ಆ್ಯಪ್ನಗರ

ದೋಸ್ತಿಗೆ ಮತ್ತೊಂದು ಆಘಾತ: ಮಾಯಾವತಿ ಸೂಚನೆಯಂತೆ ತಟಸ್ಥವಾಗಿರಲು ಎನ್.ಮಹೇಶ್ ನಿರ್ಧಾರ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ತಟಸ್ಥವಾಗಿರಲು ಬಿಎಸ್‌ಪಿ ಶಾಸಕ ಎನ್ ಮಹೇಶ್ ನಿರ್ಧರಿಸಿದ್ದಾರೆ.

TIMESOFINDIA.COM 21 Jul 2019, 7:57 pm
ಬೆಂಗಳೂರು: ಪಕ್ಷದ ವರಿಷ್ಠೆ ಮಾಯಾವತಿ ನಿರ್ದೇಶನದಂತೆ ಸೋಮವಾರ ನಡೆಯುವ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಬಿಎಸ್‌ಪಿ ಶಾಸಕ ಎನ್ ಮಹೇಶ್, ದೋಸ್ತಿ ಸರಕಾರಕ್ಕೆ ಮತ್ತೊಂದು ಆಘಾತ ನೀಡಿದ್ದಾರೆ.
Vijaya Karnataka Web bsp


ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ತಟಸ್ಥವಾಗಿರುವಂತೆ ಪಕ್ಷದ ವರಿಷ್ಠೆ ಮಾಯಾವತಿ ಅವರು ಸೂಚಿಸಿದ್ದು, ಅದನ್ನು ಪಾಲಿಸುತ್ತೇನೆ ಎಂದು ತಿಳಿಸಿದ್ದಾರೆ.

16 ಶಾಸಕರ ರಾಜೀನಾಮೆಯಿಂದ ಸಂಕಷ್ಟದಲ್ಲಿರುವ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರಕಾರಕ್ಕೆ ಎನ್ ಮಹೇಶ್ ಬೆಂಬಲ ಬಹುಮುಖ್ಯವಾಗಿದೆ. ಆದರೆ, ಅವರು ತಟಸ್ಥ ನಿಲುವು ತೆಗೆದುಕೊಳ್ಳುತ್ತಿರುವುದು ಸಮ್ಮಿಶ್ರ ಸರಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ.

ಮೈತ್ರಿ ಸರಕಾರ ರಚನೆಯಾದ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್ ಮಹೇಶ್ ಅವರು, ಕೆಲ ದಿನಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ