ಆ್ಯಪ್ನಗರ

ಬ್ರಾಹ್ಮಣರಿಗೆ ಶೇ. 10 ಮೀಸಲಾತಿ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ಆಗ್ರಹ

ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಶೇ.10 ಮೀಸಲಾತಿ ನೀಡಿದೆ, ಇದು ರಾಜ್ಯದಲ್ಲಿನ ಬ್ರಾಹ್ಮಣ, ಆರ‍್ಯವೈಶ್ಯ ಮತ್ತಿತರ ಸಮುದಾಯಗಳಿಗೆ ಸಿಗುವಂತಾಗಲು ಕೂಡಲೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಸಚ್ಚಿದಾನಂದ ಮೂರ್ತಿ ಆಗ್ರಹಿಸಿದ್ದಾರೆ.

Vijaya Karnataka 6 Aug 2020, 9:00 pm

ಕೋಲಾರ: ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಿರುವ ಶೇ.10ರ ಮೀಸಲಾತಿ ಸೌಲಭ್ಯ ಬ್ರಾಹ್ಮಣರಿಗೆ ಸಿಗುವಂತಾಗಲು ರಾಜ್ಯ ಸರಕಾರ ಕೂಡಲೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮನವಿ ಮಾಡಿದರು.
Vijaya Karnataka Web Sachhidananda Murthy


ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಶೇ.10 ಮೀಸಲಾತಿ ನೀಡಿದೆ, ಇದು ರಾಜ್ಯದಲ್ಲಿನ ಬ್ರಾಹ್ಮಣ, ಆರ‍್ಯವೈಶ್ಯ ಮತ್ತಿತರ ಸಮುದಾಯಗಳಿಗೆ ಸಿಗುವಂತಾಗಲು ಕೂಡಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರಿವಾಜ್ಞೆ ಮೂಲಕ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಮನವಿಗೆ ಸ್ಪಂದಿಸಿ ಬ್ರಾಹ್ಮಣರಿಗೂ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಿಸಿದ ಅವರು, ಈಗಾಗಲೇ ಸಂಬಂಧಿಸಿದ ದಾಖಲೆ ನೀಡಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಬೆಂಗಳೂರು ನಗರವೊಂದರಲ್ಲೇ ಈವರೆಗೂ 4,800 ಮಂದಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು. ರಾಜ್ಯ ಸರಕಾರವನ್ನು ಮಂಡಳಿಗೆ 300 ಕೋಟಿ ರೂ. ಅನುದಾನ ಒದಗಿಸುವಂತೆ ಕೇಳಿದ್ದು, ಈಗ 30 ಕೋಟಿ ನೀಡಿದ್ದಾರೆ. ಇದರಲ್ಲಿ 5 ಕೋಟಿ ರೂ.ಕಚೇರಿ ನಿರ್ವಹಣೆಗೆ ಹಾಗೂ ಉಳಿದ 25 ಕೋಟಿ ರೂ. ಸಮುದಾಯಕ್ಕೆ ಬಳಸಲಾಗುತ್ತಿದೆ ಎಂದರು.

ಎಪಿಎಂಸಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ - ಅಧಿಕೃತವಾಗಿ ಜಾರಿ

ಅಭಿವೃದ್ಧಿಗಾಗಿ ವಿವಿಧ ಯೋಜನೆ

ಸಾಂದೀಪನಿ ಶಿಷ್ಯ ವೇತನ, ವಿದೇಶಗಳಲ್ಲಿ ವ್ಯಾಸಂಗಕ್ಕೆ 3 ಲಕ್ಷ ದವರೆಗೂ ಶೂನ್ಯ ಬಡ್ಡಿ ಸಾಲ ಸೌಲಭ್ಯ, ಆಚಾರ್ಯತ್ರಯರ ವೇದ ಶಿಷ್ಯವೇತನ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬ್ರಾಹ್ಮಣರಿಗೆ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ, ಐಎಎಸ್‌, ಐಪಿಎಸ್‌, ಕೆಎಎಸ್‌ ಮತ್ತಿತರ ಸ್ವರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಣಕ್ಯ ಆಡಳಿತ ತರಬೇತಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ