ಆ್ಯಪ್ನಗರ

ವಿಧಾನಪರಿಷತ್‌ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನ, ಇನ್ನೂ ಹೊರಬಿದ್ದಿಲ್ಲ ಬಿಜೆಪಿ ಪಟ್ಟಿ!

ಬಿಜೆಪಿಯಿಂದ ವಿಜಯೇಂದ್ರ ಹೆಸರು ಕೇಳಿ ಬಂದಿದ್ದರೂ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನ ಆಗಿರುವುದರಿಂದ ಅಭ್ಯರ್ಥಿಗಳ ಹೆಸರು ಯಾವ ಕ್ಷಣದಲ್ಲಾದರೂ ಪ್ರಕಟವಾಗಬಹುದು.

Vijaya Karnataka Web 24 May 2022, 9:27 am
ಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ (ಮೇ 24) ಕೊನೆಯ ದಿನವಾಗಿದೆ. ಈಗಾಗಲೇ ಕಾಂಗ್ರೆಸ್ ತನ್ನ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಅತಿ ಶೀಘ್ರದಲ್ಲೇ ಬಿಜೆಪಿಯೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ.
Vijaya Karnataka Web ಬಿಜೆಪಿ
ಬಿಜೆಪಿ


ಜೂನ್ 3 ರಂದು ಚುನಾವಣೆ ನಡೆಯಲಿದ್ದು, ಒಟ್ಟು ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್‌ಗೆ 2 ಹಾಗೂ ಜೆಡಿಎಸ್‌ಗೆ 1 ಸ್ಥಾನ ಸಿಗಲಿದೆ. ಕಾಂಗ್ರೆಸ್‌ನಿಂದ ಅಚ್ಚರಿಯ ಆಯ್ಕೆ ಎಂಬಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್‌ ಹಾಗೂ ನಾಗರಾಜ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಜೆಡಿಎಸ್‌ ಹಾಗೂ ಬಿಜೆಪಿ ಅಭ್ಯರ್ಥಿ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ.

ವಿಪ ಚುನಾವಣೆಗೆ ಕೈ ಅಭ್ತರ್ಥಿಗಳ ಆಯ್ಕೆ: ಅಚ್ಚರಿ ತಂದ ಹೈ ನಡೆ

ಬಿಜೆಪಿಯಿಂದ ವಿಜಯೇಂದ್ರ ಹೆಸರು ಕೇಳಿ ಬಂದಿದ್ದರೂ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಇವರ ಹೊರತಾಗಿ ನಿರ್ಮಲ್ ಕುಮಾರ್ ಸುರಾನ, ಛಲವಾದಿ ನಾರಾಯಣ ಸ್ವಾಮಿ, ಮಹಾಂತೇಶ ಕವಟಗಿಮಠ, ಕೇಶವಪ್ರಸಾದ್, ಮಂಜಮ್ಮ ಜೋಗತಿ, ಲಿಂಗರಾಜ ಪಾಟೀಲ, ಗೀತಾ ವಿವೇಕಾನಂದ ಹೆಸರು ಕೇಳಿಬರುತ್ತಿವೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನ ಆಗಿರುವುದರಿಂದ ಅಭ್ಯರ್ಥಿಗಳ ಹೆಸರು ಯಾವ ಕ್ಷಣದಲ್ಲಾದರೂ ಪ್ರಕಟವಾಗಬಹುದು.


ವಿಧಾನಸಭೆ ಸದಸ್ಯರಿಂದ ಆಯ್ಕೆಯಾದ ವಿಧಾನಪರಿಷತ್‌ ನ ಏಳು ಮಂದಿ ಸದಸ್ಯರ ಅವಧಿ ಜೂನ್ 14 ಕ್ಕೆ ಮುಕ್ತಾಯಗೊಳ್ಳಲಿದೆ. ಸದಸ್ಯರಾದ ಲಕ್ಷ್ಮಣ ಸವದಿ, ರಾಮಪ್ಪ ತಿಮ್ಮಾಪುರ್‌, ಎಚ್‌ ಎಂ ರಮೇಶ್ ಗೌಡ, ಅಲ್ಲಮ್ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಕೆ.ವಿ ನಾರಾಯಣ ಸ್ವಾಮಿ, ಲೆಹರ್‌ ಸಿಂಗ್ ಸೇರಿದಂತೆ ಏಳು ಮಂದಿ ಸದಸ್ಯರ ಅವಧಿ ಮುಕ್ತಾಗೊಳ್ಳಲಿದೆ. ಈ ಏಳು ಸ್ಥಾನಕ್ಕೆ ಜೂನ್ 3ಕ್ಕೆ ಮತದಾನ ನಡೆಯಲಿದೆ.

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಗಳ ಘೋಷಣೆ

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಮೇ 24
ನಾಮಪತ್ರ ಪರಿಶೀಲನೆ ಕೊನೆಯ ದಿನ: ಮೇ 25
ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ: ಮೇ 27
ಮತದಾನ ನಡೆಯುವ ದಿನಾಂಕ: ಜೂನ್ 3
ಮತದಾನ ನಡೆಯುವ ಅವಧಿ: ಬೆಳಗ್ಗೆ 9 ರಿಂದ ಸಂಜೆ 4 ಗಂಟೆ
ಮತ ಎಣಿಕೆ ದಿನ: ಜೂನ್ 3 ಸಂಜೆ ಐದು ಗಂಟೆಯ ಬಳಿಕ
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನಾಂಕ: ಜೂನ್ 7

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ