ಆ್ಯಪ್ನಗರ

ಕದ್ರಿ ಗೋಪಾಲನಾಥ್ ನಿಧನ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ

ಶುಕ್ರವಾರ ನಿಧನರಾದ ಖ್ಯಾತ ಸ್ಯಾಕ್ಸೋಫೋನ್ ಕಲಾವಿದ, ಡಾ.ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳೀನ್ ಕುಮಾರ್, ಶೋಭಾ ಕರಂದ್ಲಾಜೆ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Vijaya Karnataka Web 11 Oct 2019, 3:57 pm
ಬೆಂಗಳೂರು: ಶುಕ್ರವಾರ ನಿಧನರಾದ ಖ್ಯಾತ ಸ್ಯಾಕ್ಸೋಫೋನ್ ಕಲಾವಿದ, ಪದ್ಮಶ್ರೀ ಪುರಸ್ಕೃತ ಡಾ.ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Vijaya Karnataka Web kadri gopa bsy


ಸ್ಯಾಕ್ಸೊಫೋನ್ ಸಾಮ್ರಾಟ ಕದ್ರಿ ಗೋಪಾಲನಾಥ್ ಎಷ್ಟು ಸರಳ ಸ್ವಭಾವದವ್ರು ಗೊತ್ತಾ? : ಶ್ರದ್ಧಾಂಜಲಿ

ವಿದೇಶಿ ವಾದ್ಯವೊಂದನ್ನು ಶಾಸ್ತ್ರೀಯ ಸಂಗೀತಕ್ಕೆ ಹೊಂದಿಸಿಕೊಂಡು ಮಾಧುರ್ಯದ ಹೊನಲು ಹರಿಸಿದ ಶ್ರೇಷ್ಠ ಸಂಗೀತಗಾರ ಕದ್ರಿ ಗೋಪಾಲನಾಥ್. ಅವರ ನಿಧನದಿಂದ ಸಂಗೀತ ಲೋಕದ ತಾರೆಯೊಂದು ಕಳಚಿದಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ , ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿಎಸ್ ವೈ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಸಿದ್ಧ ಸ್ಯಾಕ್ಸೋಫೋನ್ ಕಲಾವಿದ, ಪದ್ಮಶ್ರೀ ಪುರಸ್ಕೃತ ಡಾ.ಕದ್ರಿ ಗೋಪಾಲ್‌ನಾಥ್ ನಿಧನ.

ಜನ ಸಾಮಾನ್ಯ ಎಂಬ ಟ್ವೀಟ್ ಖಾತೆ ಕದ್ರಿ ಅವರು ಆರಂಭಿಕ ದಿನಗಳಲ್ಲಿ ಸ್ಯಾಕ್ಸೋಫೋನ್ ನುಡಿಸುತ್ತಿದ್ದ 1982 ರ ಫೋಟೋವನ್ನು ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.

ಕದ್ರಿ-ಮಜುಂದಾರ್‌ ಜುಗಲ್ಬಂದಿ ಮೋಡಿ

ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದು, ಗೋಪಾಲನಾಥ್ ಅವರು ತಮ್ಮ ಅಧ್ಭುತ ಕಲೆಯಿಂದ ಜಗತ್ತಿಗೆ ಮಂಗಳೂರಿನ ಹೆಸರನ್ನು ಪರಿಚಯಿಸಿದ ಮೇರು ವ್ಯಕ್ತಿಯಾಗಿದ್ದರು. ಸ್ಯಾಕ್ಸೋಫೋನ್ ಗೆ ವಿಶೇಷ ಮಾನ್ಯತೆ ದೊರಕಿಸಿಕೊಟ್ಟವರು. ಈಗ ತಮ್ಮ ಸ್ವರ ಮಾಧುರ್ಯಕ್ಕೆ ವಿರಾಮದ ಚುಕ್ಕಿ ನೀಡಿರುವುದುಅತ್ಯಂತ ದುಃಖದಾಯಕ ಸಂಗತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಟ್ವೀಟ್ ಮಾಡಿ " ಪದ್ಮಶ್ರೀ ಪುರಸ್ಕೃತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇಂದು ನಿಧನರಾಗಿದ್ದಾರೆ. ಸ್ಯಾಕ್ಸೋಫೋನ್ ಎಂಬ ಪಾಶ್ಚಾತ್ಯ ವಾದ್ಯದ ಕಲೆಯನ್ನು ಅವರು ತಮ್ಮದಾಗಿಸಿಕೊಂಡಿದ್ದವರು. ಆ ಕ್ಷೇತ್ರಕ್ಕೇ ಮೇರು ಹಂತಕ್ಕೇರಿದ ಅವರ ಸಾಧನೆ ಎಲ್ಲರಿಗೂ ಅನುಕರಣೀಯ. ಅವರ ಆತ್ಮಕ್ಕೆ ಶಾಂತಿ ದೊರೆಯಲೆಂದು ಕೋರುತ್ತೇನೆ." ಎಂದಿದ್ದಾರೆ.


ಕುಡ್ಲದ ಸಂಗೀತ ಮಾಂತ್ರಿಕ ಮಣಿಕಾಂತ್‌ ಕದ್ರಿ


ಸಂಸದೆ ಶೋಭಾ ಕರಂದ್ಲಾಜೆ ಕೂಡ ಇವರ ನಿಧನನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. " ಶಾಸ್ತ್ರೀಯ ಸಂಗೀತದಲ್ಲಿ ಸ್ಯಾಕ್ಸೋಫೋನ್ ಬಳಸಿ ಕ್ರಾಂತಿ ಮಾಡಿದ ಕದ್ರಿ ಗೋಪಾಲನಾಥ್ ಇನ್ನಿಲ್ಲ. ಭಾರತೀಯ ಸಂಗೀತಕ್ಕೆ ಲೋಕಕ್ಕೆ ಇವರ ಸಾವು ಬಹುದೊಡ್ಡ ನಷ್ಟ. ಅಗಲಿದ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ