ಆ್ಯಪ್ನಗರ

ದಾಳಿಗೆ ಸಿದ್ದು ಕಾರಣ ಎಂದಿದ್ದ ಡಿಕೆಶಿ ತಾಯಿ ಹೇಳಿಕೆ ನೆನಪು

ರಾಜಕೀಯವಾಗಿ ಬಿಜೆಪಿಗೆ ಸಿದ್ದರಾಮಯ್ಯನವರ ಮಾರ್ಗದರ್ಶನ ಬೇಕಾಗಿಲ್ಲ ಎಂದು ...

Vijaya Karnataka 11 Sep 2019, 5:00 am
ಬೆಂಗಳೂರು: ರಾಜಕೀಯವಾಗಿ ಬಿಜೆಪಿಗೆ ಸಿದ್ದರಾಮಯ್ಯನವರ ಮಾರ್ಗದರ್ಶನ ಬೇಕಾಗಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿರುಗೇಟು ನೀಡಿದ್ದಾರೆ.
Vijaya Karnataka Web ravi


ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ''ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರೇ ತಮ್ಮ ಮಗನ ಮೇಲೆ ಐಟಿ ದಾಳಿ ನಡೆಯುವಂತೆ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ತಾಯಿಯೇ ಆರೋಪ ಮಾಡಿದ್ದರು. ಇದು ಬಿಜೆಪಿ ಮಾಡಿದ ಆರೋಪವಲ್ಲ,'' ಎಂದು ಸ್ಪಷ್ಟಪಡಿಸಿದ್ದಾರೆ.

''ಬೇರೆ ಪಕ್ಷದ ನಾಯಕರನ್ನು ಟೀಕಿಸುವುದಕ್ಕೆ ಮುನ್ನ ಸಿದ್ದರಾಮಯ್ಯನವರು ತಮ್ಮ ವಿಶ್ವಾಸಾರ್ಹತೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಮುಖ್ಯಮಂತ್ರಿ ಆಸೆಗಾಗಿ ನೀವು ಸಿದ್ಧಾಂತಕ್ಕೆ ತಿಲಾಂಜಲಿ ನೀಡಿದ್ದನ್ನು ಯಾರೂ ಮರೆತಿಲ್ಲ. ಸಿದ್ದರಾಮಯ್ಯ ಅವರದು ಬೆನ್ನಿಗೆ ಚೂರಿ ಹಾಕುವ ಸಂಸ್ಕೃತಿ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ,'' ಎಂದು ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ