ಆ್ಯಪ್ನಗರ

ನವಲಗುಂದ ಲಾಠಿ ಚಾರ್ಜ್‌: 6 ಪೇದೆಗಳ ಅಮಾನತು

ನವಲಗುಂದ ಲಾಠಿ ಚಾರ್ಜ್ ಪ್ರಕರಣ ಸಂಬಂಧ ಆರು ಪೋಲಿಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ.

ವಿಕ ಸುದ್ದಿಲೋಕ 2 Aug 2016, 12:08 pm
ಧಾರವಾಡ: ನವಲಗುಂದ ಲಾಠಿ ಚಾರ್ಜ್ ಪ್ರಕರಣ ಸಂಬಂಧ ಆರು ಪೋಲಿಸ್ ಪೇದೆಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಮೇಂದ್ರ ಮೀನಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.
Vijaya Karnataka Web brutalities in navalgund 6 constables suspended
ನವಲಗುಂದ ಲಾಠಿ ಚಾರ್ಜ್‌: 6 ಪೇದೆಗಳ ಅಮಾನತು


ಘಟನೆ ಸಂಬಂಧ ಬೆಳಗಾವಿಯ 2 ವಿಜಯಪುರ 2 ಹಾಗೂ ನವಲಗುಂದ ಇಬ್ಬರು ಪೇದೆಗಳ ಅಮಾನತುಗೊಳಿಸಲಾಗಿದೆ. ಆದರೆ, ಅಮಾನತುಗೊಂಡ ಪೊಲೀಸ್ ಪೇದೆಗಳ ಹೆಸರು ಬಹಿರಂಗ ಪಡಿಸಲಾಗದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ಕಳೆದ ಶುಕ್ರವಾರ ಮಹದಾಯಿ ಹೋರಾಟಗಾರರ ಮನೆಗಳಿಗೆ ನುಗ್ಗಿದ ಪೊಲೀಸರು ಮಹಿಳೆಯರು ಮತ್ತು ವೃದ್ಧರ ಮೇಲೆ ಮನಬಂದಂತೆ ಲಾಠಿ ಬೀಸಿದ ಅಮಾನವೀಯ ಘಟನೆ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ರೈತರ ಕ್ಷಮೆ ಯಾಚಿಸಿ, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದರು.

ಲಾಠಿ ಪ್ರಹಾರದ ವೇಳೆ ಸ್ಥಳದಲ್ಲಿದ್ದ ಸರ್ಕಲ್‌ ಇನ್ಸ್‌ಪೆಕ್ಟರ್‌ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಲು ಮತ್ತು ಡಿವೈಎಸ್ಪಿಯನ್ನು ಬೇರೆಡೆ ವರ್ಗಾಯಿಸಲು ಆದೇಶಿಸಲಾಗಿತ್ತು.

'ಎಡಿಜಿಪಿ ಕಮಲ್‌ ಪಂತ್‌ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ವಾರದೊಳಗೆ ವರದಿ ಪಡೆದು ತಪ್ಪಿತಸ್ಥ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲಾಗುವುದು, ಎಂದು ಸುದ್ದಿಗೋಷ್ಠಿಯಲ್ಲಿ ಭಾನುವಾರ ಹೇಳಿದ್ದರು.

'ಮಹದಾಯಿ ನ್ಯಾಯಾಧಿಕರಣದ ಮಧ್ಯಾಂತರ ಆದೇಶ ಬಂದ ನಂತರ ನವಲಗುಂದ, ನರಗುಂದ ಇತರೆಡೆ ನಡೆದ ಪ್ರತಿಭಟನೆಯಲ್ಲಿ ಸರಕಾರಿ ಕಚೇರಿಗಳಿಗೆ ಬೆಂಕಿ ಹಾಕಿ, ದಾಖಲೆಪತ್ರಗಳನ್ನು ನಾಶಪಡಿಸಲಾಗಿತ್ತು. ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾಗದಂತೆ ಶಾಂತಿಯುತವಾಗಿ ಬಂದ್‌ ನಡೆಸಲು ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಲಾಠಿ ಚಾರ್ಜ್‌ ನಡೆಸಲು ಪೊಲೀಸರಿಗೆ ಆದೇಶ ನೀಡಿರಲಿಲ್ಲ,' ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ