ವಿಶ್ವಾಸ ಪರೀಕ್ಷೆ ಗೆದ್ದ ಬಿಎಸ್ವೈ: ಪ್ರತಿಪಕ್ಷಕ್ಕೆ ಮುಖಭಂಗ, ಆರು ತಿಂಗಳು ಸರಕಾರ ಸೇಫ್
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡಿಸಿದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲಿ ತಡ ರಾತ್ರಿವರೆಗೂ ಚರ್ಚೆ ನಡೆದಿದ್ದು, ಸರಕಾರದ ವಿರುದ್ಧದ ಆರೋಪದ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಉತ್ತರ ನೀಡಿದರು.
Vijaya Karnataka Web 26 Sep 2020, 11:53 pm
ಬೆಂಗಳೂರು: ಪ್ರತಿಪಕ್ಷ ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯದ ವಿರುದ್ಧ ರಾಜ್ಯ ಸರಕಾರ ಜಯ ಗಳಿಸಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡಿಸಿದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲಿ ತಡ ರಾತ್ರಿವರೆಗೂ ಚರ್ಚೆ ನಡೆದಿದ್ದು, ಸರಕಾರದ ವಿರುದ್ಧದ ಆರೋಪದ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಉತ್ತರ ನೀಡಿದರು.
ಕೋವಿಡ್ ಕಾರಣಕ್ಕಾಗಿ ಅವಿಶ್ವಾಸ ನಿರ್ಣಯವನ್ನು ಧ್ವನಿ ಮತಕ್ಕೆ ಹಾಕಿದರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ .
ಕೊನೆಯಲ್ಲಿ ಧ್ವನಿಮತದ ಮೂಲಕ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಬಿಡಿಎ ಹಗರಣದ ಬಗ್ಗೆ ತನಿಖೆ ನಡೆಸಬೇಕೆಂಬ ಕಾಂಗ್ರೆಸ್ ಆಗ್ರಹವನ್ನು ಸರಕಾರ ನಿರಾಕರಿಸಿದೆ.
ಮುಂದಿನ ಆರು ತಿಂಗಳುಗಳ ಕಾಲ ಬಿಎಸ್ ಯಡಿಯೂರಪ್ಪ ಸರ್ಕಾರ ಸುಭದ್ರವಾಗಿದೆ.
ಡಿಜೆ ಹಳ್ಳಿ ಘಟನೆ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಸುದೀರ್ಘ ಉತ್ತರ ನೀಡಿದ್ದು, ಇದರಲ್ಲಿ ಸರಕಾರದ ವೈಫಲ್ಯ ಆಗಿಲ್ಲ. ಪ್ರಚೋದನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲ ತಾಣದಲ್ಲಿ ಪರಸ್ಪರ ಶೇರ್ ಮಾಡಿದ್ದು, ಪ್ರಕರಣ ಉದ್ವಿಗ್ನಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಹೇಳಿದರು. ದುಷ್ಕರ್ಮಿಗಳು ಶಾಸಕರ ಮನೆಗೆ ದಾಳಿ ನಡೆಸಿ ಬೆಂಕಿ ಹಚ್ಚಿದರು. ಕೆಜಿ ಹಳ್ಳಿ ಪೊಲೀಸ್ ಠಾಣೆಗೂ ಹಾನಿ ಮಾಡಿದ್ದರು ಎಂದರು. ಆರೋಪಿಯನ್ನು ತಮ್ಮ ಕೈಗೆ ಕೊಡಿ ಎಂದು ಗಲಾಟೆ ಮಾಡಿದರು. ಕೊಟ್ಟಿಲ್ಲ ಎಂಬ ಕಾರಣಕ್ಕೆ ಶಾಸಕರ ಮನೆ ಹಾಗೂ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು ಎಂದು ಪೊಲೀಸ್ ವರದಿಯನ್ನು ಸದನದಲ್ಲಿ ಓದಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡಿಸಿದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲಿ ತಡ ರಾತ್ರಿವರೆಗೂ ಚರ್ಚೆ ನಡೆದಿದ್ದು, ಸರಕಾರದ ವಿರುದ್ಧದ ಆರೋಪದ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಉತ್ತರ ನೀಡಿದರು.
ಕೋವಿಡ್ ಕಾರಣಕ್ಕಾಗಿ ಅವಿಶ್ವಾಸ ನಿರ್ಣಯವನ್ನು ಧ್ವನಿ ಮತಕ್ಕೆ ಹಾಕಿದರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ .
ಕೊನೆಯಲ್ಲಿ ಧ್ವನಿಮತದ ಮೂಲಕ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಬಿಡಿಎ ಹಗರಣದ ಬಗ್ಗೆ ತನಿಖೆ ನಡೆಸಬೇಕೆಂಬ ಕಾಂಗ್ರೆಸ್ ಆಗ್ರಹವನ್ನು ಸರಕಾರ ನಿರಾಕರಿಸಿದೆ.
ಮುಂದಿನ ಆರು ತಿಂಗಳುಗಳ ಕಾಲ ಬಿಎಸ್ ಯಡಿಯೂರಪ್ಪ ಸರ್ಕಾರ ಸುಭದ್ರವಾಗಿದೆ.
ಡಿಜೆ ಹಳ್ಳಿ ಘಟನೆ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಸುದೀರ್ಘ ಉತ್ತರ ನೀಡಿದ್ದು, ಇದರಲ್ಲಿ ಸರಕಾರದ ವೈಫಲ್ಯ ಆಗಿಲ್ಲ. ಪ್ರಚೋದನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲ ತಾಣದಲ್ಲಿ ಪರಸ್ಪರ ಶೇರ್ ಮಾಡಿದ್ದು, ಪ್ರಕರಣ ಉದ್ವಿಗ್ನಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಹೇಳಿದರು. ದುಷ್ಕರ್ಮಿಗಳು ಶಾಸಕರ ಮನೆಗೆ ದಾಳಿ ನಡೆಸಿ ಬೆಂಕಿ ಹಚ್ಚಿದರು. ಕೆಜಿ ಹಳ್ಳಿ ಪೊಲೀಸ್ ಠಾಣೆಗೂ ಹಾನಿ ಮಾಡಿದ್ದರು ಎಂದರು. ಆರೋಪಿಯನ್ನು ತಮ್ಮ ಕೈಗೆ ಕೊಡಿ ಎಂದು ಗಲಾಟೆ ಮಾಡಿದರು. ಕೊಟ್ಟಿಲ್ಲ ಎಂಬ ಕಾರಣಕ್ಕೆ ಶಾಸಕರ ಮನೆ ಹಾಗೂ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು ಎಂದು ಪೊಲೀಸ್ ವರದಿಯನ್ನು ಸದನದಲ್ಲಿ ಓದಿದರು.