ಆ್ಯಪ್ನಗರ

ಶಿಸ್ತಿನ ಸಿಪಾಯಿಯಂತೆ ಯಡಿಯೂರಪ್ಪ ಕೆಲಸ ಮಾಡಿದ್ದಾರೆ: ಅಶೋಕ

ಹಂಗಾಮಿ ಸಿಎಂ ಆಗಿ ಕೆಲಸ ನಿರ್ವಹಿಸಿ ಎಂದು ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಹೇಳಿದ್ದಾರೆ. ಶಾಸಕರು, ಸಚಿವರು ಜತೆಗೂ ಮಾತನಾಡಿದ್ದಾರೆ ಎಂದು ಅಶೋಕ್‌ ತಿಳಿಸಿದರು.

Vijaya Karnataka Web 26 Jul 2021, 3:36 pm
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್‌ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದು ಅದನ್ನು ಅಂಗೀಕರಿಸಲಾಗಿದೆ. ಈಗ ಯಡಿಯೂರಪ್ಪ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶಾಸಕ ಆರ್‌ ಅಶೋಕ್‌ ತಿಳಿಸಿದ್ದಾರೆ.
Vijaya Karnataka Web ಆರ್‌ ಅಶೋಕ್‌
ಆರ್‌ ಅಶೋಕ್‌


ಹಂಗಾಮಿ ಮುಖ್ಯಮಂತ್ರಿ ಜತೆ ಸಭೆ ನಡೆಸಿದ ನಂತರ ಬಳಿಕ ಸುದ್ದಿಗಾರರೊಂದಿಗೆ ಅಶೋಕ್‌ ಮಾತನಾಡಿದರು.

ಹಂಗಾಮಿ ಸಿಎಂ ಆಗಿ ಕೆಲಸ ನಿರ್ವಹಿಸಿ ಎಂದು ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಹೇಳಿದ್ದಾರೆ. ಶಾಸಕರು, ಸಚಿವರು ಜತೆಗೂ ಮಾತನಾಡಿದ್ದಾರೆ ಎಂದು ತಿಳಿಸಿದರು.

ಹೈಕಮಾಂಡ್ ಏನ್ ಹೇಳಿದೆಯೋ ಅದನ್ನು ಸಿಎಂ ಮಾಡಿದ್ದಾರೆ. ಬಿಜೆಪಿ ಶಿಸ್ತಿನ ಸಿಪಾಯಿಯಾಗಿ ಈ ಕೆಲಸ ಮಾಡಿದ್ದಾರೆ. ಅವರು ಎಂದೆಂದಿಗೂ ಬಿಜೆಪಿಯ ಆಸ್ತಿ ಎಂದು ಅಶೋಕ್‌ ತಿಳಿಸಿದರು.

ಮುಂದಿನ ಮುಖ್ಯಮಂತ್ರಿ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಅವರು ಯಾರನ್ನು ಘೋಷಣೆ ಮಾಡುತ್ತಾರೋ ಅವರ ಜೊತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಎಲ್ಲರಿಗೂ ಮುಖ್ಯಮಂತ್ರಿ ಆಗೋ ಆಕಾಂಕ್ಷೆ ಇರುತ್ತದೆ. ಎಲ್ಲರೂ ಸಮರ್ಥರಿದ್ದಾರೆ. ಎಂದು ಪರೋಕ್ಷವಾಗಿ ನಾನು ಸಿಎಂ ಅಭ್ಯರ್ಥಿ ಎಂದು ಅಶೋಕ್ ಹೇಳಿದರು.

ಹೈ ಕಮಾಂಡ್ ತೀರ್ಮಾನವೇ ಅಂತಿಮವಾಗಿತ್ತದೆ. ಬಿಜೆಪಿ ಎಲ್ಲರ ಪಾರ್ಟಿ, ಎಲ್ಲಾ ಸಮುದಾಯದ ಪಾರ್ಟಿ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ಯಾರು ಸಿದ್ಧರೋ ಅಂತಹವರನ್ನು ಸಿಎಂ ಮಾಡ್ತಾರೆ ಎಂದು ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ