ಆ್ಯಪ್ನಗರ

ಈ ವರೆಗೆ ನಡೆದ ವಿಶ್ವಾಸಮತ ಪ್ರಕ್ರಿಯೆ ಎಷ್ಟು ದಿನ ತೆಗೆದುಕೊಂಡಿತ್ತು ಗೊತ್ತೇ?

ಈ ವರೆಗೆ ನಡೆದ ಎಲ್ಲ ವಿಶ್ವಾಸತ ಪ್ರಕ್ರಿಯೆಗಳು ಒಂದು ದಿನದಲ್ಲಿ ಮುಗಿದಿದೆ. ಈ ಸಂದರ್ಭದಲ್ಲಿ ನಡೆಯುವ ವಿಶ್ವಾಸಮತ ಪ್ರಕ್ರಿಯೆಯನ್ನೂ ಒಂದು ದಿನದಲ್ಲಿ ಮುಗಿಸುವಂತೆ ಬಿಎಸ್‌ ಯಡಿಯೂರಪ್ಪ, ಸ್ಪೀಕರ್‌ ಗೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ ವಿಪಕ್ಷ ಹಾಗೂ ಬಂಡಾಯ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು.

Vijaya Karnataka Web 18 Jul 2019, 12:05 pm
ಬೆಂಗಳೂರು: ಈ ವರೆಗೆ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಎಲ್ಲ ವಿಶ್ವಾಸಮತ ಯಾಚನೆ ಪ್ರಕ್ರಿಯೆಗಳು ಒಂದೇ ದಿನದಲ್ಲಿ ಮುಗಿದು ಹೋಗಿದೆ ಎಂದು ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web HDK


ಅಷ್ಟೇ ಅಲ್ಲ, ಈ ಬಾರಿಯೂ ಒಂದು ದಿನದಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸ್ಪೀಕರ್‌ ರಮೇಶ್‌ ಕುಮಾರ್‌ ಅವರಲ್ಲಿ ಮನವಿ ಮಾಡಿದರು.

ದೇಶಕ್ಕೇ ಮಾದರಿಯಾಗಿರುವ ನಮ್ಮ ವಿಧಾನಸಭೆಯಲ್ಲಿ ಈ ವರೆಗೆ ಏಳು ಬಾರಿ ವಿಶ್ವಾಸಮತಯಾಚಿಸಲಾಗಿದೆ. ರಾಜ್ಯದ 9, 10, 12 ಹಾಗೂ 13ನೇ ವಿಧಾನಸಭೆಯ ವೇಳೆ ಒಟ್ಟಾರೆ 7 ಬಾರಿ ನಡೆಸಲಾದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಒಂದೇ ದಿನದಲ್ಲಿ ಮುಗಿಸಲಾಗಿದೆ. ಅದರಲ್ಲೂ 13ನೇ ವಿಧಾನಸಭೆಯಲ್ಲಿ ಮೂರು ಬಾರಿ ವಿಶ್ವಾಸಮತ ಯಾಚಿಸಲಾಗಿದ್ದು, ಎಲ್ಲವೂ ಒಂದೇ ದಿನಕ್ಕೆ ಮುಗಿದು ಹೋಗಿದೆ. ಹೀಗಾಗಿ ಈ ಬಾರಿಯೂ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಯನ್ನು ಒಂದು ದಿನದಲ್ಲಿ ಮುಗಿಸುವಂತೆ ಮನವಿ ಮಾಡಿದರು.

ಈ ವೇಳೆ ಪ್ರತಿಕ್ರಿಯೆ ನೀಡಿದ ಸ್ಪೀಕರ್‌ ರಮೇಶ್‌ ಕುಮಾರ್‌, ವಿಧಾನಸಭೆ ನಾಯಕರು ಡಿಸೈಡ್‌ ಮಾಡಬೇಕಾದ ವಿಷಯ. ನನಗೂ ನನ್ನ ಊರಲ್ಲಿ ಕೆಲಸವಿದೆ. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಚರ್ಚೆಗೆ ಅವಕಾಶವಿದೆ ಎಂದು ಹೇಳಿದರು.


ಬಿ.ಎಸ್‌. ಯಡಿಯೂರಪ್ಪ ಅವರ ವಿಚಾರಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ವಿಪಕ್ಷ ಹಾಗೂ ಬಂಡಾಯ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು.

ಒಂದು ಸಾಲಿನ ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕರು, ಜಿಂದಾಲ್ ಭೂಮಿ ಮಾರಾಟದಲ್ಲಿ ಭ್ರಷ್ಟಚಾರ ನಡೆದಿದೆ, ಕೋಟಿಗಟ್ಟಲೇ ಲೂಟಿ ಹೊಡೆಯುತ್ತಿದ್ದಾರೆ ಇಂತಹ ಸರ್ಕಾರ ಬೇಡವೆಂಬ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದಾಗಿ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅಂತಹ ಆಪಾದನೆಗಳಿಗೆ ದೇಶದ ಜನರಿಗೆ, ನಾಡಿನ ಜನರಿಗೆ ಉತ್ತರ ಕೊಡಬೇಕಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ