ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ಏರುತ್ತಿದ್ದು ಏಪ್ರಿಲ್ 15ರ ನಂತರ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಿಂದ ರಾಷ್ಟ್ರೀಯ ನಾಯಕರ ಪ್ರವಾಸ ಹಾಗೂ ರ್ಯಾಲಿಗಳ ಬಗ್ಗೆ ನೀಲನಕ್ಷೆ ಸಿದ್ಧವಾಗುತ್ತಿದೆ. ಬಿಜೆಪಿಯು ಪ್ರಧಾನಿ ಮೋದಿ ಹಾಗೂ ಶಾ ಅವರಿಂದ ದಿನಕ್ಕೆ ಮೂರು ಸಭೆ ನಡೆಸಿ ಮತ ಸೆಳೆಯಲು ಯೋಜಿಸುತ್ತಿದ್ದರೆ, ಕಾಂಗ್ರೆಸ್ ಪಕ್ಷವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 10 ದಿನ ರಾಜ್ಯ ಪ್ರವಾಸದ ಮೂಲಕ 30 ಕ್ಕೂ ಹೆಚ್ಚು ರ್ಯಾಲಿಯನ್ನು ಆಯೋಜಿಸಲು ಮುಂದಾಗಿದೆ.
ಕಾಂಗ್ರೆಸ್ ಸೋಲಿಸಲೇಬೇಕೆಂದು ಸಂಕಲ್ಪ ತೊಟ್ಟಿರುವ ಪ್ರಧಾನಿ ಮೋದಿ ಹಾಗೂ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕನಿಷ್ಠ ಏಳೆಂಟು ದಿನ ಮೀಸಲಿಡಲಿದ್ದಾರೆ. ದಿನಕ್ಕೆ ಕನಿಷ್ಠ ಮೂರು ಸಭೆಗಳಂತೆ ಇಬ್ಬರಿಂದ ತಲಾ 18 ರಿಂದ 20 ಚುನಾವಣಾ ಪ್ರಚಾರ ಸಭೆಗಳು ನಡೆಯಲಿವೆ.
ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಅವರೂ ಅಂದಾಜು 15 ರಿಂದ 20 ಸಭೆಗಳನ್ನು ಭಾಗವಹಿಸಲಿದ್ದಾರೆ. ಜತೆಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ಹಾಣ್, ಮಹಾರಾಷ್ಟ್ರ ಸಿಎಂ ಫಡ್ನವೀಸ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸ್ಮತಿ ಇರಾನಿ ಸೇರಿ ಪಕ್ಷದ ಘಟಾನುಘಟಿ ನಾಯಕರು ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿಯು, ಎಲ್ಲೆಲ್ಲಿ ಯಾರ್ಯಾರಿಗೆ ಕಾರ್ಯಕ್ರಮ ನಿಗದಿಪಡಿಸಬಹುದು ಎಂಬುದರ ಬಗ್ಗೆ ಕಾರ್ಯಕ್ರಮ ರೂಪಿಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು 'ವಿಕ' ಗೆ ತಿಳಿಸಿದರು.
ರಾಹುಲ್ ಗಾಂಧಿ 10 ದಿನದ ಪ್ರವಾಸ, 30 ರ್ಯಾಲಿ
ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ 10 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ 30 ಕ್ಕೂ ಹೆಚ್ಚು ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ರಾಹುಲ್ ಈಗಾಗಲೇ ಒಂದು ಸುತ್ತಿನ ಪ್ರವಾಸ ಪೂರ್ಣಗೊಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಅವರ 2 ನೇ ಸುತ್ತಿನ ಪ್ರವಾಸ ಆರಂಭವಾಗಲಿದೆ. ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಸಮಾವೇಶ ನಡೆಯುವ ಸಾಧ್ಯತೆಯಿದೆ. ಕನಿಷ್ಠ 30 ಕಡೆ ರ್ಯಾಲಿ ನಡೆಸಬೇಕು ಎನ್ನುವುದು ರಾಹುಲ್ ಉದ್ದೇಶವಾಗಿದೆ. ಈ ಕುರಿತ ವೇಳಾಪಟ್ಟಿ ಅಂತಿಮಗೊಳ್ಳುವುದು ಬಾಕಿಯಿದೆ ಎಂದು ಪ್ರದೇಶ ಕಾಂಗ್ರೆಸ್ ಮೂಲಗಳು ಖಚಿತ ಪಡಿಸಿವೆ.
ಈ ಮಧ್ಯೆ ಎಐಸಿಸಿಯ ನಿಕಟಪೂರ್ವ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, 1 ದಿನಕ್ಕೆ ಸೀಮಿತವಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು 2 ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪರ ಮತ ಯಾಚಿಸುವ ನಿರೀಕ್ಷೆಯಿದೆ.
.................
ಇಂದು ರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ:
ಧಾರವಾಡ, ಗದಗ, ಬಾಗಲಕೋಟ ಹಾಗೂ ಬೆಳಗಾವಿ ಜಿಲ್ಲೆಗಳ ಪ್ರವಾಸದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
ಗುರುವಾರ ಮಧ್ಯಾಹ್ನ ರೋಣದ ಅಬ್ಬಿಗೇರಿ ಅನ್ನದಾನೇಶ್ವರ ಹೈಸ್ಕೂಲ್ ಮೈದಾನದಲ್ಲಿ ಮುಷ್ಟಿ ಧಾನ್ಯ ಸಂಗ್ರಹ ಅಭಿಯಾನ ಸಮಾರೋಪದಲ್ಲಿ ಪಾಲ್ಗೊಳ್ಳುವರು. ಬಳಿಕ ಗದಗ ಜಿಲ್ಲೆ ಗದಗ ಪ್ರವಾಸಕೈಗೊಳ್ಳುವರು. ರಾತ್ರಿ 7.15ಕ್ಕೆ ಧಾರವಾಡ ಗ್ರಾಮೀಣದ ಹೆಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆ, ಹುಬ್ಬಳ್ಳಿಯ ಉದ್ಯಮಿಗಳ ಜತೆ ಸಂವಾದದಲ್ಲಿ ಭಾಗವಹಿಸುವರು.
ಚೆನ್ನಮ್ಮ, ರಾಯಣ್ಣ ಸ್ಮಾರಕಕ್ಕೆ ಭೇಟಿ: ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸ್ಮಾರಕಕ್ಕೆ ಗೌರವಾರ್ಪಣೆ ಸಲ್ಲಿಸಿ ಮುಧೋಳದ ಶಕ್ತಿ ಕೇಂದ್ರ ಸಮಾವೇಶದಲ್ಲಿ ಭಾಗವಹಿಸುವರು. ಗೋಕಾಕ್ನಲ್ಲಿ ರೋಡ್ಶೋ, ನಿಪ್ಪಾಣಿಯಲ್ಲಿ ಮಹಿಳಾ ಸಮಾವೇಶ ಹಾಗೂ ಸಂಜೆ ಬೆಳಗಾವಿ ಕೆಎಲ್ಇ ವೈದ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ದೆಹಲಿಗೆ ವಾಪಸಾಗುವರು.
ಕಾಂಗ್ರೆಸ್ ಸೋಲಿಸಲೇಬೇಕೆಂದು ಸಂಕಲ್ಪ ತೊಟ್ಟಿರುವ ಪ್ರಧಾನಿ ಮೋದಿ ಹಾಗೂ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕನಿಷ್ಠ ಏಳೆಂಟು ದಿನ ಮೀಸಲಿಡಲಿದ್ದಾರೆ. ದಿನಕ್ಕೆ ಕನಿಷ್ಠ ಮೂರು ಸಭೆಗಳಂತೆ ಇಬ್ಬರಿಂದ ತಲಾ 18 ರಿಂದ 20 ಚುನಾವಣಾ ಪ್ರಚಾರ ಸಭೆಗಳು ನಡೆಯಲಿವೆ.
ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಅವರೂ ಅಂದಾಜು 15 ರಿಂದ 20 ಸಭೆಗಳನ್ನು ಭಾಗವಹಿಸಲಿದ್ದಾರೆ. ಜತೆಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ಹಾಣ್, ಮಹಾರಾಷ್ಟ್ರ ಸಿಎಂ ಫಡ್ನವೀಸ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸ್ಮತಿ ಇರಾನಿ ಸೇರಿ ಪಕ್ಷದ ಘಟಾನುಘಟಿ ನಾಯಕರು ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿಯು, ಎಲ್ಲೆಲ್ಲಿ ಯಾರ್ಯಾರಿಗೆ ಕಾರ್ಯಕ್ರಮ ನಿಗದಿಪಡಿಸಬಹುದು ಎಂಬುದರ ಬಗ್ಗೆ ಕಾರ್ಯಕ್ರಮ ರೂಪಿಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು 'ವಿಕ' ಗೆ ತಿಳಿಸಿದರು.
ರಾಹುಲ್ ಗಾಂಧಿ 10 ದಿನದ ಪ್ರವಾಸ, 30 ರ್ಯಾಲಿ
ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ 10 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ 30 ಕ್ಕೂ ಹೆಚ್ಚು ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ರಾಹುಲ್ ಈಗಾಗಲೇ ಒಂದು ಸುತ್ತಿನ ಪ್ರವಾಸ ಪೂರ್ಣಗೊಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಅವರ 2 ನೇ ಸುತ್ತಿನ ಪ್ರವಾಸ ಆರಂಭವಾಗಲಿದೆ. ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಸಮಾವೇಶ ನಡೆಯುವ ಸಾಧ್ಯತೆಯಿದೆ. ಕನಿಷ್ಠ 30 ಕಡೆ ರ್ಯಾಲಿ ನಡೆಸಬೇಕು ಎನ್ನುವುದು ರಾಹುಲ್ ಉದ್ದೇಶವಾಗಿದೆ. ಈ ಕುರಿತ ವೇಳಾಪಟ್ಟಿ ಅಂತಿಮಗೊಳ್ಳುವುದು ಬಾಕಿಯಿದೆ ಎಂದು ಪ್ರದೇಶ ಕಾಂಗ್ರೆಸ್ ಮೂಲಗಳು ಖಚಿತ ಪಡಿಸಿವೆ.
ಈ ಮಧ್ಯೆ ಎಐಸಿಸಿಯ ನಿಕಟಪೂರ್ವ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, 1 ದಿನಕ್ಕೆ ಸೀಮಿತವಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು 2 ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪರ ಮತ ಯಾಚಿಸುವ ನಿರೀಕ್ಷೆಯಿದೆ.
.................
ಇಂದು ರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ:
ಧಾರವಾಡ, ಗದಗ, ಬಾಗಲಕೋಟ ಹಾಗೂ ಬೆಳಗಾವಿ ಜಿಲ್ಲೆಗಳ ಪ್ರವಾಸದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
ಗುರುವಾರ ಮಧ್ಯಾಹ್ನ ರೋಣದ ಅಬ್ಬಿಗೇರಿ ಅನ್ನದಾನೇಶ್ವರ ಹೈಸ್ಕೂಲ್ ಮೈದಾನದಲ್ಲಿ ಮುಷ್ಟಿ ಧಾನ್ಯ ಸಂಗ್ರಹ ಅಭಿಯಾನ ಸಮಾರೋಪದಲ್ಲಿ ಪಾಲ್ಗೊಳ್ಳುವರು. ಬಳಿಕ ಗದಗ ಜಿಲ್ಲೆ ಗದಗ ಪ್ರವಾಸಕೈಗೊಳ್ಳುವರು. ರಾತ್ರಿ 7.15ಕ್ಕೆ ಧಾರವಾಡ ಗ್ರಾಮೀಣದ ಹೆಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆ, ಹುಬ್ಬಳ್ಳಿಯ ಉದ್ಯಮಿಗಳ ಜತೆ ಸಂವಾದದಲ್ಲಿ ಭಾಗವಹಿಸುವರು.
ಚೆನ್ನಮ್ಮ, ರಾಯಣ್ಣ ಸ್ಮಾರಕಕ್ಕೆ ಭೇಟಿ: ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸ್ಮಾರಕಕ್ಕೆ ಗೌರವಾರ್ಪಣೆ ಸಲ್ಲಿಸಿ ಮುಧೋಳದ ಶಕ್ತಿ ಕೇಂದ್ರ ಸಮಾವೇಶದಲ್ಲಿ ಭಾಗವಹಿಸುವರು. ಗೋಕಾಕ್ನಲ್ಲಿ ರೋಡ್ಶೋ, ನಿಪ್ಪಾಣಿಯಲ್ಲಿ ಮಹಿಳಾ ಸಮಾವೇಶ ಹಾಗೂ ಸಂಜೆ ಬೆಳಗಾವಿ ಕೆಎಲ್ಇ ವೈದ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ದೆಹಲಿಗೆ ವಾಪಸಾಗುವರು.