ಆ್ಯಪ್ನಗರ

ನಮ್ಮದೇ ಸರಕಾರ ಎಂದು ಬಿಎಸ್‌ವೈ ಪುನರುಚ್ಚಾರ: ಇಂದು ದೆಹಲಿಗೆ ಪ್ರಯಾಣ ಸಾಧ್ಯತೆ

''ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣಾ ಫಲಿತಾಂಶ ಮಂಗಳವಾರ ಹೊರಬೀಳಲಿದ್ದು ನಾವು ಸರಕಾರ ರಚಿಸುವುದು ನೂರಕ್ಕೆ ನೂರರಷ್ಟು ...

Vijaya Karnataka 15 May 2018, 7:49 am
ಬೆಂಗಳೂರು: 'ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣಾ ಫಲಿತಾಂಶ ಮಂಗಳವಾರ ಹೊರಬೀಳಲಿದ್ದು ನಾವು ಸರಕಾರ ರಚಿಸುವುದು ನೂರಕ್ಕೆ ನೂರರಷ್ಟು ನಿಶ್ಚಿತ,' ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌.ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.
Vijaya Karnataka Web bsy


ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು 'ಬಿಜೆಪಿಗೆ 120 ರಿಂದ 130 ಸ್ಥಾನಗಳು ಲಭ್ಯವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಫಲಿತಾಂಶ ಬಂದ ಬಳಿಕ ಸಂಜೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದಿನಾಂಕ ನಿಗದಿಪಡಿಸಲಾಗುವುದು,' ಎಂದರು.

'ಕಳೆದ 45 ವರ್ಷಗಳ ರಾಜಕಾರಣದಲ್ಲಿ ಈ ರೀತಿಯ ಯಾವತ್ತೂ ಕೆಲಸ ಮಾಡಿದ ಉದಾಹರಣೆಗಳು ಇಲ್ಲ. ಕೇಂದ್ರದ ನಾಯಕರು ಸಹ ನಮ್ಮ ಕೆಲಸದ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಚುನಾವಣೆಗಳಲ್ಲಿ ಕಾರ್ಯಕರ್ತರು ಇಷ್ಟೊಂದು ಶ್ರಮ ಹಾಕಿರಲಿಲ್ಲ. ಹೀಗಾಗಿ ನಮಗೆ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಅವರು ಚುನಾವಣೆ ಗೆಲ್ಲುವುದು ಇಲ್ಲವೇ ಮುಖ್ಯಮಂತ್ರಿ ಅಗುವುದು ಮುಖ್ಯವಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಹದಗೆಡಿಸಿರುವ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ, ನನಗೆ ಜೀವನದಲ್ಲಿ ಏನೂ ಆಸೆ ಇಲ್ಲ. ಮೋದಿ ಹಾಗೂ ಅಮಿತ್‌ ಶಾ ಅವರು ತಮ್ಮ ಮೇಲಿಟ್ಟಿರುವ ಭರವಸೆ ಈಡೇರಿಸಬೇಕಾಗಿದೆ,' ಎಂದು ಯಡಿಯೂರಪ್ಪ ಅವರು ಹೇಳಿದರು. ದಲಿತ ಮುಖ್ಯಮಂತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಯಾವುದೇ ಉತ್ತರ ಕೊಡಲು ನಿರಾಕರಿಸಿದರು.

Also Read: Karnataka Chunavane Phalitamsha

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ