ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದು ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಯೋಜನೆಯನ್ನು 5 ತಿಂಗಳುಗಳ ಕಾಲ ವಿಸ್ತರಣೆ ಮಾಡಿರುವ ಘೋಷಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಿ ಭಾಷಣದ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಬಿಎಸ್ವೈ, ಲಾಕ್ಡೌನ್ ಅವಧಿಯಲ್ಲಿ ಜಾರಿಗೆ ತಂದ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ವಯ ದೇಶದ 80 ಕೋಟಿ ಜನಸಂಖ್ಯೆಗೆ ಏಪ್ರಿಲ್ನಿಂದ ಜೀನ್ ವರೆಗೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ/ ಗೋಧಿ ಹಾಗೂ ಪ್ರತಿ ಕುಟುಂಬಕ್ಕೆ 1 ಕೆಜಿ ಬೆಳೆ ಉಚಿತವಾಗಿ ನೀಡಲಾಗಿತ್ತು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ: ದೀಪಾವಳಿವರಗೆ ಉಚಿತ ಪಡಿತರ!
ಇಂದಿನ ಪರಿಸ್ಥಿತಿಯನ್ನು ಮನಗಂಡು ಬಡವರಿಗೆ ಉಚಿತವಾಗಿ ಆಹಾರ ನೀಡುವ ಯೋಜನೆಯನ್ನು ಮುಂದಿನ 5 ತಿಂಗಳ ಗಳ ಕಾಲ ಮುಂದುವರಿಸಲು ಘೋಷಿಸಿದ್ದಾರೆ. ಈ ಯೋಜನೆಗೆ 90 ಸಾವಿರ ಕೋಟಿ ವೆಚ್ಚವಾಗಲಿದೆ. ಹಾಗೂ ಹಿಂದೆ ಜಾರಿಯಲ್ಲಿದ್ದ ಯೋಜನೆಗೆ ಖರ್ಚಾದ 60 ಸಾವಿರ ಕೋಟಿ ಸೇರಿ ಒಟ್ಟು 1.50 ಲಕ್ಷ ಕೋಟಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ಒದಗಿಸುವುದು ಅಭಿನಂದನಾರ್ಹ ಸಂಗತಿಯಾಗಿದೆ ಎಂದಿದ್ದಾರೆ. ಅಲ್ಲದೆ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ದೇಶ ಒಂದು ಪಡಿತರ ಯೋಜನೆ ಜಾರಿಗೆ ತಂದಿರುವುದು ಸಂತೋಷದಾಯಕ ಸಂಗತಿ ಎಂದು ಯಡಿಯೂರಪ್ಪ ತಿಳಿಸಿದರು.
ಚೀನಾದ ಕಿರಿಕ್ ಮಧ್ಯೆಯೇ ಭಾರತ-ಭೂತಾನ್ ಗೆಳೆತನ ಮತ್ತಷ್ಟು ಗಟ್ಟಿ, ಜಲ ವಿದ್ಯುತ್ ಯೋಜನೆಗೆ ಸಹಿ!
ಇತರ ದೇಶಗಳಿಗೆ ಹೋಲಿಸಿದರೆ ಕೋವಿಡ್ -19 ನಿಯಂತ್ರಣದಲ್ಲಿ ಇದೆ ಎಂದು ಮೋದಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಇದಕ್ಕೆ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿರುವುದು ಕಾರಣ. ಆದರೆ ಅನ್ಲಾಕ್ ಅವಧಿಯಲ್ಲಿ ನಿಮಯಗಳ ಬಗ್ಗೆ ಹೆಚ್ಚಿನ ಗಮನ ನೀಡದಿರುವುದು ಆತಂಕದ ಸಂಗತಿಯಾಗಿದೆ ಎಂದು ತಿಳಿಸಿರುತ್ತಾರೆ.ಈ ಬಗ್ಗೆ ಜನರು ಎಚ್ಚೆತ್ತುಕೊಂಡು ನಿಯಮಗಳನ್ನು ಪಾಲಿಸಿ ಸಂವೇದನಾಶೀಲತೆಯಿಂದ ತೀರ್ಮಾನ ತೆಗೆದುಕೊಳ್ಳುವುದರಿಂದ ಉತ್ತಮ ಫಲಿತಾಂಶ ದೊರಕುತ್ತದೆ ಎಂಬ ಆಶಾಭಾವನೆಯನ್ನು ಬಿಎಸ್ವೈ ವ್ಯಕ್ತಪಡಿಸಿದರು.
ಪ್ರಧಾನಿ ಭಾಷಣದ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಬಿಎಸ್ವೈ, ಲಾಕ್ಡೌನ್ ಅವಧಿಯಲ್ಲಿ ಜಾರಿಗೆ ತಂದ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ವಯ ದೇಶದ 80 ಕೋಟಿ ಜನಸಂಖ್ಯೆಗೆ ಏಪ್ರಿಲ್ನಿಂದ ಜೀನ್ ವರೆಗೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ/ ಗೋಧಿ ಹಾಗೂ ಪ್ರತಿ ಕುಟುಂಬಕ್ಕೆ 1 ಕೆಜಿ ಬೆಳೆ ಉಚಿತವಾಗಿ ನೀಡಲಾಗಿತ್ತು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ: ದೀಪಾವಳಿವರಗೆ ಉಚಿತ ಪಡಿತರ!
ಇಂದಿನ ಪರಿಸ್ಥಿತಿಯನ್ನು ಮನಗಂಡು ಬಡವರಿಗೆ ಉಚಿತವಾಗಿ ಆಹಾರ ನೀಡುವ ಯೋಜನೆಯನ್ನು ಮುಂದಿನ 5 ತಿಂಗಳ ಗಳ ಕಾಲ ಮುಂದುವರಿಸಲು ಘೋಷಿಸಿದ್ದಾರೆ. ಈ ಯೋಜನೆಗೆ 90 ಸಾವಿರ ಕೋಟಿ ವೆಚ್ಚವಾಗಲಿದೆ. ಹಾಗೂ ಹಿಂದೆ ಜಾರಿಯಲ್ಲಿದ್ದ ಯೋಜನೆಗೆ ಖರ್ಚಾದ 60 ಸಾವಿರ ಕೋಟಿ ಸೇರಿ ಒಟ್ಟು 1.50 ಲಕ್ಷ ಕೋಟಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ಒದಗಿಸುವುದು ಅಭಿನಂದನಾರ್ಹ ಸಂಗತಿಯಾಗಿದೆ ಎಂದಿದ್ದಾರೆ. ಅಲ್ಲದೆ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ದೇಶ ಒಂದು ಪಡಿತರ ಯೋಜನೆ ಜಾರಿಗೆ ತಂದಿರುವುದು ಸಂತೋಷದಾಯಕ ಸಂಗತಿ ಎಂದು ಯಡಿಯೂರಪ್ಪ ತಿಳಿಸಿದರು.
ಚೀನಾದ ಕಿರಿಕ್ ಮಧ್ಯೆಯೇ ಭಾರತ-ಭೂತಾನ್ ಗೆಳೆತನ ಮತ್ತಷ್ಟು ಗಟ್ಟಿ, ಜಲ ವಿದ್ಯುತ್ ಯೋಜನೆಗೆ ಸಹಿ!
ಇತರ ದೇಶಗಳಿಗೆ ಹೋಲಿಸಿದರೆ ಕೋವಿಡ್ -19 ನಿಯಂತ್ರಣದಲ್ಲಿ ಇದೆ ಎಂದು ಮೋದಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಇದಕ್ಕೆ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿರುವುದು ಕಾರಣ. ಆದರೆ ಅನ್ಲಾಕ್ ಅವಧಿಯಲ್ಲಿ ನಿಮಯಗಳ ಬಗ್ಗೆ ಹೆಚ್ಚಿನ ಗಮನ ನೀಡದಿರುವುದು ಆತಂಕದ ಸಂಗತಿಯಾಗಿದೆ ಎಂದು ತಿಳಿಸಿರುತ್ತಾರೆ.ಈ ಬಗ್ಗೆ ಜನರು ಎಚ್ಚೆತ್ತುಕೊಂಡು ನಿಯಮಗಳನ್ನು ಪಾಲಿಸಿ ಸಂವೇದನಾಶೀಲತೆಯಿಂದ ತೀರ್ಮಾನ ತೆಗೆದುಕೊಳ್ಳುವುದರಿಂದ ಉತ್ತಮ ಫಲಿತಾಂಶ ದೊರಕುತ್ತದೆ ಎಂಬ ಆಶಾಭಾವನೆಯನ್ನು ಬಿಎಸ್ವೈ ವ್ಯಕ್ತಪಡಿಸಿದರು.