ಆ್ಯಪ್ನಗರ

ಕಳ್ಳಭಟ್ಟಿ ,ಕಲಬೆರಕೆ ಮದ್ಯದ ಹಾವಳಿ ತಡೆಗೆ ಸಚಿವರ ಸೂಚನೆ

ಕಳ್ಳಭಟ್ಟಿ ಹಾಗೂ ನಕಲಿ ಅಥವಾ ಕಲಬೆರಕೆ ಮದ್ಯದ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಮತ್ತು ನಿರ್ದಾಕ್ಷಿಣ್ಯ ಕ್ರಮಗಳನ್ನು ...

Vijaya Karnataka 29 Aug 2019, 5:00 am
ಬೆಂಗಳೂರು: ಕಳ್ಳಭಟ್ಟಿ ಹಾಗೂ ನಕಲಿ ಅಥವಾ ಕಲಬೆರಕೆ ಮದ್ಯದ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಮತ್ತು ನಿರ್ದಾಕ್ಷಿಣ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಬಕಾರಿ ಸಚಿವ ಎಚ್‌.ನಾಗೇಶ್‌ ಅವರು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Vijaya Karnataka Web nagesh


ಅಬಕಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿ ಇಲಾಖಾ ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿ,''ಮದ್ಯಬಳಕೆದಾರರಿಗೆ ಆರೋಗ್ಯಕರ ವಾತಾವರಣದಲ್ಲಿ ಮದ್ಯ ಪೂರೈಕೆ ಆಗಬೇಕು ಎಂಬುದನ್ನು ಅಧಿಕಾರಿ ಗಮನದಲ್ಲಿರಿಸಿಕೊಳ್ಳಬೇಕು. ಸುರಕ್ಷಿತವಲ್ಲದ ಮದ್ಯ ಬಳಕೆಯನ್ನು ನಿಯಂತ್ರಿಸಬೇಕಿದೆ. ರಾಜಸ್ವ ಸಂಗ್ರಹಣೆಯ ನಿರೀಕ್ಷಿತ ಗುರಿ ಸಾಧಿಸಲು ಕಾರ್ಯತಂತ್ರ ರೂಪಿಸಿ,''ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

''ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳು, ಭರ್ತಿ ಮತ್ತು ಖಾಲಿ ಹುದ್ದೆಗಳನ್ನು ಪರಿಶೀಲಿಸಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಮತ್ತು ಪದೋನ್ನತಿ ಮೂಲಕ ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಬೇಕು,''ಎಂದು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ