ಆ್ಯಪ್ನಗರ

ಅಕ್ರಮ ಡಿನೋಟಿಫಿಕೇಷನ್: ಕೆಲವೇ ಕ್ಷಣದಲ್ಲಿ ಸುಪ್ರೀಂನಲ್ಲಿ ಬಿಎಸ್‌ವೈ ಅರ್ಜಿ ವಿಚಾರಣೆ

ಅಕ್ರಮ ಡಿನೋಟಿಫಿಕೇಷನ್ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಸುಪ್ರೀಂ ಕೋರ್ಟ್‌ನಲ್ಲಿಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಬುಧವಾರ ನಡೆಯಲಿದೆ.

Vijaya Karnataka Web 27 Jan 2021, 1:53 pm

ಹೈಲೈಟ್ಸ್‌:

  • ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಆರೋಪ
  • ಕೆಲವೇ ಕ್ಷಣದಲ್ಲಿ ಸುಪ್ರೀಂನಲ್ಲಿ ಬಿಎಸ್‌ವೈ ಅರ್ಜಿ ವಿಚಾರಣೆ
  • ದೇವನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿನ ಡಿನೋಟಿಫಿಕೇಷನ್‌ ಪ್ರಕರಣ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು ಇದರ ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ.
ಅಕ್ರಮ ಡಿನೋಟಿಫೈ ಮಾಡಿರುವ ಆರೋಪದಲ್ಲಿ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಎಸ್‌ವೈ ಹಾಗೂ ಸಚಿವ ಮುರುಗೇಶ್ ನಿರಾಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಬಿಎಸ್‌ವೈ ವಿರುದ್ಧ ಕಾಂಗ್ರೆಸ್‌ಗೆ ಸಿಕ್ತು ಡಿನೋಟಿಫಿಕೇಷನ್ ಅಸ್ತ್ರ, ಹೋರಾಟ ತೀವ್ರಗೊಳಿಸಲು ನಿರ್ಧಾರ

ದೇವನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ಸಹಿ ಬಳಸಿಕೊಂಡು ಭೂಮಿಯನ್ನು ಹಿಂದಕ್ಕೆ ಪಡೆದಿರುವ ವಿಚಾರವಾಗಿ ಉದ್ಯಮಿ ಆಲಂ ಪಾಷಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.

ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದು ಮಾಡುವಂತೆ ಕೋರಿಬಿಎಸ್‌ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೆ ಜ. 5ರಂದು ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಅರ್ಜಿ ವಜಾ ಜೊತೆಗೆ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ ಅವರ ವಿಚಾರಣೆಗೆ ಆದೇಶಿಸಿತ್ತು.

ಇದೀಗ ಇದನ್ನು ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕದತಟ್ಟಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ, ನ್ಯಾಯಮೂರ್ತಿ ಎಎಸ್ ಬೋಪಣ್ಣ, ನ್ಯಾಯಮೂರ್ತಿ ವಿ. ರಾಮಸುಬ್ರಹ್ಮಣ್ಯಂ ಅವರ ನ್ಯಾಯಪೀಠ ಬುಧವಾರ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ