ಆ್ಯಪ್ನಗರ

ಈಗಲ್ ಟನ್‌‌ಗೆ ವಿಧಿಸಿರುವ ದಂಡ ವಸೂಲಿ ಮಾಡಿಕೊಂಡು ಬನ್ನಿ: ಬಿಜೆಪಿ ವ್ಯಂಗ್ಯ

ಶುಕ್ರವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಅತೃಪ್ತ ಶಾಸಕರು ಗೈರು ಹಾಜರಾಗಿರುವುದು ದೋಸ್ತಿ ಸರಕಾರದಲ್ಲಿ ನಡುಕ ಮೂಡಿಸಿದ್ದು, ಇನ್ನಷ್ಟು ಶಾಸಕರು ಕೈ ಬಿಡಬಹುದು ಎಂಬ ಭೀತಿಯಿಂದ ತಮ್ಮ ಶಾಸಕರನ್ನು ರಾತ್ರೋರಾತ್ರಿ ಬೆಂಗಳೂರಿನ ಹೊರವಲಯದ ಈಗಲ್‌ ಟನ್ ರೆಸಾರ್ಟ್‌ಗೆ ಶಿಫ್ಟ್‌ ಮಾಡಲಾಗಿತ್ತು.

Vijaya Karnataka Web 19 Jan 2019, 2:44 pm
ಬೆಂಗಳೂರು: ಕಾಂಗ್ರೆಸ್ ನಾಯಕರ ರೆಸಾರ್ಟ್ ರಾಜಕಾರಣ ಕುರಿತು ಬಿಜೆಪಿ ವ್ಯಂಗ್ಯವಾಡಿದೆ.
Vijaya Karnataka Web bjp2


ಕೆಲವು ದಿನಗಳ ಹಿಂದೆಷ್ಟೆ ಕರ್ನಾಟಕ ಸರಕಾರ ಬಿಡದಿ ಬಳಿ ಇರುವ ಈಗಲ್ ಟನ್ ಗಾಲ್ಫ್ ರೆಸಾರ್ಟ್‌ಗೆ 992 ಕೋಟಿ ರೂ.ಗಳ ದಂಡ ವಿಧಿಸಿತ್ತು. ಆದರೆ, ಈಗ ಅದೇ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ನಾಯಕರು ಕಾಲ ಹರಣ ಮಾಡುತ್ತಿದ್ದಾರೆ. 'ಮರ್ಯಾದಾ ಪುರುಷೋತ್ತಮ'ರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ, ರೆಸಾರ್ಟ್‌ನಿಂದ ಮರಳುವಾಗ ದಂಡದ ಹಣವನ್ನು ವಸೂಲಿ ಮಾಡಿಕೊಂಡು ಬಂದು ರೈತರ ಸಾಲ ಮನ್ನಾ ಮಾಡಲು ಬಳಸಿಕೊಳ್ಳಿ ಎಂದು ವಿನಂತಿಸುತ್ತೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಶುಕ್ರವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಅತೃಪ್ತ ಶಾಸಕರು ಗೈರು ಹಾಜರಾಗಿರುವುದು ದೋಸ್ತಿ ಸರಕಾರದಲ್ಲಿ ನಡುಕ ಮೂಡಿಸಿದ್ದು, ಇನ್ನಷ್ಟು ಶಾಸಕರು ಕೈ ಬಿಡಬಹುದು ಎಂಬ ಭೀತಿಯಿಂದ ತಮ್ಮ ಶಾಸಕರನ್ನು ರಾತ್ರೋರಾತ್ರಿ ಬೆಂಗಳೂರಿನ ಹೊರವಲಯದ ಈಗಲ್‌ ಟನ್ ರೆಸಾರ್ಟ್‌ಗೆ ಶಿಫ್ಟ್‌ ಮಾಡಲಾಗಿತ್ತು.

ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ ಅಂತ್ಯ

ಏತನ್ಮಧ್ಯೆ, ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ ಮುಕ್ತಾಯವಾಗಿದ್ದು, ಪಕ್ಷದ ಎಲ್ಲ ಶಾಸಕರು ದಿಲ್ಲಿಯಿಂದ ವಾಪಸ್ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ