ಆ್ಯಪ್ನಗರ

ಜಿಹಾದಿಗಳ ಪರ ಕುಮಾರಸ್ವಾಮಿ ರೋದಿಸುತ್ತಿರುವುದೇಕೆ: ಬಿಜೆಪಿ ಟ್ವೀಟ್‌

ಮಂಗಳೂರಿನಲ್ಲಿ ಬಾಂಬ್‌ ಪತ್ತೆ ಬಗ್ಗೆ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಬಿಜೆಪಿ ಟ್ವೀಟ್‌ ಮಾಡಿದ್ದು, ಓಲೈಕೆ ರಾಜಕಾರಣ ಹಾಗೂ ಜಿಹಾದಿಗಳ ಪರ ರೋದನ ಎಂದು ಟೀಕೆ ಮಾಡಿದೆ.

Vijaya Karnataka Web 21 Jan 2020, 12:36 pm
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣ ಬಳಿ ಸಜೀವ ಬಾಂಬ್‌ ಪತ್ತೆಯಾಗಿರುವ ವಿಚಾರದಲ್ಲಿ ನನಗೆ ಕೆಲವು ಪೊಲೀಸರ ಬಗ್ಗೆಯೇ ಅನುಮಾನವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಈ ಸಂಬಂಧ ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿದ್ದು, ಓಲೈಕೆ ರಾಜಕಾರಣಕ್ಕೆ ಯಾವುದೇ ಕೊನೆಯೇ ಇಲ್ಲವೇ, ಜಿಹಾದಿಗಳ ಪರ ರೋದನವೇಕೆ ಎಂದು ಪ್ರಶ್ನೆ ಮಾಡಿದ್ದಾರೆ.
Vijaya Karnataka Web kumaraswamy et 2020


ಕುಮಾರಸ್ವಾಮಿ ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಮಂಗಳೂರಿನಲ್ಲಿ ಪ್ರತಿಭಟನಾಕಾರರು ಯಾವುದೇ ಗಲಭೆಯಲ್ಲಿ ತೊಡಗಿಲ್ಲ ಎಂದು ಹೇಳಲು ಫೇಕ್‌ ಸಿಡಿಗಳನ್ನು ಬಿಡುಗಡೆ ಮಾಡಿದ್ದರು. ಈಗ ಮಂಗಳೂರಿನಲ್ಲಿ ಸಜೀವ ಬಾಂಬ್‌ ನಿಷ್ಕ್ರಿಯಗೊಳಿಸಿದ್ದಕ್ಕೆ ಪೊಲೀಸರ ವಿರುದ್ಧವೇ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿಯ ಓಲೈಕೆ ರಾಜಕಾರಣಕ್ಕೆ ಕೊನೆಯೇ ಇಲ್ಲವೇ ಎಂದು ಬಿಜೆಪಿ ಕರ್ನಾಟಕ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್‌ ಮೂಲಕ ಪ್ರಶ್ನೆ ಮಾಡಿದೆ. ಅಲ್ಲದೆ, ಜಿಹಾದಿಗಳ ಪರವಾಗಿ ರೋದನವೇಕೆ ಎಂದೂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಟೀಕೆ ಮಾಡಿದೆ.
ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆ ವಿಚಾರ, ಪೊಲೀಸರ ಮೇಲೆಯೇ ನನಗೆ ಅನುಮಾನ ಎಂದ ಕುಮಾರಸ್ವಾಮಿ

ಶೃಂಗೇರಿ ಶಾರದಾ ಪೀಠದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಮಂಗಳೂರಿನಲ್ಲಿ ಬಾಂಬ್‌ ಇಟ್ಟಿದ್ದು ಯಾರು ಎಂಬುದನ್ನು ಪತ್ತೆಹಚ್ಚುವುದು ಕಷ್ಟವಲ್ಲ. ಪೊಲೀಸರು ವಿಳಂಬ ಮಾಡಬಾರದು ಎಂದರು. ಜತೆಗೆ, ಆ ಜಾಗದಲ್ಲಿ ಸಿಸಿ ಕ್ಯಾಮೆರಾ ಇರುತ್ತದೆ. ಪೊಲೀಸರು ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕು. ನನಗೆ ಕೆಲವು ಪೊಲೀಸರ ಬಗ್ಗೆ ಅನುಮಾನವಿದೆ. ಸರಕಾರ ಮತ್ತು ಪೊಲೀಸರು ಸಮಾಜ ಒಡೆಯುವ ಕೆಲಸ ಮಾಡಬಾರದು. ಸಮಾಜದಲ್ಲಿ ಅಪನಂಬಿಕೆ ಉಂಟಾಗಬಾರದು ಎಂದು ಹೇಳಿದ್ದರು.

ತಪ್ಪಿದ ಮಂಗಳೂರು ಬಾಂಬ್‌ ಸ್ಫೋಟ: ಏನೇನಾಯ್ತು? ಕ್ಷಣ ಕ್ಷಣದ ನೋಟ ಇಲ್ಲಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ