ಆ್ಯಪ್ನಗರ

ಬಜೆಟ್‌ ಬಗ್ಗೆ ಸಚಿವರೊಂದಿಗೆ ಸಭೆ : ಡಿಸಿಎಂ

ಮುಂದಿನ ಬಜೆಟ್‌ ಆದ್ಯತೆ ಬಗ್ಗೆ ಚರ್ಚಿಸಲು ಪಕ್ಷದ ಸಚಿವರೊಂದಿಗೆ ಸಭೆ ನಡೆಸಲಾಯಿತು ಎಂದು ಡಿಸಿಎಂ ಜಿಪರಮೇಶ್ವರ್‌ ತಿಳಿಸಿದ್ದಾರೆ...

Vijaya Karnataka Web 15 Jan 2019, 5:00 am
ಬೆಂಗಳೂರು : ಮುಂದಿನ ಬಜೆಟ್‌ ಆದ್ಯತೆ ಬಗ್ಗೆ ಚರ್ಚಿಸಲು ಪಕ್ಷದ ಸಚಿವರೊಂದಿಗೆ ಸಭೆ ನಡೆಸಲಾಯಿತು ಎಂದು ಡಿಸಿಎಂ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
Vijaya Karnataka Web paramewar


ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಚಿವರ ಸಭೆ ಬಳಿಕ ಮಾತನಾಡಿದ ಅವರು, ''ಫೆಬ್ರವರಿ ಮೊದಲ ವಾರ ಬಜೆಟ್‌ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸಚಿವರೊಂದಿಗೆ ಇಲಾಖಾವಾರು ಬೇಡಿಕೆ ಬಗ್ಗೆ ಸಮಾಲೋಚಿಸಲಾಯಿತು. ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿನ ಪ್ರಮುಖ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂಬ ನಿರ್ಧಾರ ಈಗಾಗಲೇ ಆಗಿದೆ. ಈ ಬಾರಿಯೂ ಈ ಸೂತ್ರದಂತೆ ನಡೆದುಕೊಳ್ಳಲಾಗುತ್ತದೆ. ಜತೆಗೆ ಕಾಂಗ್ರೆಸ್‌ ತತ್ವ, ಸಿದ್ಧಾಂತ ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವ ಸಲಹೆ ಬಂದಿದೆ,'' ಎಂದರು.

''ರೈತರ ಸಾಲ ಮನ್ನಾಕ್ಕೆ ನಿರ್ದಿಷ್ಟ ಹಣ ಮೀಸಲಿಡಬೇಕಾಗುತ್ತದೆ. ಇದರ ಹೊರತಾಗಿ ಇಲಾಖೆಗಳ ಮಹತ್ವದ ಯೋಜನೆಗಳ ಪಟ್ಟಿ ನೀಡುವಂತೆ ಸಚಿವರಿಗೆ ಸೂಚಿಸಲಾಗಿದೆ. ಸಚಿವರುಗಳ ಬೇಡಿಕೆಯನ್ನು ಸಿಎಂ ಅವರ ಗಮನಕ್ಕೆ ತರಲಾಗುವುದು,'' ಎಂದು ಹೇಳಿದರು.

ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಜತೆಗೆ ಕಾಂಗ್ರೆಸ್‌ನ ಬಹುತೇಕ ಸಚಿವರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ