ಆ್ಯಪ್ನಗರ

ಅಮಿತ್ ಶಾ ರಾಜ್ಯ ಭೇಟಿ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಎಂದ ಬಿಎಸ್‌ವೈ

ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 15 Jan 2021, 1:31 pm
ಬೆಂಗಳೂರು: ಸಂಪುಟ ವಿಸ್ತರಣೆಯ ಬಳಿಕ ಇದೀಗ ಖಾತೆ ಹಂಚಿಕೆ ಕಸರತ್ತು ಶುರುವಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಬಿಎಸ್‌ವೈ ಮುಂದಾಗಿದ್ದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web BS Yediyurappa11


ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, 16 ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಾರೆ. ಭದ್ರಾವತಿ ಹಾಗೂ ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಅಮಿತ್ ಶಾ ಹಾಗೂ ನಿತಿನ್ ಗಡ್ಕರಿ ಭೇಟಿ ಬಳಿಕ ಖಾತೆ ಸಂಚಿಕೆ ಮಾಡಲಾಗುವುದು ಎಂದರು.

ಸಂಪುಟ ಸಂಕಷ್ಟ: ಸಿ.ಪಿ ಯೋಗೇಶ್ವರ್ ವಿರುದ್ಧ ಅರುಣ್ ಸಿಂಗ್‌ಗೆ ಎಂ.ಪಿ ರೇಣುಕಾಚಾರ್ಯ ದೂರು!

ಇದಕ್ಕೂ ಮುನ್ನ ಕೇಂದ್ರ ಭೂಸಾರಿಗೆ ಮಂತ್ರಾಲಯದ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ (ರಾಷ್ಟ್ರೀಯ ಹೆದ್ದಾರಿ) ವತಿಯಿಂದ ಆಯೋಜಿಸಿರುವ " ಹುಬ್ಬಳಿ – ಧಾರವಾಡ ಎಲಿವೇಟೆಡ್ ಕಾರಿಡಾರ್"ನ ಶಂಕುಸ್ಥಾಪನೆ ಕಾರ್ಯವನ್ನು ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸಚಿವ ನಿತಿನ್ ಜೊತೆಗೆ ಚರ್ಚೆ ನಡೆಸಲಾಗಿದೆ. ಹೆದ್ದಾರಿ ವಿಚಾರವಾಗಿ ರಾಜ್ಯಕ್ಕೆ ಏನೇನು ಕೇಳಿದ್ದೇವೆ ಎಲ್ಲದಕ್ಕೂ ಅನುಮತಿ ನೀಡಿದ್ದಾರೆ. ಕಳೆದ 20-30 ವರ್ಷಗಳಲ್ಲಿ ಆಗದಂತಹ ರಾಷ್ಟ್ರೀಯ ಹೆದ್ದಾರಿ ಕೆಲಸ ಈಗ ನಡೆದಿದೆ. ನಮ್ಮ ಬೇಡಿಕೆಗಳಿಗೆ ಮಂಜೂರಾತಿ ಕೊಡಲು ಸಮ್ಮಿತಿಸಿದ್ದಾರೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ