ಬೆಂಗಳೂರು: ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಲಾಯಿತು. ವಿಧಾನಸಭೆಯಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಉಭಯ ಸದನಗಳ ಸದಸ್ಯರ ಸಮ್ಮುಖದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅತ್ಯುತ್ತಮ ಪ್ರಶಸ್ತಿ ಘೋಷಣೆ ಮಾಡಿದರು. ಸದನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಶಾಸಕರಿಗೆ ಈ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗಿದೆ. 2020-21ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ಕರ್ನಾಟಕ ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡುತ್ತಿದ್ದೇವೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೊತೆ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದರು.
ಲೋಕಸಭೆ ಸ್ಪೀಕರ್ ಆಗಿ ಬಿರ್ಲಾ ಅವರು ಅತ್ಯುತ್ತಮ ರೀತಿಯ ಮಾರ್ಗದರ್ಶನ ಕೊಡುತ್ತಿದ್ದಾರೆ. ಲೋಕಸಭಾ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲು ಆರಂಭಿಸಲು ಸಲಹೆ ಕೊಟ್ಟಿದ್ದರು. ಅನೇಕ ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ರೂಢಿ ಇದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲು ಸಮಿತಿ ಕೂಡಾ ರಚನೆ ಮಾಡಲಾಗಿತ್ತು. ಆಯ್ಕೆಗೆ ಬಹಳ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗಿತ್ತು ಎಂದರು.
ಜನಪರವಾದ ಆಡಳಿತ ಕೊಟ್ಟವರು ಯಡಿಯೂರಪ್ಪ, ಅವರು ರೈತ ಪರ ನಾಯಕರಾದವರು. ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಯಡಿಯೂರಪ್ಪ ಹೆಸರು ಆಯ್ಕೆ ಮಾಡುವ ಅವಕಾಶ ಸಿಕ್ಕಿದ್ದು ಹೆಮ್ಮೆ ಎಂದು ಹೇಳಿದರು.
ಇದಕ್ಕೂ ಮುನ್ನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಶುಕ್ರವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿಉತ್ತಮ ಸಂಸದೀಯ ಪಟುವನ್ನು ಆಯ್ಕೆ ಮಾಡುವಂತೆ ಎಲ್ಲ ರಾಜ್ಯಗಳ ವಿಧಾನಸಭೆಯಲ್ಲಿಯೂ 'ಅತ್ಯುತ್ತಮ ಶಾಸಕ'ನನ್ನು ಪ್ರತಿ ವರ್ಷ ಗುರುತಿಸುವ ವ್ಯವಸ್ಥೆ ಇರಬೇಕು ಎಂದು ಓಂ ಬಿರ್ಲಾ ಹೇಳಿದ್ದರು. ಅಸ್ಸಾಂ, ಗುಜರಾತ್, ಜಾರ್ಖಂಡ್, ರಾಜಸ್ಥಾನ, ಉತ್ತರಾಖಂಡ ಮುಂತಾದ ಕಡೆ ಈ ಪದ್ಧತಿ ಇದೆ.
ರಾಜ್ಯ ವಿಧಾನಸಭೆಯಲ್ಲಿಯೂ 'ಅತ್ಯುತ್ತಮ ಶಾಸಕ ಪ್ರಶಸ್ತಿ' ನೀಡುವ ಸಂಬಂಧ ಜನವರಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಶಾಸಕರು ಮತಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳು, ಶಾಸಕರಾಗಿ ಪಡೆದಿರುವ ಅನುಭವ, ಸದನದಲ್ಲಿ ನಡೆಯುವ ಚರ್ಚೆಗಳಲ್ಲಿ ತೋರಿಸುವ ಕೌಶಲ, ಸದನದಲ್ಲಿ ಪ್ರಸ್ತಾಪಿಸುವ ವಿಷಯ ಹಾಗೂ ಅದರ ಗಂಭೀರತೆ, ಕನ್ನಡ ಭಾಷೆಯಲ್ಲಿನ ಹಿಡಿತ ಸೇರಿದಂತೆ ಸುಮಾರು ಹದಿನೈದು ಅಂಶಗಳನ್ನು ಈ ಪ್ರಶಸ್ತಿಗೆ ಶಾಸಕರ ಆಯ್ಕೆಗೆ ಪರಿಗಣಿಸಲಾಗುತ್ತದೆ.
ವಿಧಾನಸಭೆ ಸ್ಪೀಕರ್, ಆಯ್ಕೆ ಸಮಿತಿಗೆ ಅಧ್ಯಕ್ಷರಾಗಿರುತ್ತಾರೆ. ಮುಖ್ಯಮಂತ್ರಿ, ವಿಧಾನಸಭೆ ಉಪಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರಿಂದ ನಾಮನಿರ್ದೇಶನ ಮಾಡಲಾದ ಒಬ್ಬ ಸದಸ್ಯರು ಸಮಿತಿಯಲ್ಲಿ ಇರುತ್ತಾರೆ. ವಿಧಾನಸಭೆ ಕಾರ್ಯದರ್ಶಿ ಈ ಸಮಿತಿಯ ಕಾರ್ಯದರ್ಶಿಯಾಗಿರುತ್ತಾರೆ.
ಈ ಸಮಿತಿ ರಚನೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ ಅವರು ಈಗ ಕೇವಲ ಶಾಸಕರಾಗಿರುವುದರಿಂದ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ಕರ್ನಾಟಕ ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡುತ್ತಿದ್ದೇವೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೊತೆ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದರು.
ಲೋಕಸಭೆ ಸ್ಪೀಕರ್ ಆಗಿ ಬಿರ್ಲಾ ಅವರು ಅತ್ಯುತ್ತಮ ರೀತಿಯ ಮಾರ್ಗದರ್ಶನ ಕೊಡುತ್ತಿದ್ದಾರೆ. ಲೋಕಸಭಾ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲು ಆರಂಭಿಸಲು ಸಲಹೆ ಕೊಟ್ಟಿದ್ದರು. ಅನೇಕ ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ರೂಢಿ ಇದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲು ಸಮಿತಿ ಕೂಡಾ ರಚನೆ ಮಾಡಲಾಗಿತ್ತು. ಆಯ್ಕೆಗೆ ಬಹಳ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗಿತ್ತು ಎಂದರು.
ಜನಪರವಾದ ಆಡಳಿತ ಕೊಟ್ಟವರು ಯಡಿಯೂರಪ್ಪ, ಅವರು ರೈತ ಪರ ನಾಯಕರಾದವರು. ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಯಡಿಯೂರಪ್ಪ ಹೆಸರು ಆಯ್ಕೆ ಮಾಡುವ ಅವಕಾಶ ಸಿಕ್ಕಿದ್ದು ಹೆಮ್ಮೆ ಎಂದು ಹೇಳಿದರು.
ಇದಕ್ಕೂ ಮುನ್ನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಶುಕ್ರವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿಉತ್ತಮ ಸಂಸದೀಯ ಪಟುವನ್ನು ಆಯ್ಕೆ ಮಾಡುವಂತೆ ಎಲ್ಲ ರಾಜ್ಯಗಳ ವಿಧಾನಸಭೆಯಲ್ಲಿಯೂ 'ಅತ್ಯುತ್ತಮ ಶಾಸಕ'ನನ್ನು ಪ್ರತಿ ವರ್ಷ ಗುರುತಿಸುವ ವ್ಯವಸ್ಥೆ ಇರಬೇಕು ಎಂದು ಓಂ ಬಿರ್ಲಾ ಹೇಳಿದ್ದರು. ಅಸ್ಸಾಂ, ಗುಜರಾತ್, ಜಾರ್ಖಂಡ್, ರಾಜಸ್ಥಾನ, ಉತ್ತರಾಖಂಡ ಮುಂತಾದ ಕಡೆ ಈ ಪದ್ಧತಿ ಇದೆ.
ರಾಜ್ಯ ವಿಧಾನಸಭೆಯಲ್ಲಿಯೂ 'ಅತ್ಯುತ್ತಮ ಶಾಸಕ ಪ್ರಶಸ್ತಿ' ನೀಡುವ ಸಂಬಂಧ ಜನವರಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಶಾಸಕರು ಮತಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳು, ಶಾಸಕರಾಗಿ ಪಡೆದಿರುವ ಅನುಭವ, ಸದನದಲ್ಲಿ ನಡೆಯುವ ಚರ್ಚೆಗಳಲ್ಲಿ ತೋರಿಸುವ ಕೌಶಲ, ಸದನದಲ್ಲಿ ಪ್ರಸ್ತಾಪಿಸುವ ವಿಷಯ ಹಾಗೂ ಅದರ ಗಂಭೀರತೆ, ಕನ್ನಡ ಭಾಷೆಯಲ್ಲಿನ ಹಿಡಿತ ಸೇರಿದಂತೆ ಸುಮಾರು ಹದಿನೈದು ಅಂಶಗಳನ್ನು ಈ ಪ್ರಶಸ್ತಿಗೆ ಶಾಸಕರ ಆಯ್ಕೆಗೆ ಪರಿಗಣಿಸಲಾಗುತ್ತದೆ.
ವಿಧಾನಸಭೆ ಸ್ಪೀಕರ್, ಆಯ್ಕೆ ಸಮಿತಿಗೆ ಅಧ್ಯಕ್ಷರಾಗಿರುತ್ತಾರೆ. ಮುಖ್ಯಮಂತ್ರಿ, ವಿಧಾನಸಭೆ ಉಪಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರಿಂದ ನಾಮನಿರ್ದೇಶನ ಮಾಡಲಾದ ಒಬ್ಬ ಸದಸ್ಯರು ಸಮಿತಿಯಲ್ಲಿ ಇರುತ್ತಾರೆ. ವಿಧಾನಸಭೆ ಕಾರ್ಯದರ್ಶಿ ಈ ಸಮಿತಿಯ ಕಾರ್ಯದರ್ಶಿಯಾಗಿರುತ್ತಾರೆ.
ಈ ಸಮಿತಿ ರಚನೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ ಅವರು ಈಗ ಕೇವಲ ಶಾಸಕರಾಗಿರುವುದರಿಂದ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.