ಆ್ಯಪ್ನಗರ

ಬಿಜೆಪಿಯಿಂದ ಪ್ರಜಾಪ್ರಭುತ್ವ ವಿರೋಧಿ ನಡೆ: ಕೆಸಿ ವೇಣುಗೋಪಾಲ್‌

ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಮೂಲಕ ಪ್ರಜಾ ಪ್ರಭುತ್ವ ವಿರೋಧಿ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ವೇಣುಗೋಪಾಲ್‌ ಆರೋಪಿಸಿದರು.

Vijaya Karnataka Web 8 Jul 2019, 5:19 pm
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರಕಾರದ 22 ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಕೆಸಿ ವೇಣುಗೋಪಾಲ್
ಕೆಸಿ ವೇಣುಗೋಪಾಲ್


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ವೇಣುಗೋಪಾಲ್‌ ಮಾತನಾಡಿದರು.

ರಾಜ್ಯ ಸರಕಾರ 22 ಸಚಿವರು ತಮ್ಮ ಸ್ಥಾನಕ್ಕೆ ಸ್ವಯಂ ಆಗಿ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದು, ಸಚಿವ ಸಂಪುಟ ಪುನಾರಚನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರಕಾರ ಸ್ಥಿರವಾಗಿದ್ದು, ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಸರಕಾರ ಮುಂದುವರಿಯಲಿದ್ದು ಬಿಜೆಪಿ ಪಕ್ಷ 6ನೇ ಬಾರಿಗೆ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಿಂದ ವಿಫಲಗೊಂಡಿದೆ. ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಇನ್ನುಳಿದ ರಾಜ್ಯಗಳಲ್ಲಿ ಬೇರೆ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ನಡೆಸುತ್ತಲೇ ಇದೆ ಎಂದರು.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ನ ಎಲ್ಲ ಸಚಿವರು ರಾಜಿನಾಮೆ ನೀಡುವ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ