ಆ್ಯಪ್ನಗರ

ಸಿಎಂ ಸಿದ್ದರಾಮಯ್ಯ ಕಮೀಷನ್‌ ಏಜೆಂಟ್‌: ಯಡಿಯೂರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

Vijaya Karnataka Web 26 Oct 2017, 6:54 pm
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಮೀಷನ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಲೋಕೋಪಯೋಗಿ, ನೀರಾವರಿ ಹೀಗೆ ಯಾವುದೇ ಇಲಾಖೆಗಳ ಯೋಜನೆಗಳ ಅಂದಾಜು ವೆಚ್ಚ ನೋಡಿದರೆ ಅವರ ಕಮೀಷನ್ ವ್ಯವಹಾರ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ.
Vijaya Karnataka Web bsy attacks cm siddaramaiah
ಸಿಎಂ ಸಿದ್ದರಾಮಯ್ಯ ಕಮೀಷನ್‌ ಏಜೆಂಟ್‌: ಯಡಿಯೂರಪ್ಪ


ಮೈಸೂರು ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ನಡೆದ ರೈತ ಸಮಾವೇಶದಲ್ಲಿ ಬಿ.ಎಸ್‌. ಯಡಿಯೂರಪ್ಪ ಭಾಷಣ ಮಾಡಿದರು.

ಯೋಜನೆಯ ಅಂದಾಜು ವೆಚ್ಚವನ್ನೇ ಶೇ.25 ರಿಂದ 30ರಷ್ಟು ಹೆಚ್ಚಿಸಿ ಗೋಲ್‌ಮಾಲ್ ಮಾಡಿ ಸಿದ್ದರಾಮಯ್ಯ ಅವರು ಕಮೀಷನ್ ಪಡೆದ ಮೇಲೆ ಗುತ್ತಿಗೆ ಮಂಜೂರು ಮಾಡಲಾಗುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಅಂದಾಜು ವೆಚ್ಚ ನಿರ್ಧರಿಸುವಾಗ ಗೋಲ್‌ಮಾಲ್ ಆಗಬಾರದೆಂದು ಅಂದಾಜು ವೆಚ್ಚಗಳನ್ನು ನಿರ್ಧರಿಸಲು ಸಮಿತಿ ರಚಿಸಿದ್ದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.


ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ತುಘಲಕ್ ದರ್ಬಾರ್ ಆಗಿದೆ. ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಕಾರ್ನರ್ ಸೈಟುಗಳನ್ನು ಬ್ಯಾಂಕುಗಳಲ್ಲಿ ಅಡವಿಟ್ಟು ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ ಎಂದು ಬಿಎಸ್‌ವೈ ಆರೋಪಿಸಿದರು.

ಬಿಜೆಪಿಯ ಪರಿವರ್ತನಾ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಸರಕಾರದ ಹಗರಣಗಳನ್ನು ಬಯಲು ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ರಸ್ತೆಯಲ್ಲಿ ಹರಾಜು ಹಾಕುತ್ತೇವೆ ಎಂದು ಯಡಿಯೂರಪ್ಪ ಗುಡುಗಿದರು.

ಸಿದ್ದರಾಮಯ್ಯ ಅವರನ್ನು ದೇವರು ಕ್ಷಮಿಸಿದರೂ ಜನರು ಕ್ಷಮಿಸಬಾರದು. ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲ್ಲಬಾರದು. ಆ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತರು ವಹಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.

ಮಾಜಿ ಸಚಿವರಾದ ವಿ.ಶ್ರೀನಿವಾಸಪ್ರಸಾದ್, ಶ್ರೀರಾಮುಲು, ಬಿ.ಜೆ.ಪುಟ್ಟಸ್ವಾಮಿ, ಸಂಸದ ಪ್ರತಾಪ ಸಿಂಹ ಮತ್ತಿತರ ನಾಯಕರು ಭಾಗವಹಿಸಿದ್ದರು.

BSY Attacks Cm Siddaramaiah

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ