ಆ್ಯಪ್ನಗರ

15 ಜಿಲ್ಲೆಗಳ ಲಾಕ್‌ಡೌನ್‌ ಭವಿಷ್ಯ ಇಂದು ನಿರ್ಧಾರ: ಡಿಸಿಗಳ ಜತೆ ಬಿಎಸ್​ವೈ ಸಭೆ

ರಾಜ್ಯದ ಇತರೆ 15 ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿಯಿಂದಲೇ ಲಾಕ್‌ಡೌನ್‌ ಜಾರಿಗೊಳಿಸಬೇಕೇ ಬೇಡವೇ ಎಂಬುದನ್ನು ರಾಜ್ಯ ಸರಕಾರ ಸೋಮವಾರ ನಿರ್ಧರಿಸಲಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಎಸ್‌ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಈ ಕುರಿತಾಗಿ ಸಭೆ ನಡೆಸಲಿದ್ದಾರೆ.

Vijaya Karnataka Web 13 Jul 2020, 7:09 am
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಂತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ರಾಜ್ಯದ ಇತರೆ 15 ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿಯಿಂದಲೇ ಲಾಕ್‌ಡೌನ್‌ ಜಾರಿಗೊಳಿಸಬೇಕೇ ಬೇಡವೇ ಎಂಬುದನ್ನು ರಾಜ್ಯ ಸರಕಾರ ಸೋಮವಾರ ನಿರ್ಧರಿಸಲಿದೆ.
Vijaya Karnataka Web bs yediyurappa


500ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿರುವ ಜಿಲ್ಲೆಗಳಲ್ಲಿ ಅತ್ಯಂತ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಜಿಲ್ಲೆಗಳಲ್ಲಿ ಸೋಂಕಿನ ಸರಣಿ ಇದೇ ರೀತಿ ಮುಂದುವರಿದರೆ ನಿರ್ವಹಣೆ ಅಸಾಧ್ಯವೆಂಬುದು ಸರಕಾರಕ್ಕೆ ಮನದಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಎಸ್‌ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಾಸ್ತವ ಪರಿಸ್ಥಿತಿ ತಿಳಿದುಕೊಳ್ಳಲಿದ್ದಾರೆ.

ಕೋವಿಡ್‌ ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಚರ್ಚೆ ನಡೆಯಲಿದೆ. ಬೆಳಗ್ಗೆ ಮತ್ತು ಮಧ್ಯಾಹ್ನದ ಬಳಿಕ ಎರಡು ಹಂತಗಳಲ್ಲಿ ಸಭೆ ನಡೆಯಲಿದೆ.
ಬೆಂಗಳೂರಿನಲ್ಲಿ 12 ದಿನದಲ್ಲಿ 13,826 ಜನರಿಗೆ ಕೊರೊನಾ ಪಾಸಿಟಿವ್: 179 ಮಂದಿ ಸಾವು

ಸಭೆ ಬಳಿಕ ತೀರ್ಮಾನ
ಜಿಲ್ಲಾಧಿಕಾರಿಗಳ ಜತೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಬಳಿಕ ಉಳಿದ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ತಿಳಿಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್‌ಡೌನ್‌ನ ಮಾರ್ಗಸೂಚಿಯೂ ಸೋಮವಾರವೇ ಬಿಡುಗಡೆಯಾಗಲಿದೆ.

ಬೆಂಗಳೂರನ್ನೇಕೆ ಲಾಕ್‌ಡೌನ್ ಮಾಡಬೇಕಾಯ್ತು?: ಹೆಚ್ಚಾಯ್ತು ಸರ್ಕಾರ-ಸಮಾಜದ ಜವಾಬ್ದಾರಿ!

ಯಾವ ಜಿಲ್ಲೆಗಳಲ್ಲಿ ಗಂಭೀರ?

ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಧಾರವಾಡ, ಯಾದಗಿರಿ, ಕಲಬುರಗಿ, ದಾವಣಗೆರೆ, ಬಳ್ಳಾರಿ, ಬೀದರ್‌, ವಿಜಯಪುರ, ಹಾಸನ, ಮಂಡ್ಯ, ರಾಯಚೂರು ಹಾಗೂ ಬೆಳಗಾವಿ.

ಹಲವು ಜಿಲ್ಲೆಗಳಲ್ಲಿ ಒತ್ತಡ
ತಮ್ಮಲ್ಲೂ ಲಾಕ್‌ಡೌನ್‌ ಮಾಡುವಂತೆ ಹಲವು ಜಿಲ್ಲೆಗಳಲ್ಲಿ ಆಗ್ರಹ ಕೇಳಿ ಬಂದಿದ್ದು, ಕೆಲವು ಕಡೆ ಜನರೇ ಸ್ವಯಂಪ್ರೇರಣೆಯಿಂದ ವ್ಯಾಪಾರ ವಹಿವಾಟು ಬಂದ್‌ಗೆ ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು 8 ದಿನ ಮುಚ್ಚಲು ನಿರ್ಧರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ