ಆ್ಯಪ್ನಗರ

ಮೂವರ ನೇತೃತ್ವದಲ್ಲಿ ಬಿಜೆಪಿ ಯಾತ್ರೆ

ವಿಧಾನಸಭಾ ಚುನಾವಣೆಗೆ ಮುನ್ನ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪರಿವರ್ತನಾ ಯಾತ್ರೆ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಮೂಡಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಲೋಕಸಭಾ ಚುನಾವಣೆಗೆ ಪ್ರತಿಯೊಬ್ಬರ ಸಾಮರ್ಥ್ಯ‌ವನ್ನೂ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ, ತಕ್ಷಣಕ್ಕೆ ಎದುರಾಗುವ ಸ್ಥಳೀಯ ಸಂಸ್ಥೆ ಚುನಾವಣೆ ಜತೆಗೆ ರಾಷ್ಟ್ರ ರಾಜಕಾರಣ ದೃಷ್ಟಿಯಿಂದ ಮಹತ್ವದ್ದಾಗಿರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಮುಂದಾಗಿದೆ.

Vijaya Karnataka 8 Aug 2018, 10:39 am
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮುನ್ನ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪರಿವರ್ತನಾ ಯಾತ್ರೆ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಮೂಡಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಲೋಕಸಭಾ ಚುನಾವಣೆಗೆ ಪ್ರತಿಯೊಬ್ಬರ ಸಾಮರ್ಥ್ಯ‌ವನ್ನೂ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ, ತಕ್ಷಣಕ್ಕೆ ಎದುರಾಗುವ ಸ್ಥಳೀಯ ಸಂಸ್ಥೆ ಚುನಾವಣೆ ಜತೆಗೆ ರಾಷ್ಟ್ರ ರಾಜಕಾರಣ ದೃಷ್ಟಿಯಿಂದ ಮಹತ್ವದ್ದಾಗಿರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಮುಂದಾಗಿದೆ.
Vijaya Karnataka Web karnataka bjp leaders


ರಾಜ್ಯ ಪ್ರವಾಸದ ಸಂದರ್ಭದಲ್ಲಿ ಆಡಳಿತಾರೂಢ ಮೈತ್ರಿ ಸರಕಾರದ ದುರಾಡಳಿತ, ವರ್ಗಾವಣೆ ದಂಧೆ, ಅಭಿವೃದ್ಧಿ ಕುಂಠಿತಗೊಂಡಿರುವ ಬಗ್ಗೆ ರಾಜ್ಯ ಪ್ರವಾಸ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಜಾಗೃತಿ ಮಾಡಲಿದ್ದಾರೆ.

ಯಾರ ನೇತೃತ್ವ ?

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ''ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯ ಪ್ರವಾಸ ನಡೆಸುವ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಹಾಗೂ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ,'' ಎಂದು ಹೇಳಿದರು.

''ಪ್ರತಿ ಜಿಲ್ಲೆಯಲ್ಲಿ ಕೋರ್‌ ಕಮಿಟಿ ಸಭೆ, ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಮೇಲ್ಪಟ್ಟವರ ಸಭೆ ನಡೆಸಲು ಯೋಜನೆ ರೂಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಲೋಕಸಭಾ ಚುನಾವಣೆಗೂ ತಯಾರಿ ಹಾಗೂ ಪ್ರಚಾರ ನಡೆಸಲಾಗುವುದು. ಆ.9ರಿಂದ 16ರ ವರೆಗೆ ಪ್ರಮುಖ ನಾಯಕರ ತಂಡ ರಾಜ್ಯಾದ್ಯಂತ ಪ್ರವಾಸ ನಡೆಸಲಿದೆ. ಪ್ರತಿ ಜಿಲ್ಲೆಯಲ್ಲಿ 800ರಿಂದ 1 ಸಾವಿರ ಕಾರ್ಯಕರ್ತರ ಸಭೆ ನಡೆಸಲು ತೀರ್ಮಾನಿಸಲಾಗಿದೆ,'' ಎಂದು ವಿವರಿಸಿದರು.

ತಂಡ-1: ಯಡಿಯೂರಪ್ಪ, ಗೋವಿಂದ ಕಾರಜೋಳ, ಶೋಭಾ ಕರಂದ್ಲಾಜೆ

ಪ್ರವಾಸ ಮಾಡುವ ಜಿಲ್ಲೆಗಳು: ಬೀದರ್‌, ಕಲಬುರಗಿ, ಬೆಂಗಳೂರು ಮಹಾನಗರ, ಬೆಂಗಳೂರು ಜಿಲ್ಲೆ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟ

ತಂಡ-2: ಜಗದೀಶ್‌ ಶೆಟ್ಟರ್‌, ಆರ್‌.ಅಶೋಕ, ಅರವಿಂದ ಲಿಂಬಾವಳಿ

ಪ್ರವಾಸ ಮಾಡುವ ಜಿಲ್ಲೆಗಳು : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ.

ತಂಡ-3: ಕೆ.ಎಸ್‌.ಈಶ್ವರಪ್ಪ, ಸಿ.ಟಿ.ರವಿ, ಲಕ್ಷ್ಮಣ ಸವದಿ

ಪ್ರವಾಸ ಮಾಡುವ ಜಿಲ್ಲೆಗಳು: ಮಂಡ್ಯ, ಚಾಮರಾಜ ನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು.

ಸಂಘಟನೆ ಹೇಗೆ?

- ಪ್ರತಿ ಜಿಲ್ಲೆಯಲ್ಲಿ ಸಂಸದರು, ಶಾಸಕರು ಸೇರಿ ಜಿಲ್ಲಾ ಕೋರ್‌ ಕಮಿಟಿ ಸಭೆ.

- ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಸಭೆ.

- ಪತ್ರಿಕಾಗೋಷ್ಠಿಗಳು

- ಪ್ರತಿ ಜಿಲ್ಲೆಯಲ್ಲಿ 800ರಿಂದ 1000 ಕಾರ್ಯಕರ್ತರ ಜತೆಗೆ ಮುಖಾಮುಖಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ