ಆ್ಯಪ್ನಗರ

ಪ್ರಮಾಣವಚನ: ಹೊರಟ್ಟಿಗೆ ಖುದ್ದು ಆಹ್ವಾನ ನೀಡಿದ ಬಿಎಸ್‌ವೈ

ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಹಿರಿಯ ಬಿಜೆಪಿ ನಾಯಕ ಬಿ.ಎಸ್‌ ಯಡಿಯೂರಪ್ಪ, ಜೆಡಿಎಸ್‌ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರಿಗೆ ಖುದ್ದಾಗಿ ಕರೆ ಮಾಡಿ ಪ್ರಮಾಣವಚನ ಸಮಾರಂಭಕ್ಕೆ ಕುಟುಂಬ ಸಮೇತ ಹಾಜರಾಗುವಂತೆ ಆಹ್ವಾನಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

Vijaya Karnataka Web 26 Jul 2019, 1:18 pm
ಹುಬ್ಬಳ್ಳಿ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ‌ಕಳೆದುಕೊಂಡು ಪತನವಾಗಿದ್ದು,‌ ಬಿ.ಎಸ್.ಯಡಿಯೂರಪ್ಪ ನಾಲ್ಕನೆಯ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.
Vijaya Karnataka Web BSY and Horatti


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಲಿರುವ ಯಡಿಯೂರಪ್ಪ ಅವರು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿಯವರಿಗೆ ಪ್ರಮಾಣ ವಚನಕ್ಕೆ ಆಗಮಿಸುವಂತೆ ಬುಲಾವ್ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಕುತೂಹಲ ಸೃಷ್ಟಿಸುತ್ತಿದೆ.

ದೂರವಾಣಿ ಮೂಲಕ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ ಯಡಿಯೂರಪ್ಪ ಅವರು ಕೂಡಲೇ ತಮ್ಮ ಕುಟುಂಬ ಸಮೇತವಾಗಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಹೊರಟ್ಟಿಯವರು ಯಡಿಯೂರಪ್ಪ ಅವರಿಗೆ‌ ದೇವರು ಒಳ್ಳೆಯದು ಮಾಡಲಿ ಮುಳ್ಳಿನ ಹಾದಿಯಂತಿದೆ ನಿಮ್ಮ ಅಧಿಕಾರದ ಪ್ರಸ್ತುತ ಸ್ಥಿತಿ ಎಂದು ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ