ಮಗನಾಗಿದ್ದಕ್ಕೆ ಈ ಮಹದವಕಾಶವೇ? ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.


ಸುರೇಶ್‌ ಕುಮಾರ್‌ ಅವರು ಜೆಡಿಎಸ್‌ ಮಾತ್ರವಲ್ಲ, ಕಾಂಗ್ರೆಸ್‌ ಅನ್ನು ಟ್ವೀಟ್‌ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ