ಆ್ಯಪ್ನಗರ

ಸಿದ್ದರಾಮಯ್ಯ ಟ್ವಿಟ್ಟರ್‌ ಖಾತೆ ಹ್ಯಾಕ್‌ ಆಗಿದ್ಯಾ! ನಳಿನ್ ಕುಮಾರ್ ಕಟೀಲ್ ಅನುಮಾನಕ್ಕೆ ಕಾರಣವೇನು?

ಸಿದ್ದರಾಮಯ್ಯ ಅವರ ಟ್ವಿಟ್ಟರ್‌ ಖಾತೆ ಹ್ಯಾಕ್‌ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅವರ ಈ ರೀತಿಯ ಅನುಮಾನಕ್ಕೆ ಕಾರಣ ಏನು ? ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 23 Oct 2020, 9:45 am
ಬೆಂಗಳೂರು: ಸಿದ್ದರಾಮಯ್ಯನವರೇ ನಿಮ್ಮ ಟ್ವಿಟ್ಟರ್‌ ಖಾತೆ ಹ್ಯಾಕ್‌ ಆಗಿದೆ! ಹೀಗಂತ ಹೇಳಿದವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ನಳಿನ್ ವಿರುದ್ಧ ಸಿಡಿದೆದ್ದು ಸರಣಿ ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಕಾಡು ಮನುಷ್ಯ ಎಂದಿದ್ದರು. ಇದಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೆ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ ಎಂದು ವ್ಯಂಗ್ಯವಾಡಿದ್ದಾರೆ.
Vijaya Karnataka Web nalin kumar kateel



ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿರಲು ನಾಲಾಯಕ್! ಸಿದ್ದರಾಮಯ್ಯ ಕೆಂಡಾಮಂಡಲ

ಹುಲಿಯಾವನ್ನು ಕಾಡಿಗೆ ಓಡಿಸುತ್ತೇವೆ, ಬಂಡೆ ಛಿದ್ರ ಎಂದು ನಳಿನ್ ಕುಮಾರ್ ಕಟೀಲ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹೇಳಿಕೆ ನೀಡಿದ್ದರು.ಇದರಿಂದ ಕೆಂಡಾಮಂಡಲರಾಗಿದ್ದ ಸಿದ್ದರಾಮಯ್ಯ ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಟ್ವೀಟ್ ಮಾಡಿದ್ದರು.

ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ! ಸಿದ್ದುಗೆ ಬಿಜೆಪಿ ಗುದ್ದು

ಸಿದ್ದರಾಮಯ್ಯ ಅವರ ಹೇಳಕೆಗೆ ಬಿಜೆಪಿಯಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿ ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೆ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ. ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಂತೂ ಅಲ್ಲ‌. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿಯ ಬಗ್ಗೆ ನನಗೆ ಸಹಾನುಭೂತಿಯಿದೆ ಎಂದು ತಿರುಗೇಟು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ