ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಪ್ರತಿಯೊಬ್ಬರಿಗೂ ಬುಲಾವ್ ರಾತ್ರಿ ರೆಸಾರ್ಟ್ಗೆ
ಸೋಮವಾರ ನಡೆಯುವ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಭಾನುವಾರ ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ...
Vijaya Karnataka 28 Jul 2019, 5:00 am
ಬೆಂಗಳೂರು: ಸೋಮವಾರ ನಡೆಯುವ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಭಾನುವಾರ ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಯಡಿಯೂರಪ್ಪ ಪ್ರಮಾಣ ವಚನದ ಬಳಿಕ ಬಹುತೇಕ ಶಾಸಕರು ತಮ್ಮ ಕ್ಷೇತ್ರಗಳಿಗೆ ವಾಪಾಸ್ ಆಗಿದ್ದಾರೆ. ಹೀಗಾಗಿ ಭಾನುವಾರ ಎಲ್ಲರಿಗೂ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ದಿಲ್ಲಿ ಪ್ರವಾಸ ಮೊಟಕುಗೊಳಿಸಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರೂ ಇನ್ನು ರಿವರ್ಸ್ ಆಪರೇಷನ್ನಿಂದ ಮುಕ್ತರಾಗಿಲ್ಲ. ಅಧಿಕಾರ ಕಳೆದುಕೊಂಡ ಹತಾಶೆಯಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನು ಬೇಕಾದರೂ ಮಾಡಬಹುದು ಎಂಬ ಆತಂಕ ಇದ್ದೇ ಇದೆ. ಊರಿಗೆ ತೆರಳಿರುವ ಬಿಜೆಪಿ ಶಾಸಕರು ಮರಳುವ ತನಕ ನೆಮ್ಮದಿ ಇಲ್ಲ. ಹೀಗಾಗಿ ಪ್ರತಿಯೊಬ್ಬರ ಮೇಲೂ ಕಣ್ಗಾವಲು ಇಡಲಾಗಿದೆ.
ವಿಧಾನಸೌಧ ಭೇಟಿ
ನಾಲ್ಕನೇ ಶನಿವಾರ ಸರಕಾರಿ ರಜೆ ಇದ್ದರೂ ಸಿಎಂ ಯಡಿಯೂರಪ್ಪ ವಿಧಾನಸೌಧಕ್ಕೆ ಭೇಟಿ ನೀಡಿ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದಾರೆ. ತಮ್ಮ ಹುಟ್ಟೂರಿಗೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ ವಿಧಾನಸೌಧಕ್ಕೆ ಆಗಮಿಸಿದ ಅವರು ಮುಖ್ಯ ಕಾರ್ಯದರ್ಶಿ, ಹಣಕಾಸು ಸೇರಿದಂತೆ ಪ್ರಮುಖ ಇಲಾಖೆ ಅಧಿಕಾರಿಗಳ ಜತೆ ಹಣಕಾಸು ವಿಧೇಯಕಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದರು.
ಬಿಜೆಪಿ ಮೂಲಗಳ ಪ್ರಕಾರ 'ದ್ವಿತೀಯ ವಿಘ್ನ'ದ ಹಿನ್ನೆಲೆಯಲ್ಲಿ ಅವರು ರಜೆಯಿದ್ದರೂ ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ವಿಧಾನಸೌಧದಲ್ಲಿ ಏಕಾಂಗಿಯಾಗಿ ಸಂಪುಟ ಸಭೆ ನಡೆಸಿದ್ದ ಅವರು, ಶನಿವಾರ ಶಕ್ತಿಸೌಧಕ್ಕೆ ಹೋಗದೇ ಇದ್ದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಿತೀಯ ವಿಘ್ನವಾಗುತ್ತದೆ. ಇದರಿಂದ ಅಧಿಕಾರದಲ್ಲಿ ನಿರಂತರತೆ ಇರುವುದಿಲ್ಲ ಎಂಬ ಕಾರಣಕ್ಕೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ.
ಯಡಿಯೂರಪ್ಪ ಪ್ರಮಾಣ ವಚನದ ಬಳಿಕ ಬಹುತೇಕ ಶಾಸಕರು ತಮ್ಮ ಕ್ಷೇತ್ರಗಳಿಗೆ ವಾಪಾಸ್ ಆಗಿದ್ದಾರೆ. ಹೀಗಾಗಿ ಭಾನುವಾರ ಎಲ್ಲರಿಗೂ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ದಿಲ್ಲಿ ಪ್ರವಾಸ ಮೊಟಕುಗೊಳಿಸಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರೂ ಇನ್ನು ರಿವರ್ಸ್ ಆಪರೇಷನ್ನಿಂದ ಮುಕ್ತರಾಗಿಲ್ಲ. ಅಧಿಕಾರ ಕಳೆದುಕೊಂಡ ಹತಾಶೆಯಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನು ಬೇಕಾದರೂ ಮಾಡಬಹುದು ಎಂಬ ಆತಂಕ ಇದ್ದೇ ಇದೆ. ಊರಿಗೆ ತೆರಳಿರುವ ಬಿಜೆಪಿ ಶಾಸಕರು ಮರಳುವ ತನಕ ನೆಮ್ಮದಿ ಇಲ್ಲ. ಹೀಗಾಗಿ ಪ್ರತಿಯೊಬ್ಬರ ಮೇಲೂ ಕಣ್ಗಾವಲು ಇಡಲಾಗಿದೆ.
ವಿಧಾನಸೌಧ ಭೇಟಿ
ನಾಲ್ಕನೇ ಶನಿವಾರ ಸರಕಾರಿ ರಜೆ ಇದ್ದರೂ ಸಿಎಂ ಯಡಿಯೂರಪ್ಪ ವಿಧಾನಸೌಧಕ್ಕೆ ಭೇಟಿ ನೀಡಿ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದಾರೆ. ತಮ್ಮ ಹುಟ್ಟೂರಿಗೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ ವಿಧಾನಸೌಧಕ್ಕೆ ಆಗಮಿಸಿದ ಅವರು ಮುಖ್ಯ ಕಾರ್ಯದರ್ಶಿ, ಹಣಕಾಸು ಸೇರಿದಂತೆ ಪ್ರಮುಖ ಇಲಾಖೆ ಅಧಿಕಾರಿಗಳ ಜತೆ ಹಣಕಾಸು ವಿಧೇಯಕಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದರು.
ಬಿಜೆಪಿ ಮೂಲಗಳ ಪ್ರಕಾರ 'ದ್ವಿತೀಯ ವಿಘ್ನ'ದ ಹಿನ್ನೆಲೆಯಲ್ಲಿ ಅವರು ರಜೆಯಿದ್ದರೂ ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ವಿಧಾನಸೌಧದಲ್ಲಿ ಏಕಾಂಗಿಯಾಗಿ ಸಂಪುಟ ಸಭೆ ನಡೆಸಿದ್ದ ಅವರು, ಶನಿವಾರ ಶಕ್ತಿಸೌಧಕ್ಕೆ ಹೋಗದೇ ಇದ್ದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಿತೀಯ ವಿಘ್ನವಾಗುತ್ತದೆ. ಇದರಿಂದ ಅಧಿಕಾರದಲ್ಲಿ ನಿರಂತರತೆ ಇರುವುದಿಲ್ಲ ಎಂಬ ಕಾರಣಕ್ಕೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ.