ಆ್ಯಪ್ನಗರ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಜೂ.29ಕ್ಕೆ

ವಿಧಾನಸಭಾ ಚುನಾವಣಾ ಬಳಿಕ ಇದೇ ಮೊದಲ ಬಾರಿಗೆ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ರಾಜ್ಯ ಘಟಕ ತೀರ್ಮಾನಿಸಿದ್ದು, ಜೂನ್‌ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ.

Vijaya Karnataka 25 Jun 2018, 7:48 am
ಬೆಂಗಳೂರು: ವಿಧಾನಸಭಾ ಚುನಾವಣಾ ಬಳಿಕ ಇದೇ ಮೊದಲ ಬಾರಿಗೆ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ರಾಜ್ಯ ಘಟಕ ತೀರ್ಮಾನಿಸಿದ್ದು, ಜೂನ್‌ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ.
Vijaya Karnataka Web BJP Flag


ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕೇಂದ್ರ ಸಚಿವರಾದ ಅನಂತಕುಮಾರ, ಸದಾನಂದಗೌಡ ಸೇರಿದಂತೆ ಕೋರ್‌ ಕಮಿಟಿ ಸದಸ್ಯರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣಾ ತಯಾರಿ, ಪ್ರಸಕ್ತ ರಾಜಕೀಯ ವಿದ್ಯಮಾನ, ವಿಧಾನಸಭೆ ಚುನಾವಣೆ ಫಲಿತಾಂಶಗಳ ಬಗ್ಗೆ ಆತ್ಮಾವಲೋಕನ ನಡೆಸುವುದಕ್ಕೂ ತೀರ್ಮಾನಿಸಲಾಗಿದೆ.

ಬಿಜೆಪಿ ಆಂತರಿಕ ಮೂಲಗಳ ಪ್ರಕಾರ ಕಾರ್ಯಕಾರಿಣಿಯ ಅಜೆಂಡಾ ಇನ್ನೂ ನಿಗದಿಯಾಗಿಲ್ಲ. ಆದರೆ ರೈತರ ಆತ್ಮಹತ್ಯೆ, ಸಾಲಮನ್ನಾ ಹೋರಾಟ, ಬಜೆಟ್‌ ಅಧಿವೇಶನದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆಯೂ ತಯಾರಿ ನಡೆಯಲಿದೆ.

ರವಿಕುಮಾರ್‌ ಉಪನಾಯಕ


ಇದೇ ಮೊದಲ ಬಾರಿಗೆ ಪರಿಷತ್‌ ಪ್ರವೇಶಿಸಿರುವ ರವಿಕುಮಾರ್‌ ಪರಿಷತ್‌ ಉಪನಾಯಕರಾಗಿ ಆಯ್ಕೆಗೊಳ್ಳುವ ಸಾಧ್ಯತೆ ಹೆಚ್ಚಿದೆ. ಪರಿಷತ್‌ ಪ್ರತಿಪಕ್ಷ ನಾಯಕರಾಗಿ ಅರುಣ್‌ ಶಹಾಪೂರ್‌ ಆಯ್ಕೆ ಬಹುತೇಕ ಖಚಿತವಾಗಿದ್ದು, ರಘುನಾಥ್‌ ರಾವ್‌ ಮಲ್ಕಾಪುರೆ ಅವರನ್ನು ಮುಖ್ಯ ಸಚೇತಕರಾಗಿ ನಿಯುಕ್ತಿಗೊಳಿಸುವ ಮೂಲಕ ಪ್ರಾದೇಶಿಕ ಹಾಗೂ ಜಾತಿ ಸಮೀಕರಣ ಸರಿದೂಗಿಸಲು ಚಿಂತನೆ ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ